Sunday, September 26, 2010

ತಿಪ್ಪಗೊಂಡನಹಳ್ಳಿಗೆ 3, ಹೆಸರಘಟ್ಟಕ್ಕೆ 6 ಅಡಿ ನೀರು

ನಗರ ಹಾಗೂ ಸುತ್ತಮುತ್ತ ಮೂರು ದಿನದಿಂದ ಸುರಿಯುತ್ತಿರುವ ಮಳೆಯಿಂದ ಕೆಲವು ಭಾಗಗಳಲ್ಲಿ ಸಮಸ್ಯೆ ಎದುರಾಗಿ ಬೇಸರಕ್ಕೆ ಕಾರಣವಾಗಿದ್ದರೆ, ಮತ್ತೊಂದೆಡೆ ನಗರಕ್ಕೆ ಜಲಮೂಲವಾಗಿರುವ ತಿಪ್ಪಗೊಂಡನಹಳ್ಳಿ ಹಾಗೂ ಹೆಸರಘಟ್ಟಕ್ಕೆ ಹೆಚ್ಚಿನ ನೀರು ಹರಿದು ಸಂತಸ ಮೂಡಿಸಿದೆ.
ಹೆಸರಘಟ್ಟ ಅಣೆಕಟ್ಟು ಜಲಾನಯನ ಪ್ರದೇಶದಲ್ಲಿ ಶುಕ್ರವಾರ ರಾತ್ರಿ 129.5 ಮಳೆ ಸುರಿದಿದ್ದು, ಶನಿವಾರವೂ ಮಳೆಯಾಗಿತ್ತು. ನೀರಿನ ಹರಿವು ಹೆಚ್ಚಾದ್ದರಿಂದ, ಹೆಸರಘಟ್ಟ ಅಣೆಕಟ್ಟೆಯಲ್ಲಿ 6 ಅಡಿ ನೀರು ತುಂಬಿದೆ. ಅರ್ಕಾವತಿ ನದಿಯ ಹರಿವನ್ನೇ ಅವಲಂಬಿಸಿರುವ ಹೆಸರಘಟ್ಟ ಜಲಾಶಯಕ್ಕೆ ಇದೀಗ ಸುತ್ತಮುತ್ತಲಿನಿಂದ ಮಾತ್ರ ನೀರು ಹರಿದಿರುವುದರಿಂದ 6 ಅಡಿ ತುಂಬಿದೆ. ಇನ್ನೊಂದೆರಡು ದಿನ ಮಳೆ ಹೀಗೆ ಮುಂದುವರಿದರೆ, 10 ಅಡಿ ನೀರು ಸಂಗ್ರಹವಾಗಿ ದಾಖಲೆಯಾಗುವ ಸಾಧ್ಯತೆ ಇದೆ.
ಹೆಸರಘಟ್ಟದಲ್ಲಿ 6 ಅಡಿ ನೀರು ಬಂದಿರುವುದರಿಂದ ಆ ನೀರನ್ನು ಸರಬರಾಜು ಮಾಡಲು ಸಾಧ್ಯವೇನೂ ಇಲ್ಲ. ಆದರೆ, ಈ ಅಣೆಕಟ್ಟೆ ನೀರು ಇಲ್ಲದೆ ಸೊರಗುತ್ತಿದ್ದ ಸಂದರ್ಭದಲ್ಲಿ ಒಂದೇ ದಿನ ಸುಮಾರು ನಾಲ್ಕು ಅಡಿ ನೀರು ಬಂದಿರುವುದು ಸಂತಸಕರ ಎಂದು ಅಣೆಕಟ್ಟೆ ವ್ಯಾಪ್ತಿಯ ನೇತೃತ್ವ ವಹಿಸಿರುವ ಜಲಮಂಡಳಿಯ ಮುಖ್ಯ ಎಂಜಿನಿಯರ್ (ನಿರ್ವಹಣೆ) ಟಿ. ವೆಂಕಟರಾಜು ತಿಳಿಸಿದರು.
ಬೆಂಗಳೂರಿನ ಪಶ್ಚಿಮ ಭಾಗಕ್ಕೆ ಕುಡಿಯುವ ನೀರು ಒದಗಿಸುವ ತಿಪ್ಪಗೊಂಡನಹಳ್ಳಿಗೆ ಜಲಾಶಯಕ್ಕೆ ಶುಕ್ರವಾರ ಒಂದೇ ರಾತ್ರಿ ಸುಮಾರು ಮೂರು ಅಡಿ ನೀರು ಬಂದಿದೆ. ಶುಕ್ರವಾರ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಶಿವಗಂಗೆಯಲ್ಲಿ ಹುಟ್ಟುವ ಅರ್ಕಾವತಿಯ ಉಪನದಿ ಕುಮುದ್ವತಿ ಹರಿವು ಹೆಚ್ಚಾಗಿ ಈ ಸಂಗ್ರಹ ಸಾಧ್ಯವಾಗಿದೆ.
ತಿಪ್ಪಗೊಂಡನಹಳ್ಳಿ ಜಲಾಶಯದ ನೀರಿನ ಮಟ್ಟ ಸೆ.24 ರಂದು 13.6 ನೀರಿತ್ತು. ಸೆ.26 ಬೆಳಗ್ಗೆ ಈ ಮಟ್ಟ 13.6 ಅಡಿಗೆ ಹೆಚ್ಚಿದೆ. ಶಿವಗಂಗೆ ಸುತ್ತಮುತ್ತ ಮಳೆ ಹೆಚ್ಚಾದ್ದರಿಂದ ನೀರು ಹರಿವು ಹೆಚ್ಚಾಗಿದೆ. ಪ್ರತಿ ದಿನ 18 ದಶಲಕ್ಷ ಲೀಟರ್ ನೀರು ಇಲ್ಲಿಂದ ಪೂರೈಕೆಯಾಗುತ್ತಿದೆ. ವರುಣನ ಕೃಪೆ ಇದ್ದು ಮುಂದಿನ ಒಂದು ವಾರ ಈ ಪ್ರದೇಶದಲ್ಲಿ ಹೆಚ್ಚಿನ ಮಳೆಯಾದರೆ ಜಲಾಶಯಕ್ಕೆ ಇನ್ನಷ್ಟು ನೀರು ಬರುತ್ತದೆ. ಇದರಿಂದ ನಗರಕ್ಕೆ ಹೆಚ್ಚಿನ ನೀರು ಪೂರೈಸಬಹುದಾಗಿದೆ ಎಂದು ತಿಪ್ಪಗೊಂಡನಹಳ್ಳಿ ಜಲಾಶಯದ ನೇತೃತ್ವ ವಹಿಸಿರುವ ಜಲಮಂಡಳಿಯ ಅಪರ ಮುಖ್ಯ ಎಂಜಿನಿಯರ್ ರೂಪ್‌ಕುಮಾರ್ ತಿಳಿಸಿದರು.
ತಿಪ್ಪಗೊಂಡನಹಳ್ಳಿ ಹಾಗೂ ಹೆಸರಘಟ್ಟ ಜಲಾಶಯಗಳ ಜಲಮೂಲ ಅರ್ಕಾವತಿ ನದಿ. ಈ ನದಿ ಹರಿಸುವ ಪ್ರಯತ್ನ ಆರಂಭವಾಗಿದ್ದರೂ ಅದಕ್ಕೊಂದು ನಿರ್ದಿಷ್ಟ ರೂಪ ನೀಡುವಲ್ಲಿ ಎಲ್ಲರೂ ವಿಫಲರಾಗಿದ್ದಾರೆ. ಶಾಸಕ ವಿಶ್ವನಾಥ್ ನೇತೃತ್ವದಲ್ಲಿ ಶಾಸಕ ಮುನಿರಾಜು ನಂದಿಬೆಟ್ಟದಿಂದ ತಿಪ್ಪಗೊಂಡನಹಳ್ಳಿಯವರೆಗೆ ಪಾದಯಾತ್ರೆ ಮಾಡಿ ನದಿ ಹರಿಸಲು, ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದರು. ಈ ಪ್ರಯತ್ನಕ್ಕೆ ಸಂಸದ ಅನಂತಕುಮಾರ್ ಸೇರಿದಂತೆ ಸಚಿವರಾದ ಆರ್. ಅಶೋಕ್, ಸುರೇಶ್‌ಕುಮಾರ್ ಶಹಭ್ಬಾಸ್‌ಗಿರಿ ನೀಡಿ, ನದಿ ಪುನಶ್ಚೇತನದ ಭರವಸೆ ನೀಡಿದ್ದರು. ಆದರೆ ಈ ಪ್ರಕ್ರಿಯೆಯಲ್ಲ ಮುಗಿದು ಒಂದು ವರ್ಷವಾದರೂ ಈವರೆಗೆ ಯಾರೂ ನಿರ್ದಿಷ್ಟ ಹೆಜ್ಜೆ ಇರಿಸಿ ಕಾರ್ಯನಿರ್ವಹಿಸದಿರುವುದು ಶೋಚನೀಯ.

Saturday, May 29, 2010

ಅರ್ಕಾವತಿ ನದಿ ಪಾತ್ರ ಶುಚಿಗೆ ಮುಹೂರ್ತ

ಎಲ್ಲ ಒತ್ತುವರಿ ತೆರವುಗೊಳಿಸಲು ಜಲಮಂಡಲಿ ಸಚಿವರ ಕಟ್ಟಪ್ಟಣೆ
ಅರ್ಕಾವತಿ ನದಿ ಪಾತ್ರದ ಶುಚಿ ಕಾರ್ಯ ಕೂಡಲೇ ಪ್ರಾರಂಭ ಮಾಡಿ ನೀರು ಹರಿವಿಗೆ ತಡೆಯಾಗಿರುವ ಎಲ್ಲ ರೀತಿಯ ಒತ್ತುವರಿಯನ್ನೂ ತೆರವು ಮಾಡಬೇಕೆಂದು ಜಲಮಂಡಲಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕಟ್ಟಪ್ಪಣೆ ಮಾಡಿದ್ದಾರೆ. ಸೋಮವಾರದಿಂದ ಕಾಲುವೆ ಶುಚಿ ಆರಂಭವಾಗಲಿದೆ.
ನಂದಿಬೆಟ್ಟದ ತಪ್ಪಲಿನಿಂದ ಹೆಸರಘಟ್ಟ-ತಿಪ್ಪಗೊಂಡನಹಳ್ಳಿ ಜಲಾಶಯದವರೆಗಿನ ನದಿ ಪಾತ್ರದಲ್ಲಿರುವ ಹೂಳು, ಗಿಡ-ಮರಗಳನ್ನು ಗುರುವಾರದಿಂದಲೇ ತೆರವುಗೊಳಿಸಬೇಕು. ಕಾಲುವೆ ಒತ್ತುವರಿಯ ಕಟ್ಟಡ ಅಥವಾ ಇನ್ಯಾವುದೇ ರೀತಿಯ ತಡೆ ಬಂದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ನಗರ-ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಅರ್ಕಾವತಿ ನದಿ ಪಾತ್ರ ಈ ಮಳೆಗಾಲದಲ್ಲಿ ಕಾಣಬೇಕು. ಎಲ್ಲಿಯೂ ಒತ್ತುವರಿ ಉಳಿಸಬಾರದು. ಇದಕ್ಕೆ ಸಕ್ರಿಯ ಕಾಮಗಾರಿ ಕೂಡಲೇ ಆರಂಭವಾಗಬೇಕಾದ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳ ಸಮಿತಿಯನ್ನೂ ರಚಿಸಲಾಗಿದೆ. ಕಾವೇರಿ ಜಲನಿಗಮ, ಸಣ್ಣ ನೀರಾವರಿ, ಮಾಲಿನ್ಯ ನಿಯಂತ್ರಣ ಮಂಡಳಿ, ಭೂಗರ್ಭ ಇಲಾಖೆ, ನಗರ-ಗ್ರಾಮಾಂತರ, ರಾಮನಗರ ಜಿಲ್ಲಾಧಿಕಾರಿಗಳು ಈ ಸಮಿತಿಯಲ್ಲಿದ್ದು, ಜಲಮಂಡಳಿಯ ಮುಖ್ಯ ಎಂಜಿನಿಯರ್ ಬಸವರಾಜ್ ಸಮಿತಿಯ ಸಂಚಾಲಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಸಮಿತಿ ತತ್‌ಕ್ಷಣದಿಂದ ಕಾರ್ಯ ಆರಂಭಿಸಿದ್ದು, ನದಿಪಾತ್ರ ಸಮೀಕ್ಷೆ ನಡೆದಿದೆ. ಸೋಮವಾರದಿಂದ ಶುಚಿ ಕಾರ್ಯ ಆರಂಭವಾಗಲಿದೆ.
ಜಲಮಂಡಲಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಅರ್ಕಾವತಿ ನದಿ ಪುನಶ್ಚೇತನ ಪಾದಯಾತ್ರೆ ಉದ್ಘಾಟಿಸಿದ್ದ ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಮಂಗಳವಾರ ಭೇಟಿ ನೀಡಿದ್ದರು. ಜಲಾಶಯದಲ್ಲಿ ನೀರಿನ ಕೊರತೆ ಹಾಗೂ ಬೆಂಗಳೂರಿಗೆ ಭವಿಷ್ಯದಲ್ಲಿ ನೀರುಣಿಸುವ ದೂರದೃಷ್ಟಿಯ ಯೋಜನೆಯಡಿ ಅರ್ಕಾವತಿ ನದಿ ಪುನಶ್ಚೇತನಕ್ಕೆ ಒತ್ತು ನೀಡಲು ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು.
ಅರ್ಕಾವತಿ ನದಿ ಮೂಲದಲ್ಲಿ ಪಾದಯಾತ್ರೆಗೆ ಚಾಲನೆ ನೀಡಿ ಒಂದಷ್ಟು ದೂರ ನಡೆದಿದ್ದ ಸುರೇಶ್ ಕುಮಾರ್, ನದಿ ಪಾತ್ರದಲ್ಲಿ ಮಳೆ ಪ್ರಮಾಣ ಕಡಿಮೆ ಆಗಿಲ್ಲ. ಅದರ ಹರಿವು ವಿಮುಖವಾಗಿದೆ. ಅದನ್ನು ಸುಸ್ಥಿತಿಗೆ ತಂದು ನದಿ ಹರಿಯುವಂತೆ ಮಾಡಬೇಕು. ಈ ಮಳೆಗಾಲದಲ್ಲಿ ನದಿ ಪಾತ್ರ ಕಾಣುವಂತಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನದಿ ಪಾತ್ರ ಮಾಲಿನ್ಯಗೊಳಿಸುತ್ತಿರುವ ಕಾರ್ಖಾನೆಗಳನ್ನೂ ತೆರವುಗೊಳಿಸಲು ಮಾಲಿನ್ಯ ನಿಯಂತ್ರಣ ಮಂಡಳಿಯ ಗಮನಕ್ಕೆ ತಂದಾಗ, ೭೯ ಕಾರ್ಖಾನೆಗಳಿಗೆ ನೋಟಿಸ್ ನೀಡಲಾಗಿದೆ. ಅವುಗಳ ತೆರವು ಕಾರ್ಯ ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಮಂಡಲಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
“ಅರ್ಕಾವತಿ ನದಿ ಪುನಶ್ಚೇತನಕ್ಕೆ ನಾವು ಬದ್ಧರಾಗಿದ್ದೇವೆ. ಒತ್ತುವರಿಯನ್ನು ಸಂಪೂರ್ಣ ರೀತಿಯಲ್ಲಿ ತೆರವುಗೊಳಿಸಲು ಹಾಗೂ ಸಮಗ್ರ ರೀತಿಯಲ್ಲಿ ಕಾಮಗಾರಿ ನಡೆಸಲು ಕೆಲವು ಅಧಿಕಾರಗಳ ಅಗತ್ಯವಿದೆ. ಇದಕ್ಕಾಗಿ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಒಂದೆರಡು ದಿನಗಳಲ್ಲಿ ಮುಖ್ಯಮಂತ್ರಿಯವರಿಂದ ಒಪ್ಪಿಗೆ ಪಡೆದು ಸಮಗ್ರವಾಗಿ ಕಾಮಗಾರಿ ಆರಂಭಿಸಲಿದ್ದೇವೆ. ಒಟ್ಟಿನಲ್ಲಿ ಮಳೆಗಾಲದಲ್ಲಿ ಅರ್ಕಾವತಿ ನದಿ ಪಾತ್ರವನ್ನು ಶುಚಿಗೊಳಿಸುವ ಯೋಜನೆ ನಮ್ಮದಾಗಿದೆ."
-ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಜಲಮಂಡಲಿ, ವಸತಿ ಸಚಿವರು

Thursday, May 6, 2010

ಅರ್ಕಾವತಿ ಹರಿಸಲು ಯಲಹಂಕ ಕೆರೆ ಆಸರೆ

ಬೆಂಗಳೂರಿನ ಜೀವನದಿ ಅರ್ಕಾವತಿ ಹರಿಸುವ ಕಾರ್ಯಕ್ಕೆ ಮೇ 20 ನಂತರ ಚಾಲನೆ ದೊರೆಯಲಿದ್ದು, ಸಾಹಸಕ್ಕೆ ಯಲಹಂಕ ಕೆರೆ ಆಸರೆಯಾಗಲಿದೆ.
ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ಜೀವನದಿ ಅರ್ಕಾವತಿ ಹೊಳೆ ಹರಿಸಲು ಯಲಹಂಕ ಕೆರೆಯಿಂದ ನೀರು ಪಂಪ್ ಮಾಡುವ ಕಾರ್ಯಕ್ಕೆ ಸದ್ಯದಲ್ಲಿಯೇ ಚಾಲನೆ ನೀಡಲಾಗುತ್ತದೆ. ಸುಮಾರು 300 ಎಕರೆ ವಿಸ್ತೀರ್ಣದಲ್ಲಿರುವ ಯಲಹಂಕ ಕೆರೆಯಲ್ಲಿ ನೀರಿನ ಸಂಗ್ರಹ ಸಾಕಷ್ಟಿದೆ. ಈ ನೀರನ್ನು ನದಿ ಹರಿಸಲು ಬಳಸಿಕೊಳ್ಳುವ ಯೋಜನೆ ರೂಪುಗೊಳ್ಳುತ್ತಿದೆ.
ಅರ್ಕಾವತಿ ನದಿಯನ್ನು ಹರಿಸುವ ಪ್ರಮುಖವಾದ ಯೋಜನೆ ಜಲಮಂಡಳಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಾಕಷ್ಟು ಆಸಕ್ತಿ ವಹಿಸಿ ರೂಪಿಸುತ್ತಿದ್ದಾರೆ. ಅದಕ್ಕಾಗಿ ಅಗತ್ಯ ಸಂಪನ್ಮೂಲದ ನೆರವೂ ಸರಕಾರದಿಂದ ಒದಗಿಸುವ ಭರವಸೆ ನೀಡಿದ್ದಾರೆ. ಮೊದಲ ಹಂತದಲ್ಲಿ ನೀರು ಪಂಪ್ ಮಾಡುವ ಕಾರ್ಯಕ್ಕೆ ಈ ತಿಂಗಳೇ ಚಾಲನೆ ನೀಡುವ ಗುರಿ ಹೊಂದಿದ್ದಾರೆ.
ಅರ್ಕಾವತಿ ನದಿಗೆ ನಂದಿಬೆಟ್ಟ ಮೂಲದಿಂದಲೂ ತಡೆ ಇದೆ. ಮೂಲದಿಂದಲೇ ಕಾಲುವೆಯನ್ನು ಸರಿಪಡಿಸುವ ಯೋಜನೆ ರೂಪುಗೊಂಡಿದ್ದು, ನದಿ ಪುನಶ್ಚೇತನಕ್ಕೆ ಸಮಿತಿ ರಚನೆಯಾಗಿ ನಾಲ್ಕು ತಿಂಗಳು ಕಳೆದಿದೆ. ಜಲಸಂಪನ್ಮೂಲ ಸಚಿವರ ಅಧ್ಯಕ್ಷತೆಯಲ್ಲಿದ್ದ ಈ ಸಮಿತಿ ಇದೀಗ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿದೆ. ನದಿ ಪುನಶ್ಚೇತನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದು, ಇದಕ್ಕಾಗಿ ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಯಯೋಜನೆಗಳು ಆರಂಭವಾಗಿವೆ.
ನಂದಿಬೆಟ್ಟದಿಂದ ದೊಡ್ಡಬಳ್ಳಾಪುರದ ನಾಗರಕೆರೆವರೆಗೆ ನದಿ ಹರಿಸುವ ಅಲ್ಪಮಟ್ಟಿಗಿದೆ. ಈ ಕೆರೆ ತುಂಬಿಸಿ ಮುಂದಿನ ಕಾಲುವೆಗಳಲ್ಲಿ ನೀರು ಹರಿಸುವ ಯೋಜನೆ ರೂಪುಗೊಂಡಿದೆ. ಇದಕ್ಕಾಗಿ ಬೆಂಗಳೂರು ಉತ್ತರದಲ್ಲಿರುವ ಯಲಹಂಕ ಕೆರೆಯನ್ನು ಆಯ್ದುಕೊಳ್ಳಲಾಗಿದೆ. ಇಲ್ಲಿಂದ ನೀರನ್ನು ನಾಗರಕೆರೆಗೆ ಪಂಪ್ ಮಾಡುವ ಯೋಜನೆ ಇದಾಗಿದೆ. ಈ ಮೂಲಕ ಹೆಸರಘಟ್ಟ ಕೆರೆಗೆ ನೀರು ಹರಿಸುವ ಸಾಹಸ ಮಾಡಲಾಗುತ್ತಿದೆ. ನೀರು ಸಂಸ್ಕರಣೆ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿರುವ ಸಮಯದಲ್ಲಿ, ಅಂತರ್ಜಲ ಕುಸಿತ ದೊಡ್ಡ ಆತಂಕವಾಗಿದೆ. ಆದ್ದರಿಂದ, ನದಿ ಹರಿಸುವ ಮೂಲಕ ಅಂತರ್ಜಲ ಮಟ್ಟ ಏರಿಸುವ ಉದ್ದೇಶವಿದೆ.
ಯಲಹಂಕದಂತಹ ಬೃಹತ್ ಕೆರೆಯನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂತಹ ದೊಡ್ಡ ಕೆರೆ ಬೆಂಗಳೂರಿನ ಪಕ್ಕದಲ್ಲೇ ಇದ್ದರೂ ನಾವು ನೀರಿಗಾಗಿ ಪರಿತಪಿಸುತ್ತಿದ್ದೇವೆ. ಇಂತಹ ಕೆರೆಗಳನ್ನು ನೀರು ಪೂರೈಕೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಬಳಸಿಕೊಳ್ಳಬಾರದೇಕೆ ಎಂದು ಜಲಮಂಡಳಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರನ್ನು ಕುತೂಹಲದಿಂದ ಕೇಳಿದ್ದಾರೆ. ಈ ಬಗ್ಗೆ ಜಲಮಂಡಳಿ ಸಾಕಷ್ಟು ಯೋಜನೆ ರೂಪಿಸುತ್ತಿದ್ದು, ಈ ನೀರನ್ನು ನಾಗರಕೆರೆಗೆ ಪಂಪ್ ಮಾಡುವ ಯೋಜನೆ ಸಿದ್ಧವಾಗುತ್ತಿದೆ. ಶಾಸಕ ಎಸ್.ಆರ್. ವಿಶ್ವನಾಥ್ ಅರ್ಕಾವತಿ ನದಿ ಹರಿಸಬೇಕೆಂದು ಪಟ್ಟು ಹಿಡಿದ್ದಾರೆ. ಆದ್ದರಿಂದ ಮೊದಲ ಹೆಜ್ಜೆಯಾಗಿ ಯಲಹಂಕ ಕೆರೆಯ ನೀರನ್ನೇ ಅರ್ಕಾವತಿ ಹೊಳೆಗೆ ಹರಿಸಲಾಗುತ್ತಿದೆ ಎಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿದ್ದಾರೆ.
ಅರ್ಕಾವತಿ ನದಿ ಪುನಶ್ಚೇತನ ಸಮಿತಿ ಪ್ರಥಮ ಸಭೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆದ ಕೂಡಲೇ ನಡೆಯಲಿದ್ದು, ಈ ಸಭೆಯಲ್ಲೇ ಯಲಹಂಕ ಕೆರೆಯಿಂದ ನೀರು ಹರಿಸುವ ಯೋಜನೆಗೆ ಒಪ್ಪಿಗೆ ಪಡೆದುಕೊಳ್ಳಲಾಗುತ್ತದೆ. ಅಲ್ಲದೆ, ಪುನಶ್ಚೇತನಕ್ಕೆ ಅಗತ್ಯವಾದ ಎಲ್ಲ ರೀತಿಯ ಕಾರ್ಯಗಳನ್ನು ಕೈಗೊಳ್ಳುವುದಾಗಿ ಶಾಸಕ ಎಸ್.ಆರ್. ವಿಶ್ವನಾಥ್ ಹೇಳಿದ್ದಾರೆ.
ಈ ವರ್ಷದ ಮಳೆಗಾಲದಲ್ಲಿ ನಂದಿಬೆಟ್ಟದಿಂದ ನದಿ ಕಾಲುವೆಗಳನ್ನು ಸುಗಮಗೊಳಿಸುವ ಕಾರ್ಯ ನಡೆಯಲಿದೆ. ಮಳೆಗಾಲದಲ್ಲಿ ನೀರು ಹರಿಯಲು ಇರುವ ತಡೆಯನ್ನು ಗುರುತಿಸಿ, ಅದನ್ನು ನಿವಾರಿಸುವ ಯೋಜನೆ ರೂಪಿಸಲಾಗುತ್ತದೆ. ನಂದಿಯಿಂದ ಹೆಸರಘಟ್ಟದವರೆಗೆ ಅರ್ಕಾವತಿ ಹರಿದರೆ, ಅಲ್ಲಿಂದ ತಿಪ್ಪಗೊಂಡನಹಳ್ಳಿವರೆಗೆ ಕಾಲುವೆ ಹಾಗೂ ಸ್ವಚ್ಛತೆ ನಿರ್ವಹಿಸುವ ಜವಾಬ್ದಾರಿ ಹೊರಲು ಜಲಮಂಡಳಿ ಸಿದ್ಧವಿದೆ. ಈ ದಿಸೆಯಲ್ಲೇ ಕಾರ್ಯಪ್ರಗತಿಯಾಗಲಿದೆ.
ಅರ್ಕಾವತಿ ನದಿ ಪುನಶ್ಚೇತನದಿಂದ ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ರೈತರಿಗೆ ನೀರಿನ ಸೆಲೆ ಸಿಗಲಿದೆಯಲ್ಲದೆ, ಅಂತರ್ಜಲ ಹೆಚ್ಚಾಗುವುದರಿಂದ ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಏರಲಿದೆ. ಅಲ್ಲದೆ, ಹೆಸರಘಟ್ಟ ಹಾಗೂ ತಿಪ್ಪಗೊಂಡನಹಳ್ಳಿ ಜಲಾಶಯ ತುಂಬಿದರೆ ಬೆಂಗಳೂರು ನಿವಾಸಿಗಳಿಗೆ ಕುಡಿಯುವ ನೀರು ಸಿಗುತ್ತದೆ. ಅರ್ಕಾವತಿ ನದಿ ಪುನಶ್ಚೇತನ ಕಾರ್ಯ ಶೀಘ್ರ ಆಗಲಿ ಎಂಬುದೇ ಆಶಯ.

Tuesday, April 6, 2010

ಐಟಿಐಆರ್: 12 ಸಾವಿರ ಎಕರೆ ವಶ; 29 ಗ್ರಾಮಗಳು ನೆಲಸಮ

ಅರ್ಕಾವತಿ ಹೊಳೆ ಪ್ರದೇಶ ನಾಶ
ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಜೀವಜಲವಾಗಿರುವ ಅರ್ಕಾವತಿ ನದಿ ಈಗಾಗಲೇ ಅಳಿವಿನ ಅಂಚಿನಲ್ಲಿದ್ದು, ಅದರ ಪುನರುಜ್ಜೀವನಕ್ಕೆ ರಾಜ್ಯ ಬಜೆಟ್‌ನಲ್ಲೇ ಯೋಜನೆಯನ್ನು ರೂಪಿಸಲಾಗಿದೆ. ಇದರ ಬೆನ್ನೆಲ್ಲಿ, ನದಿಯ ಮೂಲ ಪ್ರದೇಶಗಳನ್ನೇ 'ಐಟಿಬಿಆರ್:12000' ಯೋಜನೆಗಾಗಿ ವಶಪಡಿಸಿಕೊಳ್ಳಲಾಗುತ್ತಿದೆ. ಇದರಿಂದ ಅರ್ಕಾವತಿ ನದಿ ಸಂಪೂರ್ಣ ನಾಶವಾಗುವ ಸಂಭವವೇ ಹೆಚ್ಚಾಗಿದೆ.
ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ನೀರು ಹರಿದುಬರುವ ಅರ್ಕಾವತಿ ನದಿಪಾತ್ರದ ಸುತ್ತಮುತ್ತಲಿನ 2 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕೈಗಾರಿಕೆ ಚಟುವಟಿಕೆ, ಕಾರ್ಖಾನೆಗಳಿರಬಾರದು ಎಂಬ ಅಧಿಸೂಚನೆ 200೩ರಲ್ಲಿ ಹೊರಬಿದ್ದಿದೆ. ಅರ್ಕಾವತಿ ನದಿ ಪುನಶ್ಚೇತನಕ್ಕಾಗಿ ಶಾಸಕರಾದ ಎಸ್.ಆರ್. ವಿಶ್ವನಾಥ್ ಹಾಗೂ ಎಸ್. ಮುನಿರಾಜು ಪಾದಯಾತ್ರೆಯನ್ನೂ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಂಸದರಾದ ಅನಂತಕುಮಾರ್, ಸಚಿವರಾದ ಆರ್. ಅಶೋಕ್, ರಾಮಚಂದ್ರೇಗೌಡ, ಸುರೇಶ್‌ಕುಮಾರ್ ಎಲ್ಲರೂ ಅರ್ಕಾವತಿ ಉಳಿಸುವ ಬಗ್ಗೆ ಭರವಸೆಯನ್ನೂ ನೀಡಿದ್ದಾರೆ. ಆದರೆ ಇದೀಗ ಐಟಿ ಹೂಡಿಕೆ ವಲಯದಿಂದ ನದಿ ನಾಶವಾಗುವ ದಿಕ್ಕಿನತ್ತ ಸಾಗಿದೆ.
ಅರ್ಕಾವತಿ ನದಿ ಪುನಶ್ಚೇತನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲೇ ಸಮಿತಿ ರಚನೆ ಆಗಿದೆ. ಬಿಬಿಎಂಪಿ ಚುನಾವಣೆ ಬಿಜೆಪಿ ಪ್ರಣಾಳಿಕೆಯಲ್ಲಿ ಅರ್ಕಾವತಿ ಹರಿಸುತ್ತೇವೆ ಎಂದಿದ್ದಾರೆ. ಇದೆಲ್ಲ ಕಣ್ಣೊರೆಸುವ ತಂತ್ರವೇ?

ಐಟಿಐಆರ್: 12 ಸಾವಿರ ಎಕರೆ ವಶ; 29 ಗ್ರಾಮಗಳು ನೆಲಸಮ
ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯದ ಸೃಷ್ಟಿಗಾಗಿ ಗ್ರಾಮಾಂತರ ಜಿಲ್ಲೆಯ 29 ಗ್ರಾಮಗಳ ರೈತರು ಅಸ್ತಿತ್ವವನ್ನೇ ಕಳೆದುಕೊಳ್ಳಲಿದ್ದಾರೆ. 12 ಸಾವಿರ ಎಕರೆ ಭೂಮಿಯನ್ನು ಕೆಐಎಡಿಬಿ ಕಸಿದುಕೊಳ್ಳುವ ಎಲ್ಲ ಪ್ರಕ್ರಿಯೆಯನ್ನೂ ಸದ್ಯದಲ್ಲಿಯೇ ಆರಂಭಿಸಲಿದೆ.
ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐಟಿಐಆರ್) ಕೇಂದ್ರ ಸರಕಾರದ ಸಹಯೋಗದ ಯೋಜನೆಯಾಗಿದ್ದು, ಇದಕ್ಕಾಗಿ 40 ಚದರ ಕಿಲೋಮೀಟರ್ ಭೂಮಿಯ ಅಗತ್ಯವಿದೆ. ಕೃಷಿ ಭೂಮಿ ಹೊರತುಪಡಿಸಿದಂತೆ ಭೂಮಿ ಒದಗಿಸಬೇಕೆಂಬ ಸೂಕ್ತ ನಿರ್ದೇಶನವಿದ್ದರೂ, ನೀರಾವರಿ, ಕೃಷಿ ಹಾಗೂ ನದಿಪಾತ್ರದ ಭೂಮಿಯನ್ನೇ ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರಕಾರ ಸರ್ವಸನ್ನದ್ಧವಾಗಿದೆ.
ಬೆಂಗಳೂರು-ಬಿಐಎಎಲ್ ಕಾರಿಡಾರ್ ವ್ಯಾಪ್ತಿಯಲ್ಲಿ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ನಡುವಿನ ದಾಬಸ್‌ಪೇಟೆಯತ್ತ ಸಾಗುವ 40 ಚದರ ಕಿಲೋ ಮೀಟರ್ ಭೂಮಿ ಐಟಿಐಆರ್ ವಲಯವಾಗಿ ಸೃಷ್ಟಿಯಾಗಲಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ವಾಧೀನಪಡಿಸಿಕೊಂಡ ಭೂಮಿಗಿಂತ ಮೂರು ಪಟ್ಟು ಹೆಚ್ಚು ಭೂಮಿ ಈ ವಲಯಕ್ಕೆ ಸ್ವಾಧೀನವಾಗಲಿದೆ. ರಾಜ್ಯ ಮಂತ್ರಿಮಂಡಲ ಭೂಸ್ವಾಧೀನಕ್ಕೆ ಜನವರಿ ಅಂತ್ಯದಲ್ಲಿ ಅನುಮತಿ ನೀಡಿದೆ. ಚುನಾವಣೆಗಳ ಸಂಬಂಧ ಈ ಪ್ರಕ್ರಿಯೆ ವಿಳಂಬವಾಗಿದ್ದು, ಇದೀಗ ಚುರುಕುಗೊಳ್ಳಲಿದೆ.
ರೈತರ ಭೂಮಿ ಯಾವುದೇ ಕಾರಣಕ್ಕೂ ಸ್ವಾಧೀನ ಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗಾಗ್ಗೆ ಹೇಳುತ್ತಲೇ ಇರುತ್ತಾರೆ. ಜತೆಗೆ, ರೈತರ ಸಾವಿರಾರು ಎಕರೆ ಭೂಮಿ ವಶಪಡಿಸುವ ಯೋಜನೆಗೆ ಸಹಿಯನ್ನೂ ಮಾಡುತ್ತಿರುತ್ತಾರೆ. ಒಂದು ಕಡೆ ಕಣ್ಣೊರೆಸಿ, ಮತ್ತೊಂದೆಡೆ ಕುತ್ತಿಗೆ ಹಿಸುಕುವ ಪ್ರಕ್ರಿಯೆ ಇದಾಗಿದೆ. ಇದಕ್ಕೆ 'ಐಟಿಐಆರ್:12000' ಯೋಜನೆ ತಾಜಾ ಉದಾಹರಣೆ.
ನಂದಿ ಬೆಟ್ಟದ ತಪ್ಪಲು ಕೂಡ ಈ ಹೂಡಿಕೆ ವಲಯಕ್ಕೆ ವಶವಾಗಲಿರುವುದು ಶೋಚನೀಯ. ಇದಲ್ಲದೆ, ಈಗ ಗುರುತಿಸಿರುವ ಬಹುತೇಕ ಪ್ರದೇಶ ನೀರಾವರಿಯಿಂದ ಕೂಡಿದ್ದ, ಇಲ್ಲಿನ ಜನರು ಕೃಷಿ, ಹೈನುಗಾರಿಕೆಯನ್ನೇ ಅವಲಂಬಿಸಿದ್ದಾರೆ. ನೀರಾವರಿ ಪ್ರದೇಶ ಇದಾಗಿದ್ದು, ತರಕಾರಿ, ದ್ರಾಕ್ಷಿಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಈ ಪ್ರದೇಶಗಳಲ್ಲಿ ಬಹುತೇಕ ಎಲ್ಲ ಮನೆಗಳಲ್ಲೂ ಮೂರ್‍ನಾಲ್ಕು ಹಸುಗಳಿದ್ದು, ಹೈನುಗಾರಿಕೆ ಅಧಿಕವಾಗಿದೆ. ಇದರಿಂದ, ಹಾಲಿನ ಉತ್ಪಾದನೆಯೂ ಹೆಚ್ಚು. ಇವರೆಲ್ಲರನ್ನೂ ಇಲ್ಲಿಂದ ಓಡಿಸುವ ಯೋಜನೆ ಇದಾಗಿದ್ದು, ಗ್ರಾಮಾಂತರ, ನಗರ ಹಾಗೂ ರಾಮನಗರ ಜಿಲ್ಲೆಗಳಿಗೆ ನೀರಿನ ಮೂಲವಾಗಿರುವ ಅರ್ಕಾವತಿ ನದಿಯನ್ನೂ ಸಂಪೂರ್ಣ ನಾಶಪಡಿಸಲಿದೆ.
12 ಸಾವಿರ ಎಕರೆ ಭೂಮಿ ಸ್ವಾಧೀನ ವಿರೋಧಿಸಿ ಅಲ್ಲಲ್ಲಿ ರೈತರು ಸಾಕಷ್ಟು ಹೋರಾಟ ನಡೆಸಿ, ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್‌ಗೆ ಮನವಿ ಪತ್ರ ಕೊಟ್ಟಿದ್ದರೂ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸ್ಥಳೀಯ ಶಾಸಕರಿಗೆ ಈ ಬಗ್ಗೆ ಮನವಿ ಮಾಡಿಕೊಂಡರೂ ಉಪಯೋಗವಾಗಿಲ್ಲ. ಇದೀಗ ರೈತರೆಲ್ಲ ಒಂದುಗೂಡಿದ್ದು, ಸಂಘಟಿತ ಹೋರಾಟ ಮಾಡಲು ಮುಂದಾಗಿದ್ದಾರೆ. ಇದಕ್ಕಾಗಿ ಭೂ ಹೋರಾಟ ಸಮಿತಿ ಜನ್ಮ ತಾಳಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಈ ಭಾಗದ ನೂರಾರು ರೈತರು ತಮ್ಮ ಭೂಮಿ ಕಳೆದುಕೊಂಡಿದ್ದಾರೆ. ಇದೀಗ ಐಟಿಐಆರ್‌ನಿಂದ 29 ಗ್ರಾಮಗಳೇ ನೆಲಸಮವಾಗಲಿವೆ. ಇದು ಈ ಭಾಗದಲ್ಲೇ ಆಗಬೇಕೆ ಎಂಬುದು ಮೂಲ ಪ್ರಶ್ನೆ. ಅಲ್ಲದೆ, ವಸತಿ ಪ್ರದೇಶ ಹಾಗೂ ಟೌನ್‌ಶಿಪ್‌ಗೆ ಹೆಚ್ಚಿನ ಆದ್ಯತೆ ನೀಡುವ ಈ ಯೋಜನೆಯನ್ನು ರಿಯಲ್ ಎಸ್ಟೇಟ್ ದಂಧೆಗಾಗಿಯೇ ಮಾಡಲಾಗುತ್ತಿದೆ. ಅಲ್ಲದೆ, ಹೆಚ್ಚಿನ ಹಣ ತಂದುಕೊಡುವ ಈ ಪ್ರದೇಶವನ್ನೇ ಆಯ್ದುಕೊಳ್ಳಲಾಗಿದೆ ಎಂಬ ಆರೋಪವೂ ಇದೆ. ಇದು ಮೇಲ್ನೋಟಕ್ಕೆ ಸಾಬೀತಾಗುತ್ತದೆ.
ಬೆಂಗಳೂರು ಹಾಗೂ ಸುತ್ತಮುತ್ತ ಐಟಿ ಹೆಚ್ಚು ಅಭಿವೃದ್ಧಿಯಾಗಿದೆ. ಇನ್ನು ಮುಂದೆ ಆ ಕ್ಷೇತ್ರದ ಅಭಿವೃದ್ಧಿಗೆ ಇತರೆ ನಗರಗಳೇ ಆದ್ಯತೆ ಎಂದು ಸರಕಾರ ಹೇಳುತ್ತಿದ್ದರೂ, ರಿಯಲ್ ಎಸ್ಟೇಟ್ ದಂಧೆ ಇಲ್ಲೇ ಅಧಿಕ ಹಣ ನೀಡುವುದರಿಂದ ಬೆಂಗಳೂರು ಹೊರವಲಯದಲ್ಲೇ ಮತ್ತೆ ಯೋಜನೆ ಆರಂಭಿಸಲಾಗುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸಿ, ಅವರ ಅಸ್ತಿತ್ವವನ್ನೇ ಕಸಿದುಕೊಳ್ಳುವ ಇಂತಹ ಯೋಜನೆಗಳ ಅಗತ್ಯವಾದರೂ ಏನು? ಜತೆಗೆ, ಅರಣ್ಯ, ನದಿ ಹಾಗೂ ಜಲಮೂಲಗಳಂತಹ ನೈಸರ್ಗಿಕ ಸಂಪತ್ತನ್ನು ನಾಶಗೊಳಿಸಿ, ಅದರ ಸಮಾಧಿ ಮೇಲೆ ಸೌಧ ಕಟ್ಟಿದರೆ ವಾಯು-ಜಲಕ್ಕೆ ಆಶ್ರಯಿಸುವುದಾದರೂ ಏನನ್ನು? ಈ ಪ್ರಶ್ನೆಗಳಿಗೆ ಯೋಜನೆಗೆ ಕುಮ್ಮಕ್ಕು ನೀಡುತ್ತಿರುವ ಆಡಳಿತ-ಅಧಿಕಾರಿ ವರ್ಗ ಉತ್ತರಿಸಬೇಕು.

ಸ್ವಾಧೀನವಾಗಲಿರುವ ಗ್ರಾಮಗಳು
ದೇವನಹಳ್ಳಿ ತಾಲೂಕು: ವಿಶ್ವನಾಥಪುರ, ಕೊಯಿರಾ, ಮನಗೊಂಡನಹಳ್ಳಿ, ಚಿಕ್ಕ ಓಬನಹಳ್ಳಿ, ಮಾಯಸಂದ್ರ, ರಾಮನಾಥಪುರ, ಅರುವನಹಳ್ಳಿ, ವಾಜರಹಳ್ಳಿ, ಬೈರದೇನಹಳ್ಳಿ, ಗೂಡ್ಲಹಳ್ಳಿ, ಚಿಕ್ಕ ಗೊಲ್ಲಹಳ್ಳಿ, ಚಪ್ಪರದಹಳ್ಳಿ, ದೊಡ್ಡ ಗೊಲ್ಲಹಳ್ಳಿ, ಬೀರಸಂದ್ರ, ರಬ್ಬನಹಳ್ಳಿ, ಮೀಸಗಾನಹಳ್ಳಿ, ತೈಲಗೆರೆ, ಮನಗೊಂಡನಹಳ್ಳಿ, ಸೊಣ್ಣೇನಹಳ್ಳಿ.
ದೊಡ್ಡಬಳ್ಳಾಪುರ ತಾಲೂಕು: ಕೋನಘಟ್ಟ, ನಾಗದೇವನಹಳ್ಳಿ, ಸೊಣ್ಣಪ್ಪನಹಳ್ಳಿ, ಗೋವಿಂದಪುರ, ಶಿವಪುರ ಅಮಾನಿಕೆರೆ, ಶಿವಪುರ, ರಾಜಘಟ್ಟ ಅಮಾನಿಕೆರೆ, ರಾಜಘಟ್ಟ, ದಾಸಗೊಂಡನಹಳ್ಳಿ, ಲಿಂಗನಹಳ್ಳಿ.

ಏನಿದು ಐಟಿಐಆರ್?
ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಸ್ಥೆಗಳಿಗೆ ಸಮಗ್ರ ಸೌಲಭ್ಯ ಕಲ್ಪಿಸುವ ಯೋಜನೆಯೇ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐಟಿಐಆರ್). ಕನಿಷ್ಠ 40 ಚದರ ಕಿಮೀ ಭೂಮಿ ಅಗತ್ಯ. ಕೃಷಿಯೇತರ ಭೂಮಿಗೆ ಪ್ರಾಮುಖ್ಯ ನೀಡಬೇಕು. ಉತ್ಪಾದನಾ ಘಟಕ, ಸಾರ್ವಜನಿಕ ಸೌಲಭ್ಯ, ಸಾಗಣೆ, ವಸತಿ ಪ್ರದೇಶ, ಆಡಳಿತ ಸೇವೆ ಸೇರಿದಂತೆ ಎಲ್ಲ ರೀತಿಯ ಸೌಕರ್ಯಗಳೂ ಇಲ್ಲಿರಬೇಕು. ಸಮಗ್ರ ಟೌನ್‌ಶಿಪ್ ಕೂಡ ಇಲ್ಲಿ ನಿರ್ಮಾಣ ಮಾಡಬಹುದು.
ಕೇಂದ್ರ ಹಾಗೂ ರಾಜ್ಯ ಮಾಹಿತಿ ತಂತ್ರಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು ಈ ಯೋಜನೆಗೆ ಸಮ್ಮತಿಸಿದ್ದು, ದೊಡ್ಡಬಳ್ಳಾಪುರ, ದೇವನಹಳ್ಳಿಯಿಂದ ದಾಬಸ್‌ಪೇಟೆ ವ್ಯಾಪ್ತಿಯ 12 ಸಾವಿರ ಎಕರೆ ಪ್ರದೇಶವನ್ನು ಗುರುತಿಸಿದ್ದಾರೆ. ಐಟಿಐಆರ್‌ಗೆ ಅಗತ್ಯವಾದ ಭೂಮಿಯನ್ನು ಕರ್ನಾಟಕ ಕೈಗಾರಿಕೆ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮೂಲಕ ಸ್ವಾಧೀನಪಡಿಸಿಕೊಳ್ಳಲಿದೆ. ನಂತರ, ಸರಕಾರ, ಖಾಸಗಿ ಸಹಭಾಗಿತ್ವದಡಿ ಕೈಗಾರಿಕೆ ಪ್ರದೇಶವಲ್ಲದೆ ಟೌನ್‌ಶಿಪ್ ನಿರ್ಮಾಣ ಮಾಡಬಹುದು.

Wednesday, February 17, 2010

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಪರಿಸರ

ನಗರಗಳ ಬೆಳವಣಿಗೆ: ಪರಿಸರ ನಾಶ
ಗದಗದಲ್ಲಿ ನಡೆಯುವ ೭೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಪರಿಸರ ಕುರಿತ ಗೋಷ್ಠಿಯನ್ನು ಪರಿಸರವಾದಿ ಡಾ. ಅನ ಯಲ್ಲಪ್ಪರೆಡ್ಡಿ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ. ಈ ಗೋಷ್ಠಿಯಲ್ಲಿ "ನಗರಗಳ ಬೆಳವಣಿಗೆ: ಪರಿಸರ ನಾಶ" ಕುರಿತಂತೆ ೨೦ ನಿಮಿಷಗಳ ವಿಚಾರ ಮಂಡಿಸಲು ಸಾಹಿತ್ಯ ಪರಿಷತ್‌ ಅಧ್ಯಕ್ಷ ಶ್ರೀ ನಲ್ಲೂರು ಪ್ರಸಾದ್‌ ಅವರು ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪರಿಸರದ ಬಗ್ಗೆ ವಿಚಾರ ಮಂಡಿಸುವ ಅವಕಾಶ ದೊರೆತಿರುವುದು ನನಗೆ ಹೆಮ್ಮೆಯ ವಿಷಯವೇ ಸರಿ. ನಗರ ಬೆಳವಣಿಗೆ, ಅಭಿವೃದ್ಧಿ ಹಾಗೂ ಅಂತರ್ಜಲ, ಕೆರೆಗಳ ಬಗ್ಗೆ ವಿಷಯವನ್ನು ಮಂಡಿಸಲು ಸಿದ್ಧತೆ ನಡೆಸಿದ್ದೇನೆ. ಈ ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸಿದ್ದೇನೆ.
ಗೋಷ್ಠಿ ಫೆಬ್ರವರಿ ೨೧ರಂದು ಬೆಳಗ್ಗೆ ೯.೩೦ಕ್ಕೆ ನಡೆಯಲಿದೆ. ಸ್ಥಳ: ವಿವೇಕಾನಂದ ಸಭಾಭವನ, ಎಪಿಎಂಸಿ ಆವರಣ.

Sunday, January 31, 2010

ಕೆರೆ ಒತ್ತುವರಿ ತೆರವು; ನಿಯಂತ್ರಣಕ್ಕೆ ಕಾರ್ಯಪಡೆ

ನಿಮ್ಮಲ್ಲಿ ಮಾಹಿತಿ ಇದ್ದರೆ ನೀಡಿ... ಕೆರೆ ಸಂರಕ್ಷಿಸಿ...
ರಾಜ್ಯದಾದ್ಯಂತ ಕೆರೆಗಳ ಒತ್ತುವರಿಯನ್ನು ತೆರವು ಮಾಡಲು ರಾಜ್ಯ ಸರಕಾರ ದೃಢ ಹೆಜ್ಜೆ ಇರಿಸಿದೆ. ಇದಕ್ಕಾಗಿ ಕೆರೆ ಒತ್ತುವರಿ ತಡೆಗೆ ಕಾರ್ಯಪಡೆಯನ್ನು ರಚಿಸಿದೆ. ಕೆರೆಗಳ ಒತ್ತುವರಿ ಬಗ್ಗೆ ನಿಮಗೆ ಮಾಹಿತಿ ಇದ್ದರೆ ಕಾರ್ಯಪಡೆಗೆ ನೀಡಬಹುದು.
ಸರಕಾರಿ ಭೂಮಿ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ವಿ. ಬಾಲಸುಬ್ರಮಣಿಯನ್ ಪ್ರಕಾರ, ಬೆಂಗಳೂರಿನಲ್ಲಿರುವ 2500 ಎಕರೆ ಕೆರೆ ಪ್ರದೇಶದಲ್ಲಿ 1800 ಎಕರೆ ಒತ್ತುವರಿಯಾಗಿದೆ. ನಗರ ಜಿಲ್ಲೆಯಲ್ಲಿ 962 ಕೆರೆಗಳಿವೆ. ಸುಮಾರು 2400 ಮಂದಿ ಕೆರೆ ಒತ್ತುವರಿ ಮಾಡಿಕೊಂಡಿದ್ದಾರೆ.ಇವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದ್ದು,ಒತ್ತುವರಿ ಬಗ್ಗೆ ಕೈಪಿಡಿ ಹೊರತರಲು ಕಾರ್ಯಪಡೆ ನಿರ್ಧರಿಸಿದೆ. ಇದಕ್ಕೆ ಮಾಹಿತಿಯನ್ನು ಸಾರ್ವಜನಿಕರೂ ನೀಡಬಹುದು.
ರಾಜ್ಯದಲ್ಲಿ ಸರಕಾರಿ ಭೂಮಿ ಸಂರಕ್ಷಣೆ ಉದ್ದೇಶದಿಂದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾಗಿರುವ ಬಾಲಸುಬ್ರಮಣಿಯನ್ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಐಎಎಸ್ ಅಧಿಕಾರಿ ಮಂಜುಳಾ, ಹಿರಿಯ ವಕೀಲ ಎಂ.ಆರ್. ಹೆಗಡೆ, ನಿವೃತ್ತ ಜಿಲ್ಲಾಧಿಕಾರಿ ನಾಯಕ್ ಕಾರ್ಯಪಡೆಯಲ್ಲಿದ್ದಾರೆ. ಎ.ಟಿ. ರಾಮಸ್ವಾಮಿ ಸಮಿತಿ ವರದಿ ಜತೆಗೆ, ಒತ್ತುವರಿ ಬಗ್ಗೆ ಇನ್ನಷ್ಟು ಮಾಹಿತಿ ಕಲೆಹಾಕುತ್ತಿದೆ.
ಬೆಂಗಳೂರಿನಲ್ಲಿ 35 ಸಾವಿರ ಎಕರೆ ಸರಕಾರಿ ಭೂಮಿ ಒತ್ತುವರಿಯಾಗಿದೆ. ಪ್ರಥಮ ಹಂತದಲ್ಲಿ ಕೆರೆಗಳ ಒತ್ತುವರಿ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕಂದಾಯ ಇಲಾಖೆ ದಾಖಲೆಗಳಲ್ಲಿರುವಂತೆ ಕೆರೆಗಳ ಸರ್ವೆ ಕಾರ್ಯ ಆರಂಭಿಸಲಾಗಿದೆ. ಕೆರೆಗಳ ಹಿಂದಿನ/ಈಗಿನ ಸ್ಥಿತಿ ಹಾಗೂ ಸಮಗ್ರ ಮಾಹಿತಿಯುಳ್ಳ ಕೈಪಿಡಿ ಹೊರತರಲಾಗುತ್ತದೆ.ಸಾರ್ವಜನಿಕರು ಮಾಹಿತಿ ನೀಡಬಹುದು.
ಕೆರೆಗಳ ಅಭಿವೃದ್ಧಿ ಹಾಗೂ ಒತ್ತುವರಿ ತೆರವು ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಡಾ.ಅ.ನ. ಯಲ್ಲಪ್ಪ ರೆಡ್ಡಿ, ಕೆರೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಚಿತ್ರ ನಿರ್ದೇಶಕಿ ಶಾರದಾ, ನರೇಂದ್ರ, ಲಿಯೊ ಸಲ್ಡಾನಾ ಅವರೊಂದಿಗೆ ಕಾರ್ಯಪಡೆಯ ಸದಸ್ಯರು ಸಭೆ ನಡೆಸಿದರು.ಶ್ರೀ ಯಲ್ಲಪ್ಪರೆಡ್ಡಿಯವರ ಸಲಹೆ ಮೇರೆಗೆ ಈ ಸಭೆಗೆ ನನ್ನನ್ನೂ ಆಹ್ವಾನಿಸಿದ್ದು, ನನಗೆ ಹೆಮ್ಮೆಯ ವಿಚಾರ. ಕೆರೆಗಳ ಸಂರಕ್ಷಣೆಗಾಗಿ ಮಾಹಿತಿ ನೀಡಿ. ನಮ್ಮೊಂದಿಗೆ ನೀವಿರಬೇಕೆಂದು ಶ್ರೀ ಬಾಲಸುಬ್ರಮಣಿಯನ್ ಹೇಳಿದಾಗ, ಅದನ್ನು ಕರ್ತವ್ಯವೆಂದು ಒಪ್ಪಿಕೊಂಡಿದ್ದೇನೆ. ಸಾರ್ವಜನಿಕರೂ ಹಾಗೂ ಪರಿಸರ ಪ್ರೇಮಿಗಳು ಕೆರೆ ಸಂರಕ್ಷಣೆ ಕಾರ್ಯಪಡೆಗೆ ಮಾಹಿತಿ ನೀಡಿ ಸಹಕರಿಸಬೇಕೆಂಬುದು ನನ್ನ ಕೋರಿಕೆ.
ಕರೆ ಮಾಡಿ: 98459 70092 ಅಥವಾ ಇಮೇಲ್ ಮಾಡಿ: keremanju@gmail.com ಅಥವಾ taskforce09@gmail.com

Thursday, January 21, 2010

ಕಾಲಾಪಾನಿ ಮಾಲಿನ್ಯ ನಿಯಂತ್ರಣಕ್ಕೆ ಜೀವಾಣು

ನಗರ ಕಾಲಾಪಾನಿ ಎಂದೇ ಕುಖ್ಯಾತಿ ಗಳಿಸಿರುವ ಹೊಸೂರು ರಸ್ತೆಯ ಮಂಗಮ್ಮನಪಾಳ್ಯದ ಸಮೀಪವಿರುವ ಸೋಮಸಂದ್ರಪಾಳ್ಯ ಕೆರೆಯ ಮಾಲಿನ್ಯ ನಿಯಂತ್ರಣಕ್ಕೆ ಲಕ್ಷಾಂತರ ಜೀವಾಣುಗಳನ್ನು ಬಿಡಲಾಗಿದೆ.
ಬೆಂಗಳೂರಿನ ಅತ್ಯಂತ ದುಸ್ಥಿತಿ ಹಾಗೂ ಅಸಹ್ಯಕರ ಕೆರೆಯಾಗಿರುವ ಸೋಮಸಂದ್ರ ಪಾಳ್ಯ ಕೆರೆಗೆ, ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಹಾಗೂ ಬಾಳೆ ಕಂಪ್ಯೂಟರ್ ಟೆಕ್ನಾಲಜಿ ಅಂಡ್ ಬಯೊ-ಟೆಕ್ನಾಲಜಿ ವತಿಯಿಂದ 'ಇಎಂ ತಂತ್ರಜ್ಞಾನ'ದ ಜೀವಾಣುಗಳನ್ನು ಸೋಮವಾರ ಸಿಂಪಡಿಸಲಾಯಿತು.
ಈ ಜೀವಾಣುಗಳು 'ರಕ್ತ ಬಿಜಾಸುರ'ನಂತೆ ಎರಡೇ ಗಂಟೆಗಳಲ್ಲಿ ದ್ವಿಗುಣವಾಗಿ ಉತ್ಪಾದನೆಯಾಗಲಿವೆ. ಲಕ್ಷ ಜೀವಾಣುಗಳು ಕೆಲವೇ ಗಂಟೆಗಳಲ್ಲಿ ಎರಡು ಲಕ್ಷವಾಗುತ್ತವೆ. ಕೋಟ್ಯಂತರ ಜೀವಾಣುಗಳಾಗಿ ಮಾಲಿನ್ಯ ಹಾಗೂ ಎಲ್ಲ ರೀತಿಯ ಕೊಳಕನ್ನು ನಾಶಮಾಡುತ್ತವೆ. ಅಲ್ಲದೆ, ಕೆರೆಯಿಂದ ಹೊರಬರುವ ದುರ್ವಾಸನೆ ಕೂಡ ನಿವಾರಣೆಯಾಗಲಿದೆ.
ನಗರದ ಪ್ರಮುಖ ಕೆರೆಯಾದ ಅಲಸೂರು ಕೆರೆಗೆ ಇತ್ತೀಚೆಗೆ ಈ ಜೀವಾಣುಗಳನ್ನು ಸಿಂಪಡಿಸಿ, ಅಲ್ಲಿನ ದುರ್ವಾಸನೆಯನ್ನು ದೂರ ಮಾಡಲಾಗಿತ್ತು. ಅಲ್ಲದೆ, ಹಸಿರು ಕೆಸರು ಗದ್ದೆಯಾಗಿದ್ದ ನೀರು ಕೂಡ ತಿಳಿಯಾಗಿತ್ತು. ಇಂತಹದ್ದೇ ಸಿಂಪಡಣೆಯನ್ನು ನಗರದ ಎಲ್ಲ ಕೆರೆಗಳಿಗೂ ಸಿಂಪಡಿಸಿ, ಕೊಳಕುಮುಕ್ತಗೊಳಿಸಲು ಬಿಬಿಎಂಪಿಗೆ ಮನವಿ ಮಾಡಿಕೊಳ್ಳಲಾಗಿದೆ. ಇದು ಇನ್ನೂ ಅನುಮತಿ ನೀಡುವ ಹಂತದಲ್ಲೇ ಇದೆ.
ಮಾಲಿನ್ಯ ನಿಯಂತ್ರಣದಲ್ಲಿ ಹಲವು ರಾಸಾಯನಿಕಗಳನ್ನು ಬಳಸಲಾಗುತ್ತಿದೆ. ಆದರೆ, ಈ ಪ್ರಕ್ರಿಯೆಯಲ್ಲಿ ಯಾವುದೇ ರಾಸಾಯನಿಕ ಬಳಸಲಾಗಿಲ್ಲ. ಈ ಜೀವಾಣುಗಳನ್ನು ಮಾತ್ರ ಸಿಂಪಡಿಸಲಾಗುತ್ತವೆ. ನಮ್ಮ ದೇಹದಲ್ಲಿರುವ ಜೀವಾಣುಗಳಂತೆ ಇವು ತಮ್ಮ ಕಾರ್ಯನಿರ್ವಹಿಸಿ, ಕೊಳಕನ್ನು ತಿನ್ನುತ್ತವೆ. ಇದು ಪರಿಸರಕ್ಕೆ ಪೂರಕ. ತ್ಯಾಜ್ಯವನ್ನೂ ಕಡಿಮೆಗೊಳಿಸಿ, ಗೊಬ್ಬರವನ್ನಾಗಿಸುತ್ತದೆ. ಈ ಸಿಂಪಡಣೆ ಎಲ್ಲ ಕೆರೆಗಳಲ್ಲೂ ಆಗಬೇಕು. ಬಿಬಿಎಂಪಿ ಎಲ್ಲ ರೀತಿಯ ಮಾಲಿನ್ಯ ನಿರ್ಮೂಲನೆಗೆ ಈ ಜೀವಾಣು ದ್ರಾವಣವನ್ನು ಬಳಸಬೇಕು ಎಂದು ಪರಿಸರವಾದಿ ಡಾ. ಅ.ನ. ಯಲ್ಲಪ್ಪರೆಡ್ಡಿ ಆಗ್ರಹಿಸಿದರು.
ರಾಜರಾಜೇಶ್ವರಿ ನಗರದ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಈ ಜೀವಾಣುಗಳ ಸಿಂಪಡಣೆ ಕಾರ್ಯದಲ್ಲಿ ಕೈಜೋಡಿಸಿದೆ. ಈವರೆಗೆ ಬಿಬಿಎಂಪಿ ಈ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ಮಾತ್ರ ಅಳವಡಿಸಿಕೊಂಡಿದೆ. ಆದ್ದರಿಂದ, ಉಚಿತವಾಗಿ ಈ ಸಂಸ್ಥೆಗಳು ಜೀವಾಣುಗಳನ್ನು ಸಿಂಪಡಿಸುತ್ತಿದ್ದೇವೆ ಎನ್ನುತ್ತಾರೆ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಪ್ರೊ. ಲಿಂಗರಾಜು.
ತ್ಯಾಜ್ಯವನ್ನೂ ನಿರ್ವಹಿಸುವ ಈ ಪ್ರಕ್ರಿಯೆಗೆ ಎಲ್ಲೆಡೆ ಮಾನ್ಯತೆ ನೀಡಿ, ಸರಕಾರದ ಮಟ್ಟದಲ್ಲಿ ಚಾಲನೆಗೊಂಡರೆ ಬೆಂಗಳೂರಿನ ಕೆರೆಗಳತ್ತ ಹೋಗುವಾಗ, ಚರಂಡಿ ದಾಟುವಾಗ ಮೂಗುಮುಚ್ಚಿಕೊಳ್ಳುವ ಪ್ರಸಂಗ ಎದುರಾಗುವುದಿಲ್ಲ.
ಏನಿದು ಜೀವಾಣು?
ಕೋಲ್ಕತಾ ಮೂಲದ ಕಂಪನಿ 'ಎಫೆಕ್ಟೀವ್ ಮೈಕ್ರೊಆರ್ಗಾನಿಸಮ್' ಎಂಬ ಈ ಜೀವಾಣುಗಳನ್ನು ಉತ್ಪಾದಿಸಿ, 'ಪ್ಯಾಸೀವ್' ಸ್ಥಿತಿಯಲ್ಲಿ ಅದನ್ನು ಶೇಖರಿಸುತ್ತದೆ. ಈ ಸ್ಥಿತಿಯ ದ್ರಾವಣಕ್ಕೆ ಒಂದು ಕೆಜಿ ಬೆಲ್ಲ ಹಾಗೂ ೨೦ ಲೀಟರ್ ನೀರು ಸೇರಿಸಿ, ಗಾಳಿನಿಯಂತ್ರಕ ಉಪಕರಣದಲ್ಲಿ ಬೆರೆಸಿಡಬೇಕು. ಈ ಪ್ರಕ್ರಿಯೆ ನಂತರ ಜೀವಾಣುಗಳು 'ಆಕ್ಟೀವ್' ಸ್ಥಿತಿಗೆ ತಲುಪುತ್ತವೆ. ಇವುಗಳನ್ನು ಮಾಲಿನ್ಯ-ಕೊಳಕಿನ ಮೇಲೆ ಸಿಂಪಡಿಸಿದರೆ, ಒಂದು ಗಂಟೆಯೊಳಗೆ ಅಲ್ಲಿನ ದುರ್ವಾಸನೆ ದೂರಾಗುತ್ತದೆ. ಕೆಲವು ಗಂಟೆಗಳಲ್ಲಿ ಜೀವಾಣುಗಳು ದ್ವಿಗುಣಗೊಳ್ಳುತ್ತಿರುತ್ತವೆ. ಮಾಲಿನ್ಯವನ್ನು ಆಕ್ರಮಿಸಿಕೊಳ್ಳುತ್ತವೆ.
ಒಂದು ಲೀಟರ್ ಪ್ಯಾಸೀವ್ ದ್ರಾವಣಕ್ಕೆ 285 ರೂ. ಇದನ್ನು ಚಟುವಟಿಕೆಯ ದ್ರಾವಣವನ್ನಾಗಿಸಿದಾಗ ೨೨ ಲೀಟರ್ ಆಗುತ್ತದೆ. ಆಗ ಒಂದು ಲೀಟರ್‌ಗೆ 35 ರೂ. ವೆಚ್ಚ. ಕೆರೆಗಳ ಮಾಲಿನ್ಯವನ್ನು ಪರಿಶೀಲಿಸಿದ ನಂತರ ಎಷ್ಟು ಸಾವಿರ ಲೀಟರ್ ದ್ರಾವಣ ಸಿಂಪಡಿಸಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ. ಸಾಮಾನ್ಯವಾಗಿ ಒಂದು ಕೆರೆಗೆ ೪ರಿಂದ ೫ ಸಾವಿರ ಲೀಟರ್ ದ್ರಾವಣ ಸಿಂಪಡಿಸಿದರೆ, ಒಂದೆರಡು ತಿಂಗಳಲ್ಲಿ ಕೊಳಕು ನಿರ್ಮೂಲನೆ ಆಗುತ್ತದೆ. ನಂತರ ವರ್ಷಗಳಲ್ಲಿ ಒಂದೆರಡು ಸಾವಿರ ಲೀಟರ್ ದ್ರಾವಣವನ್ನು ಎರಡು-ಮೂರು ವರ್ಷಕ್ಕೊಮ್ಮೆ ಸಿಂಪಡಿಸಿದರೆ ಸಾಕು ಎಂದು ಬಾಳೆ ಬಯೊ-ಟೆಕ್ನಾಲಜಿಯ ಅಧ್ಯಕ್ಷ ಚಂದ್ರಶೇಖರ ಬಾಳೆ ವಿವರಿಸುತ್ತಾರೆ.
ಸೊಳ್ಳೆ, ಜಿರಳೆ, ಇಲಿ-ಹೆಗ್ಗಣಗಳೂ ಇದರಿಂದ ನಿರ್ಮೂಲನೆ ಆಗುತ್ತವೆ. ತ್ಯಾಜ್ಯ ಗೊಬ್ಬರವಾಗಲೂ ಇದು ಸಹಕಾರಿ. ಸೊಳ್ಳೆಗಳ ನಿರ್ಮೂಲನೆ ಹಾಗೂ ಚರಂಡಿಗಳ ಕೊಳಕಿಗೆ ರಾಸಾಯನಿಕ ಸಿಂಪಡಿಸುವ ಬದಲು, ಈ ಜೀವಾಣು ದ್ರಾವಣ ಹಾಕಿದರೆ ಮಾಲಿನ್ಯಕ್ಕೆ ತೆರೆ ಬಿದ್ದಂತಾಗುತ್ತದೆ. ಅಲ್ಲದೆ ಪರಿಸರಕ್ಕೂ ಹಾನಿ ಮಾಡದಂತಾಗುತ್ತದೆ.

Sunday, January 17, 2010

ಅರ್ಕಾವತಿ ನದಿ ಪುನಶ್ಚೇತನಕ್ಕೆ ಉನ್ನತಮಟ್ಟದ ಸಮಿತಿ

ಅರ್ಕಾವತಿ ನದಿಯತ್ತ ರಾಜ್ಯ ಸರಕಾರ ಕೊನೆಗೂ ಕಣ್ಣು ತೆರೆದಿದೆ. ಈ ನದಿ ಪುನಶ್ಚೇತನಕ್ಕೆ ಒಂದು ಉನ್ನತ ಮಟ್ಟದ ಸಮಿತಿ ರಚಿಸಿದೆ. ನದಿ ಪುನಶ್ಚೇತನ ಮಾಡುತ್ತೇವೆ ಎಂದು ಕಳೆದ ಆರು ತಿಂಗಳಿಂದ ಹೇಳುತ್ತಿದ್ದ ಮಾತುಗಳು ಬರೀ ಹೇಳಿಕೆಯಾಗಿ ಉಳಿಯದೆ ಜಾರಿ ಆಗಿರುವುದು ಸಂತಸದ ವಿಷಯ.
ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ಜೀವನದಿಯಾದ ಅರ್ಕಾವತಿ ಪುನಶ್ಚೇತನಕ್ಕೆ ನಾಲ್ವರು ಸಚಿವರನ್ನು ಒಳಗೊಂಡ ಉನ್ನತಮಟ್ಟದ ಸಮಿತಿಯನ್ನು ಸರಕಾರ ರಚಿಸಿದೆ.
ತಿಪ್ಪಗೊಂಡನಹಳ್ಳಿ ಜಲಾನಯನದಲ್ಲಿ ಒಳಹರಿವು ಹೆಚ್ಚಿಸುವ ದೃಷ್ಟಿಯಿಂದ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಅಧಿಕಾರಯುಕ್ತ ಸಮಿತಿ ಬದಲಿಗೆ, ಜಲಸಂಪನ್ಮೂಲ ಸಚಿವರ ಅಧ್ಯಕ್ಷತೆಯಲ್ಲಿ ಅರ್ಕಾವತಿ ನದಿ ಪುನಶ್ಚೇತನ ಉನ್ನತ ಮಟ್ಟ ಸಮಿತಿ ರಚಿಸಲಾಗಿದೆ. ಈ ಸಂಬಂಧ ಜನವರಿ ೧೩ರಂದು ಸರಕಾರಿ ಆದೇಶ ಹೊರಬಿದ್ದಿದೆ.
ನಾಲ್ವರು ಸಚಿವರು ಹಾಗೂ ನಾಲ್ವರು ಶಾಸಕರನ್ನು ಒಳಗೊಂಡ ಸಮಿತಿಯಲ್ಲಿ ಕಂದಾಯ, ನಗರಾಭಿವೃದ್ಧಿ, ಕೃಷಿ, ಅರಣ್ಯ, ಜಲಮಂಡಳಿ, ಜಲಸಂಪನ್ಮೂಲ, ಲೋಕೋಪಯೋಗಿ, ಬಿಎಂಆರ್‌ಡಿಎ, ಗ್ರಾಮಾಂತರ-ರಾಮನಗರ ಜಿಲ್ಲಾಧಿಕಾರಿ ಸೇರಿದಂತೆ ೨೦ ಸದಸ್ಯರಿದ್ದಾರೆ.
ಅರ್ಕಾವತಿ ನದಿಯ ದುಸ್ಥಿತಿ ವಿವರಿಸುವ ’ಅರ್ಕಾವತಿ ಏಕೀ ದುರ್ಗತಿ?’ ಎಂಬ ಲೇಖನ ಮಾಲಿಕೆಯನ್ನು ವಿಜಯ ಕರ್ನಾಟಕ 2009 ಮೇ 25 ಜೂನ್ 12ರವರೆಗೆ 17ದಿನ ಪ್ರಕಟಿಸಿತ್ತು. ಈ ವಿಶೇಷ ವರದಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಸಲ್ಲಿಸಿದಾಗ, ನದಿ ಪುನಶ್ಚೇತನಕ್ಕೆ ಸಮಿತಿ ಅಥವಾ ಪ್ರಾಧಿಕಾರ ರಚಿಸುವ ಭರವಸೆ ನೀಡಿದ್ದರು.
ಇದಾದ ಮೇಲೆ, ಶಾಸಕರಾದ ಎಸ್.ಆರ್. ವಿಶ್ವನಾಥ್, ಎಸ್. ಮುನಿರಾಜು ನದಿ ಸಂರಕ್ಷಣೆಗೆ ಜನಜಾಗೃತಿಗಾಗಿ ನಂದಿಬೆಟ್ಟದಿಂದ ತಿಪ್ಪಗೊಂಡನಹಳ್ಳಿವರೆಗೆ ಸೆಪ್ಟೆಂಬರ್ 3ರಿಂದ 8 ರವರೆಗೆ ಪಾದಯಾತ್ರೆ ಕೈಗೊಂಡಿದ್ದರು. ಸಂಸದ ಅನಂತಕುಮಾರ್, ಸಚಿವರಾದ ಆರ್. ಅಶೋಕ್, ಸುರೇಶ್‌ಕುಮಾರ್, ರಾಮಚಂದ್ರಗೌಡ, ಪರಿಸರತಜ್ಞರಾದ ಡಾ.ಅ.ನ. ಯಲ್ಲಪ್ಪರೆಡ್ಡಿ, ಸುರೇಶ್ ಹೆಬ್ಳೀಕರ್ ಭಾಗವಹಿಸಿದ್ದನ್ನು ಸ್ಮರಿಸಬಹುದು.
ಅರ್ಕಾವತಿ ನದಿ ಹಾಗೂ ಇದರ ಉಪನದಿ ಕುಮುದ್ವತಿ ನದಿಗಳನ್ನು ಅವುಗಳ ಮೂಲದಿಂದ ಪುನಶ್ಚೇತನಗೊಳಿಸಿ, ಅವುಗಳ ಹರಿವನ್ನು ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುವ ಅಧಿಕಾರವನ್ನು ಈ ಉನ್ನತ ಸಮಿತಿ ಒಳಗೊಂಡಿದೆ. ನದಿ, ಅದರ ಅರಿವು, ಜಲಾನಯನ ಪ್ರದೇಶದ ರಕ್ಷಣೆ, ಒತ್ತುವರಿ ತೆರವು, ಮಾಲಿನ್ಯ ಮುಕ್ತಗೊಳಿಸಲು ಎಲ್ಲ ರೀತಿಯ ಕಾನೂನು ಕ್ರಮಗಳನ್ನು ಈ ಸಮಿತಿ ತೆಗೆದುಕೊಳ್ಳುವ ಅಧಿಕಾರ ಹೊಂದಿದೆ.
ಅರ್ಕಾವತಿ ನದಿ ಪುನಶ್ಚೇತನ ಸಮಿತಿ: ಅಧ್ಯಕ್ಷ- ಜಲಸಂಪನ್ಮೂಲ ಖಾತೆ ಸಚಿವ ಬಸವರಾಜ ಬೊಮ್ಮಾಯಿ; ಸದಸ್ಯರು- ಕಂದಾಯ ಸಚಿವ ಜಿ. ಕರುಣಾಕರ ರೆಡ್ಡಿ, ಸಾರಿಗೆ ಸಚಿವ ಆರ್. ಅಶೋಕ್, ಜಲಮಂಡಳಿ, ವಸತಿ ಖಾತೆ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು, ಶಾಸಕರಾದ ಶೋಭಾ ಕರಂದ್ಲಾಜೆ, ಜೆ. ನರಸಿಂಹಸ್ವಾಮಿ, ಎಸ್.ಆರ್. ವಿಶ್ವನಾಥ್, ಎಸ್. ಮುನಿರಾಜು, ನಗರಾಭಿವೃದ್ಧಿ, ಅರಣ್ಯ, ಕೃಷಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಯುಕ್ತ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಲಾನಯನ ಪ್ರದೇಶಾಭಿವೃದ್ಧಿ ಮಂಡಳಿ ನಿರ್ದೇಶಕ, ಗಣಿ ಮತ್ತು ಭೂಗರ್ಭಶಾಸ್ತ್ರ ಇಲಾಖೆ ನಿರ್ದೇಶಕ ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು.

Thursday, December 24, 2009

ಹೊರವಲಯದ ಕೆರೆಗಳೇ ಫಿಲ್ಟರ್ ತಾಣ

ಬೆಂಗಳೂರು ನಗರದಲ್ಲಿ ಕೆರೆಗಳ ಅಭಿವೃದ್ಧಿಗೆ ಕೋಟ್ಯಂತರ ರೂ. ವೆಚ್ಚ ಮಾಡಲಾಗುತ್ತಿದೆ. ಆದರೆ, ಹೊರವಲಯದ ಕೆರೆಗಳತ್ತ ಯಾರ ಚಿತ್ತವೂ ಹರಿದಿಲ್ಲ. ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಮರಳು ಮಾಫಿಯಾ ಕೆರೆಗಳನ್ನೇ 'ಫಿಲ್ಟರ್' ಕಾರ್ಯಕ್ಷೇತ್ರವನ್ನಾಗಿಸಿಕೊಂಡಿದೆ.
ಬಿಬಿಎಂಪಿ, ನಗರ-ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಗಮನಹರಿಸದಿದ್ದಲ್ಲಿ ಇನ್ನು ಕೆಲವೇ ತಿಂಗಳಲ್ಲಿ ಹೊರವಲಯದ ಕೆರೆಗಳು ವಿನಾಶದ ಅಂಚಿಗೆ ತಲುಪುತ್ತವೆ. ಇಲ್ಲೊಂದು ಕೆರೆ ಇತ್ತು ಎಂಬ ಸುಳಿವನ್ನೂ ಕೆರೆಯ ಅಂಗಳದಲ್ಲೇ ಫಿಲ್ಟರ್ ಮರಳು ದಂಧೆ ನಡೆಯುತ್ತಿದ್ದು, ನೂರಾರು ಲಾರಿಗಳು, ಹತ್ತಾರು ಜೆಸಿಬಿಗಳು ಪ್ರತಿನಿತ್ಯವೂ ಕಾರ್ಯನಿರ್ವಹಿಸುತ್ತಿವೆ.
ಕನಕಪುರ ರಸ್ತೆಯಲ್ಲಿ ಆರ್ಟ್ ಆಫ್ ಲಿವಿಂಗ್‌ಗಿಂತ ಮುನ್ನ ಕುಪ್ಪಿರೆಡ್ಡಿ ಕೆರೆಯಾದ ಕೂಡಲೇ ಎಡಬದಿಗೆ ತಿರುಗಿದರೆ, ಘಾಟ್‌ನಲ್ಲಿ ಸಂಚರಿಸಿದ ಅನುಭವ ಉಂಟಾಗುತ್ತದೆ. ಅದರ ಉಲ್ಲಾಸವನ್ನು ಕೆಲವೇ ಕಿಮೀ ದಾಟಿದಾಗ, ವಡೇರಹಳ್ಳಿ ಕೆರೆಯ ನೀರ ಸಾಮ್ರಾಜ್ಯ ದುಪ್ಪಟ್ಟುಗೊಳಿಸುತ್ತದೆ. ಕೆರೆಯ ಏರಿ ಮೇಲೆ ನಿಂತರೆ, ದಟ್ಟ ಅರಣ್ಯದ ನಡುವೆ ನೀರು ಕಣ್ಸೆಳೆಯುತ್ತದೆ. ಆದರೆ, ಅದಕ್ಕೇ ಬರಸಿಡಿಲಿನಂತೆ ಬಂದೆರಗುವುದು ಪಂಪ್‌ಸೆಟ್‌ಗಳ ಆರ್ಭಟ, ಜೆಸಿಬಿಗಳ ನರ್ತನ ಹಾಗೂ ಹತ್ತಾರು ಲಾರಿಗಳ ಸಂಚಾರ.
ವಡೇರಹಳ್ಳಿ, ಚಿಕ್ಕಲಿಂಗಶಾಸ್ತ್ರಿ, ಗೋಪಾಲಪುರ ಕೆರೆಗಳ ನೀರ ಸಾಮ್ರಾಜ್ಯ ಹಾಗೂ ಅಲ್ಲಿ ಪರಿಸರಸ್ನೇಹಿ ವಾತಾವರನದ ಬಗ್ಗೆ ವಿಜಯ ಕರ್ನಾಟಕ 'ನಮ್ಮುರ್ ಕೆರೆ' ಲೇಖನ ಮಾಲಿಕೆಯಲ್ಲಿ ವಿವರಿಸಿತ್ತು. ಈ ಬಗ್ಗೆ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಹೆಮ್ಮೆಪಟ್ಟುಕೊಂಡವು. ಚೆನ್ನಾಗಿವೆಯಲ್ಲ ಎಂದು ಬಿಬಿಎಂಪಿ ಇತ್ತ ನೋಡುವುದು ಬೇಡ ಎಂದು ನಿರ್ಧರಿಸಿತು. ಇದನ್ನೇ 'ಮರಳು ಮಾಫಿಯಾ' ಬಂಡವಾಳವಾಗಿಸಿಕೊಂಡಿದೆ. ಕಳೆದ ವರ್ಷ ಈ ಕೆರೆಗಳ ಸುತ್ತಮುತ್ತ ಫಿಲ್ಟರ್ ಮರಳಿನ ಗಾಳಿಯೂ ಸುಳಿದಿರಲಿಲ್ಲ. ಆದರೆ, ಇದೀಗ ಮೂರ್‍ನಾಲ್ಕು ತಿಂಗಳಿಂದ ಫಿಲ್ಟರ್ ದಂಧೆ ಹೆಮ್ಮರವಾಗಿ ಬೆಳೆದುನಿಂತಿದೆ.
ಕನಕಪುರ ಮುಖ್ಯರಸ್ತೆಯಲ್ಲಿ ಸಾಗುವಾಗ ಇಂತಹ ಕೃತ್ಯ ನಡೆಯುತ್ತಿದೆ ಎಂಬುದು ಅರಿವಿಗೇ ಬರುವುದಿಲ್ಲ. ಟ್ರ್ಯಾಕ್ಟರ್ ಅಷ್ಟೇ ಸಾಗುವ ರಸ್ತೆಗಳನ್ನು ಗ್ರಾಮಸ್ಥರು ನಿರ್ಮಿಸಿಕೊಂಡಿರಬಹುದೆಂದು ಭಾವಿಸಲಾಗುತ್ತದೆ. ಆದರೆ, ಈ ರಸ್ತೆಗಳನ್ನು ಒಂದೆರಡು ಗಂಟೆ ವೀಕ್ಷಿಸಿದರೆ, ಆಗಾಗ ಫಿಲ್ಟರ್ ಮರಳು ತುಂಬಿದ ಟ್ರ್ಯಾಕ್ಟರ್‌ಗಳು ಹೊರಬರುತ್ತಿರುತ್ತವೆ. ಅಲ್ಲಿಂದ ಬಂದ ಟ್ರ್ಯಾಕ್ಟರ್‌ಗಳು ವಿಶಾಲ ಪ್ರದೇಶದಲ್ಲಿ ಫಿಲ್ಟರ್ ಮರಳು ಸುರಿಯುತ್ತವೆ. ಅಲ್ಲಿಂದ ಲಾರಿಗಳು ಅದನ್ನು ನಗರಕ್ಕೆ ಕೊಂಡೊಯ್ಯುತ್ತವೆ. ಇದು ಕೆಲವೇ ಪ್ರದೇಶಗಳ ಮಾತು. ಬಹುತೇಕ ಫಿಲ್ಟರ್ ಮರಳಿನ ಘಟಕಗಳಿಗೆ ಲಾರಿ, ಟಿಪ್ಪರ್‌ಗಳು ಸುಲಭವಾಗಿ ಸಾಗಲು ಆ ಮಾಫಿಯಾವೇ ರಸ್ತೆ ನಿರ್ಮಿಸಿಕೊಂಡಿದೆ.
ಬೆಂಗಳೂರಿಗೆ ದೇವನಹಳ್ಳಿ, ರಾಮನಗರದ ಸುತ್ತಮುತ್ತಲಿಂದ ಮರಳು ಸರಬರಾಜಾಗುತ್ತದೆ. ಈ ಎಲ್ಲ ಪ್ರದೇಶಗಳಲ್ಲೂ ಫಿಲ್ಟರ್ ಮರಳಿನ ದಂಧೆಯೇ. ಈ ಬಗ್ಗೆ ಅಲ್ಲಿನ ಎಲ್ಲ ಪೊಲೀಸ್ ಠಾಣೆಗಳು ಸೇರಿದಂತೆ ಎಲ್ಲ ಇಲಾಖೆಯ ಹಿರಿಯ-ಕಿರಿಯ ಅಧಿಕಾರಿಗಳಿಗೂ ಮಾಹಿತಿ ಇದೆ. ಆದರೆ, ಮಾಮೂಲಿಗೆ ಕೈಚಾಚಿ ಮರಳು ಮಾಫಿಯಾ ಪರಿಸರವನ್ನು ಹಾಳುಮಾಡಲು ಸಹಕರಿಸುತ್ತಿದ್ದಾರೆ. ಕಟ್ಟಡಗಳಿಗೆ ಮಾರಕವಾಗಿರುವ ಈ ದಂಧೆಗೆ ಕುಮ್ಮಕ್ಕು ನೀಡಿ ಜನರ ಭವಿಷ್ಯದ ಮೇಲೂ ಕಲ್ಲುಹಾಕುತ್ತಿದ್ದಾರೆ. ಸಚಿವರು ಇವರಿಗೇ ಮಣೆ ಹಾಕುತ್ತಿದ್ದಾರೆ. ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವವರ್‍ಯಾರು?
ಎಲ್ಲಿ, ಯಾವ ಕೆರೆಗಳಲ್ಲಿ ಫಿಲ್ಟರ್?
ಕನಕಪುರ ರಸ್ತೆ ಆಸುಪಾಸಿನಲ್ಲಿರುವ ವಡೇರಹಳ್ಳಿ, ಚಿಕ್ಕಲಿಂಗಶಾಸ್ತ್ರಿ, ಸೋಮನಹಳ್ಳಿ, ರಾಜಾಪುರ, ಚಂದಾಪುರ; ಆನೇಕಲ್ ತಾಲೂಕಿನ ಜಿಗಣಿ, ಹಾರಗದ್ದೆ, ರಾಜಾಪುರ, ಸರ್ಜಾಪುರ, ರಾಮನಗರ ತಾಲೂಕಿನ ಬಹುತೇಕ ಪ್ರದೇಶ ಹಾಗೂ ದೇವನಹಳ್ಳಿ ವ್ಯಾಪ್ತಿಯ ವಿಜಯಪುರ ಕೆರೆ ಸೇರಿದಂತೆ ನಗರದ ಹೊರವಲಯದ ಸುಮಾರು ೫೦ಕ್ಕೂ ಹೆಚ್ಚು ಕೆರೆಗಳ ಅಂಗಳದಲ್ಲಿ ಫಿಲ್ಟರ್ ದಂಧೆ ನಡೆಯುತ್ತಿದೆ. ಇಷ್ಟೇ ಅಲ್ಲ, ಈ ಪ್ರದೇಶಗಳಲ್ಲಿರುವ ರೈತರು ತಮ್ಮ ಕೃಷಿಯನ್ನು ಮರೆತು ಫಿಲ್ಟರ್ ದಂಧೆಗೇ ತಮ್ಮನ್ನು ತೆರೆದುಕೊಂಡಿದ್ದಾರೆ.
ತೋಟ ಹಾಗೂ ಮನೆ ಮುಂದಿರುವ ಬಾವಿ ಹಾಗೂ ಬೋರ್‌ವೆಲ್‌ಗಳಿಗೆ ಪಂಪ್‌ಸೆಟ್ ಅಳವಡಿಸಿಕೊಂಡಿರುವ ರೈತರ ಮನೆಗಳ ಮುಂದೆ, ರಾಶಿ ರಾಶಿ ಮಣ್ಣು ಬಿದ್ದಿದೆ. ಕೃಷಿಯನ್ನು ಮರೆತು 'ಫುಲ್‌ಟೈಮ್' ಕೆಲಸವನ್ನಾಗಿ ಫಿಲ್ಟರ್ ಕಾರ್ಯವನ್ನೇ ವಹಿಸಿಕೊಂಡಿದ್ದಾರೆ. ತಿಂಗಳಿಗೆ ಕನಿಷ್ಠ ಐದಾರು ಲೋಡ್ ಮರಳು ಫಿಲ್ಟರ್ ಮಾಡಿದರೆ, ಸುಮಾರು 20 ಸಾವಿರ ರೂ. ಸಂಪಾದನೆ ಆಗುತ್ತದೆ. ಆದ್ದರಿಂದಲೇ, ಬಹುತೇಕ ಮನೆಗಳ ಮುಂದೆ ಮಣ್ಣಿನ ರಾಶಿ, ಕೆಸರು, ಪಂಪ್‌ಸೆಟ್ ಆರ್ಭಟ, ನೀರೆರೆಚಾಟ, ಫಿಲ್ಟರ್ ಮರಳಿನ ಗುಡ್ಡೆಯೇ ಕಾಣುತ್ತದೆ.

ಬಿಡಿಎ: ಕೆರೆಗಳಲ್ಲಿ 240 ಕೋಟಿ ಲೀಟರ್ ಸಂಗ್ರಹ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬಡಾವಣೆಗಳಲ್ಲಿರುವ 12 ಕೆರೆಗಳು ಮುಂದಿನ ಮಳೆಗಾಲದಲ್ಲಿ ಸುಮಾರು 240 ಕೋಟಿ ಲೀಟರ್ ಮಳೆ ನೀರು ಸಂಗ್ರಹಿಸಲು ಸಿದ್ಧವಾಗಲಿವೆ. ಅಷ್ಟೇಅಲ್ಲ, ಅಂತರ್ಜಲ ಮಟ್ಟದ ವೃದ್ಧಿಗೆ ಪ್ರಮುಖ ಜಲಮೂಲಗಳೂ ಆಗಲಿವೆ.
ಏಪ್ರಿಲ್ ವೇಳೆಗೆ 12 ಕೆರೆಗಳ ಅಭಿವೃದ್ಧಿಯನ್ನು ಸುಮಾರು 105 ಕೋಟಿ ರೂ.ಗಳ ವೆಚ್ಚದಲ್ಲಿ ಬಿಡಿಎ ಪೂರ್ಣಗೊಳಿಸಲಿದೆ. ಕೆರೆಗಳಲ್ಲಿ ಹೂಳು ತೆಗೆದಿರುವುದರಿಂದ ಹೆಚ್ಚಿನ ನೀರು ಸಂಗ್ರಹವಾಗುತ್ತದೆ. ಜತೆಗೆ, ಅಲ್ಲಲ್ಲಿ ಅಂತರ್ಜಲ ಪುನಶ್ಚೇತನಕ್ಕೆ ಹೊಂಡಗಳನ್ನೂ ನಿರ್ಮಿಸಲಾಗುತ್ತದೆ. ಇದು ಸುತ್ತಮುತ್ತಲಿನ ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಹೆಚ್ಚಾಗಲು ನೆರವಾಗುತ್ತದೆ.
ಬಿಡಿಎ ವ್ಯಾಪ್ತಿಯ ಕೆರೆಗಳೆಲ್ಲ ತುಂಬಿ ಹೋದರೆ, ಬೆಂಗಳೂರಿಗೆ ದಿನವೊಂದಕ್ಕೆ ಪೂರೈಕೆಯಾಗುತ್ತಿರುವ ನೀರಿಗಿಂತ ಮೂರು ಪಟ್ಟು ಹೆಚ್ಚು ನೀರು ಈ 12 ಕೆರೆಗಳಲ್ಲೇ ಸಂಗ್ರಹವಾಗಲಿದೆ. ಇದೇ ರೀತಿ ಎಲ್ಲ ಕೆರೆಗಳು ಅಭಿವೃದ್ಧಿ ಆಗಿದ್ದೇ ಆದರೆ, ವಾತಾವರಣ ತಂಪು, ಅಂತರ್ಜಲ ಸಂಪು.
ಅರ್ಕಾವತಿ ಬಡಾವಣೆ ವ್ಯಾಪ್ತಿಯಲ್ಲಿರುವ ಜಕ್ಕೂರು-ಸಂಪಿಗೆ ಹಳ್ಳಿ, ರಾಚೇನಹಳ್ಳಿ, ವೆಂಕಟೇಶಪುರ; ವಿಶ್ವೇಶ್ವರಯ್ಯ ಬಡಾವಣೆ ವ್ಯಾಪ್ತಿಯ ಉಲ್ಲಾಳು, ಮಲ್ಲತ್ತಹಳ್ಳಿ, ಕೊಮ್ಮಘಟ್ಟ; ಅಂಜನಾಪುರದ ಕೊತ್ತನೂರು ಕೆರೆ; ಬನಶಂಕರಿ 6ನೇ ಘಟ್ಟದ ತಲಘಟ್ಟಪುರ, ಸೋಮಪುರ ಮತ್ತು ಕೋನಸಂದ್ರ ಕೆರೆ ಅಭಿವೃದ್ಧಿ ಕಾರ್ಯಗಳು ನಾನಾ ಹಂತದಲ್ಲಿವೆ. ಈ ಎಲ್ಲ ಕೆರೆಗಳ ಕಾಮಗಾರಿ ಏಪ್ರಿಲ್ ವೇಳಗೆ ಪೂರ್ಣಗೊಳ್ಳಲಿದೆ.
ಬಡಾವಣೆ ನಿರ್ಮಾಣ ಸಮಯದಲ್ಲಿ ಕೋನಸಂದ್ರ ಹಾಗೂ ತಲಘಟ್ಟಪುರ ಕೆರೆಯನ್ನು ಬಿಡಿಎ ಒತ್ತುವರಿ ಮಾಡಿಕೊಂಡಿತ್ತು. ಯಾವುದೇ ಕಾರಣಕ್ಕೂ ಕೆರೆ ಒತ್ತುವರಿ ಆಗುವುದು ಬೇಡ ಎಂಬ ಆಯುಕ್ತ ಸಿದ್ಧಯ್ಯನವರ ಆದೇಶದ ಮೇರೆಗೆ, ಒತ್ತುವರಿ ತೆರವುಗೊಳಿಸಲಾಗಿದೆ. ಅಲ್ಲದೆ, ಮತ್ತಷ್ಟು ಭಾಗವನ್ನೂ ಕೆರೆಗೆ ಹೆಚ್ಚುವರಿಯಾಗಿ ಸೇರಿಸಿಕೊಂಡು, ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಅರಣ್ಯ ಉಪಸಂರಕ್ಷಣಾಧಿಕಾರಿ ಅಮರನಾಥ್ ತಿಳಿಸಿದರು.
ಕೆರೆಗಳ ಅಭಿವೃದ್ಧಿಯಲ್ಲಿ ಬಿಡಿಎ ಕಾರ್ಯಚೂಚಿ
ಕೆರೆ ಗಡಿಯನ್ನು ಗುರುತಿಸಿ, ಅದರ ಸಂರಕ್ಷಣೆ; ಒಳ ಮತ್ತು ಹೊರ ಹರಿವಿನ ಕಾಲುವೆಗಳ ಮರುಸ್ಥಾಪನೆ; ಒಳಚರಂಡಿ ನೀರು ಹರಿವು ಮಾರ್ಗ ಬದಲು ಮತ್ತು ಸಂಸ್ಕರಣೆ; ಹೂಳು ಮತ್ತು ಕಳೆ ನಿರ್ಮೂಲನೆ; ಒಳಚರಂಡಿ ಹಾಗೂ ಮಳೆ ನೀರಿನ ಮೂಲಕ ಘನತ್ಯಾಜ್ಯ ಕೆರೆಗೆ ಹರಿಯದಂತೆ ನಿಗ್ರಹಿಸಲು ಹೂಳು ಕವಾಟಕ, ಬೇಲಿ ನಿರ್ಮಾಣ; ಏರಿಯನ್ನು ಸದೃಢಗೊಳಿಸುವುದು; ಕುಷ್ಕಿ ಭೂಮಿ ನಿರ್ಮಾಣ; ಕೆರೆ ತೀರದಲ್ಲಿ ಸಸಿ ನೆಡುವುದು. ಈ ಎಲ್ಲ ಕಾರ್ಯಗಳು ಕೆರೆಗಳಲ್ಲಿ ನಾನಾ ಹಂತಗಳಲ್ಲಿ ನಡೆಯುತ್ತಿವೆ.
ಎಲ್ಲ ಕೆರೆಗಳಲ್ಲಿ ವಾಕಿಂಗ್ ಪಾಥ್ ಹಾಗೂ ದ್ವೀಪಗಳು ಬರಲಿದ್ದು, ಕೆರೆಯ ಸುತ್ತಲೂ ಸ್ವದೇಶಿ ಮರ-ಗಿಡಗಳು ಕಂಗೊಳಿಸಲಿವೆ. ವೆಂಕಟೇಶಪುರ ಕೆರೆಯಲ್ಲಿ ಯಕ್ಷಕೊಳ, ಶಿಲ್ಪೋದ್ಯಾನ, ಬ್ರಹ್ಮಕಮಲ ವನಗಳು ನಿರ್ಮಾಣವಾಗಲಿವೆ. ಒಳಚರಂಡಿ ನೀರಿನಿಂದ ಮುಕ್ತವಾಗುವ ಎಲ್ಲ ಕೆರೆಗಳೂ ಪಿಕ್‌ನಿಕ್ ಸ್ಟಾಟ್ ಆಗಲಿವೆ. ಮುಂದಿನ ಮಳೆಗಾಲದಲ್ಲಿ ಮಳೆನೀರು ವ್ಯರ್ಥವಾಗದೆ, ಕೆರೆಗಳಲ್ಲಿ ಸಂಗ್ರಹವಾಗಲಿದ್ದು ಅಂತರ್ಜಲ ಹೆಚ್ಚಿಸಲಿದೆ. ಬೆಂಗಳೂರಿನ ವಾತಾವರಣವೂ ತಂಪಾಗಲಿದೆ.
ಯಾವ ಕೆರೆಗೆ ಎಷ್ಟು ವೆಚ್ಚ?
ಜಕ್ಕೂರು- ಸಂಪಿಗೆಹಳ್ಳಿ 2191 ಲಕ್ಷ
ರಾಚೇನಹಳ್ಳಿ 1900 ಲಕ್ಷ
ವೆಂಕಟೇಶಪುರ 47 ಲಕ್ಷ
ಉಲ್ಲಾಳು 449 ಲಕ್ಷ
ಮಲ್ಲತ್ತಹಳ್ಳಿ 2295 ಲಕ್ಷ
ಕೊಮ್ಮಘಟ್ಟ 644 ಲಕ್ಷ
ರಾಮಸಂದ್ರ 1340 ಲಕ್ಷ
ಕೊತ್ತನೂರು 360 ಲಕ್ಷ
ತಲಘಟ್ಟಪುರ 240 ಲಕ್ಷ
ಸೋಮಪುರ 385 ಲಕ್ಷ
ಕೋನಸಂದ್ರ 610 ಲಕ್ಷ

ಪಾರಂಪರಿಕ ತಾಣಗಳ ಪಟ್ಟಿಗೆ ಕೆರೆಗಳು
ಕರ್ನಾಟಕ 2020 ವಿಷನ್‌ನಲ್ಲಿ ಬೆಂಗಳೂರಿನ ಕೆರೆಗಳನ್ನು ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ರಾಜ್ಯ ಸರಕಾರಕ್ಕೆ ಸಲಹೆ ನೀಡಲಾಗುತ್ತದೆ ಎಂದು ವಿಷನ್‌ನ ಸಮಿತಿಯಲ್ಲಿರುವ ಬಿಡಿಎ ಕೆರೆಗಳ ಅಭಿವೃದ್ಧಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಪರಿಸರವಾದಿ ಡಾ. ಅ.ನ. ಯಲ್ಲಪ್ಪರೆಡ್ಡಿ ತಿಳಿಸಿದ್ದಾರೆ.
ಬಿಡಿಎ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿ ಕಾಮಗಾರಿಯನ್ನು ಶುಕ್ರವಾರ ಪರಿವೀಕ್ಷಿಸಿದ ಅವರು, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ 2008ರಲ್ಲಿ ರೂಪಿಸಿರುವ ನಿಯಮಗಳನ್ನು ಕೆರೆಗಳನ್ನು ಉಳಿಸಲು ರಾಜ್ಯ ಸರಕಾರ ಅಳವಡಿಸಿಕೊಳ್ಳಲು ಸಲಹೆ ನೀಡಲಾಗುತ್ತದೆ. ಇದಕ್ಕಾಗಿ, ಸೂಕ್ತ ಕಾನೂನು ರಚಿಸಲು, ರೂಪುರೇಷೆಯ ಕರಡು ಸಿದ್ಧಪಡಿಸುವ ಯೋಜನೆಯನ್ನು ವಿಷನ್ ಸಮಿತಿ ಹೊಂದಿದೆ. ಕೆರೆಗಳಿಗೆ ಹಾನಿ ಉಂಟುಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಸರಕಾರಕ್ಕೆ ಸಲಹೆ ನೀಡಲಾಗುತ್ತದೆ ಎಂದು ವಿವರಿಸಿದ್ದಾರೆ.
ಸುಮಾರು 70 ಜಾತಿಯ ಪಕ್ಷಿಗಳು ಬೆಂಗಳೂರಿಗೆ ವಲಸೆ ಬರುತ್ತಿದ್ದವು. 1985ರಲ್ಲಿ ನಡೆದ ಗಣತಿಯ ಪ್ರಕಾರ, ಕೆರೆಗಳಲ್ಲಿ ಪಕ್ಷಿಗಳಿಗೆ ಸೂಕ್ತ ತಾಣ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

Monday, November 30, 2009

ಮಲ್ಲೇಶ್‌ಪಾಳ್ಯದಲ್ಲಿ ಕೆರೆ ಉಳಿಸಿ: ಅಭಿಯಾನ; ಜಾತ್ರೆ

ನಗರದಲ್ಲಿ ಹಿಂದೆ ಕೆರೆಗಳು ಧಾರ್ಮಿಕ ಆಚರಣೆಗಳ ಕೇಂದ್ರ ಬಿಂದುವಾಗಿದ್ದವು. ಇಂದು ಆಚರಣೆಗಳ ಸೊಗಡಿನಿಂದಲೇ ಕೆರೆಗಳನ್ನು ಸಂರಕ್ಷಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ’ಕೆರೆ ಉಳಿಸಿಎಂದು ಸಾರಲು, ಊರಹಬ್ಬ, ಜಾತ್ರೆಯ ವಾತಾವರಣ ನಿಮಾರ್ಣ ವಾಗುತ್ತಿದೆ. ಮಲ್ಲೇಶಪಾಳ್ಯ ಇಂತಹ ಜಾಗೃತಿಹಬ್ಬದಲ್ಲಿ ಮಿಂದೆದ್ದಿತು.
ಬೆಂಗಳೂರಿನಲ್ಲಿ ಕೆರೆಗಳು ಅಭಿವೃದ್ಧಿ ಆಗುತ್ತಿರುವುದು ಸಂಸ್ಕೃತಿಯನ್ನು ಪ್ರೀತಿಸುವ ಪ್ರತಿ ಮನಸ್ಸಿಗೂ ಆಹ್ಲಾದ ಉಂಟು ಮಾಡುತ್ತದೆ. ಇಂತಹ ಯೋಜನೆಗಳು ಅಲ್ಲಲ್ಲಿ ಆರಂಭವಾಗುತ್ತಿರುವುದು ಸಂತಸಕರ. ಅದರಲ್ಲೂ ಒಂದು ಕೆರೆ ಅಭಿವೃದ್ಧಿಗೆ ಊರ ಸಂಸ್ಕೃತಿಯನ್ನು ಸಾರುವ ಮೆರವಣಿಗೆ ಮಾಡುವುದು ಶ್ಲಾಘನೀಯ. ಇದು ಊರಹಬ್ಬದ ಆಚರಣೆ ಆಗಬೇಕು. ಪ್ರತಿಯೊಂದು ಕೆರೆಯಲ್ಲೂ ಪ್ರತಿ ತಿಂಗಳೂ ತೆಪ್ಪೋತ್ಸವ ನಡೆಯಬೇಕು. ಇದು ನಮ್ಮ ಸಂಸ್ಕೃತಿಯನ್ನು ಸಾರುವ ಉತ್ಸವಗಳು ಕೆರೆಗಳಲ್ಲೇ ಆಗಬೇಕು
ಸರ್ ಸಿ.ವಿ. ರಾಮನ್‌ನಗರ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕಗ್ಗದಾಸಪುರ ಮತ್ತು ಮಲ್ಲೇಶಪಾಳ್ಯ ಕೆರೆ ಅಭಿವೃದ್ಧಿಗಾಗಿ ಜಾಗೃತಿ ಜಾಥಾ ನಡೆಯಿತು. ಬೆಂಗಳೂರಿನಲ್ಲಿ ಬಿಬಿಎಂಪಿ ಮತ್ತು ಬಿಡಿಎ ಕೆರೆಗಳನ್ನು ಅಭಿವೃದ್ಧಿ ಮಾಡುತ್ತಿವೆ. ಆದರೆ ಕಗ್ಗದಾಸಪುರ-ಮಲ್ಲೇಶಪಾಳ್ಯ ಕೆರೆಯನ್ನು ಶಾಸಕರ ನಿಧಿಯಿಂದ ಈ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡಿರುವುದು ಇಲ್ಲಿನ ವಿಶೇಷ.
ಊರಹಬ್ಬದಂತೆ ಮೆರವಣಿಗೆ ಮೂಲಕ ಸಾಗಿ ಶಾಸಕ ಎಸ್. ರಘು ಕೆರೆ ಅಭಿವೃದ್ಧಿಗೆ ಚಾಲನೆ ನೀಡಿದರು. ಜಾನಪದ ಕಲಾತಂಡಗಳ ನೃತ್ಯ, ಕೆರೆ ಉಳಿಸಿ ಎಂದು ಸಾರುವ ಸಾವಿರಾರು ಟಿಶರ್ಟ್ ಧಾರಿಗಳು ಈ ಮೆರವಣಿಗೆಯ ಹೈಲೈಟ್.
’ಕೆರೆಗಳು ಉಳಿದರೆ ಮಾತ್ರ ಮನುಕುಲ ಉಳಿಯಲು ಸಾಧ್ಯ’ ಎಂಬ ಹಿರಿಯ ಮಾತನ್ನು ಅನುಸರಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಜಯ ಕರ್ನಾಟಕದಲ್ಲಿ ಪ್ರಕಟವಾದ ’ನಮ್ಮೂರ್ ಕೆರೆ’ ಲೇಖನ ಮಾಲಿಕೆಯಿಂದ ಕೆರೆಯ ನಿಜಸ್ಥಿತಿಯ ಅರಿವಾಯಿತು. ಕಗ್ಗದಾಸಪುರ ಕೆರೆ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದು, ಬಿಬಿಎಂಪಿ ಇದರ ಅಭಿವೃದ್ಧಿಗೆ ಯೋಜನೆ ರೂಪಿಸುತ್ತಿದೆ. ಇದು ಮುಂದಿನ ವರ್ಷ ಕಾರ್ಯಗತವಾಗುತ್ತದೆ. ಆದರೆ, ಈ ಕೆರೆಗೆ ಬೇಲಿ ಹಾಕಿ, ಹೂಳು ತೆಗೆಯಬೇಕಾದ್ದು ತುರ್ತುಸ್ಥಿತಿ. ಆದ್ದರಿಂದ ’ಶಾಸಕರ ನಿಧಿ’ಯಿಂದ ಈ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಎಸ್. ರಘು ತಿಳಿಸಿದರು.
ಕೆರೆಗೆ ಬೇಲಿ, ತಡೆಗೋಡೆ, ಹೂಳು ತೆಗೆಯುವುದು, ಮಾಲಿನ್ಯ ನಿಯಂತ್ರಣ, ವಾಕಿಂಗ್ ಟ್ರ್ಯಾಕ್ ಸೌಲಭ್ಯಗಳು ಮುಂದಿನ ಆರು ತಿಂಗಳಲ್ಲಿ ಸುಮಾರು 1.25 ಕೋಟಿ ರೂ.ಗಳಲ್ಲಿ ನಿರ್ಮಾಣವಾಗಲಿದೆ. ಬಿಬಿಎಂಪಿ ವತಿಯಿಂದ ಮುಂದಿನ ಯೋಜನೆ ಕೈಗೊಂಡು ಈ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿಸಲಾಗುತ್ತದೆ. ಕಗ್ಗದಾಸಪುರ ಕೆರೆಯ ದಡದಲ್ಲಿರುವ ಇತಿಹಾಸ ಪ್ರಸಿದ್ಧ ಜಲಕಂಠೇಶ್ವರ ದೇವಸ್ಥಾನದ ಅಭಿವೃದ್ಧಿಗೆ 38 ಲಕ್ಷ ಮೀಸಲಿರಿಸಲಾಗಿದೆ ಎಂದರು.
ಮಲ್ಲೇಶ್‌ಪಾಳ್ಯದಲ್ಲಿ ಬಸ್ ನಿಲ್ದಾಣ, ಈ ಬಸ್‌ನಿಲ್ದಾಣದಿಂದ ಮೆಜೆಸ್ಟಿಕ್, ಶಿವಾಜಿನಗರ, ಕೆ.ಆರ್. ಮಾರುಕಟ್ಟೆ, ಐಟಿಪಿಎಲ್‌ಗೆ ವೋಲ್ವೊ ಬಸ್ ಸೌಲಭ್ಯ ಹಾಗೂ ಹೈಮಾಸ್ಟ್ ವಿದ್ಯುತ್‌ದೀಪಗಳಿಗೆ ಶಾಸಕ ಎಸ್. ರಘು ಚಾಲನೆ ನೀಡಿದರು. ಮಲ್ಲೇಶ್‌ಪಾಳ್ಯ ಮುಖ್ಯರಸ್ತೆ ಅಗಲೀಕರಣಗೊಂಡು, ಡಾಂಬರೀಕರಣವಾಗಿದ್ದು, ಇದನ್ನು ಸಾರ್ವಜನಿಕ ಬಳಕೆಗೆ ಅರ್ಪಿಸಲಾಯಿತು.

Tuesday, November 10, 2009

183 lakes in Bengaluru - this is the official... ಬೆಂಗಳೂರಿನಲ್ಲಿ 183 ಕೆರೆ- ಇದು ಅಧಿಕೃತ...

123 ಕೆರೆಗಳಿಗೆ ಶುಕ್ರದೆಸೆ; ಭೂದಾಹಿಗಳಿಗೆ ಬೇಲಿ



ಉದ್ಯಾನನಗರಿಯಲ್ಲಿ ಗತವೈಭವದ ಇತಿಹಾಸ ಮೆಲುಕುಹಾಕುತ್ತಾ, ಬಡಕಲಾಗುತ್ತಿದ್ದ ಕೆರೆಗಳಿಗೆ ಕೊನೆಗೂ ಶುಕ್ರದೆಸೆ ಆವರಿಸಿಕೊಳ್ಳುತ್ತಿದೆ. ನಗರದಲ್ಲಿ ನೂರಾರು ಕೆರೆಗಳಿವೆಯೇ ಎಂಬ ಪ್ರಶ್ನೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯೇ ಉತ್ತರ ನೀಡಿದೆ. 183 ಕೆರೆಗಳು ಬಿಬಿಎಂಪಿ ಗಣನೆಗೆ ಬಂದಿದ್ದು, 123 ಕೆರೆಗಳಿಗೆ ಸದ್ಯವೇ ಬೇಲಿ ಬೀಳಲಿದೆ.
ಬೆಂಗಳೂರಿನಲ್ಲಿ ಈಗಾಗಲೇ ಅಭಿವೃದ್ಧಿಗೆ ಚಾಲನೆ ದೊರಕಿರುವ 36 ಕೆರೆಗಳಲ್ಲದೆ, 123 ಕೆರೆಗಳ ಸರ್ವೆ ಕಾರ್ಯ ಆರಂಭವಾಗಿದೆ. ಅವುಗಳಲ್ಲಿರುವ ಒತ್ತುವರಿಯನ್ನು ತೆರವುಗೊಳಿಸಿ, ಜನವರಿ ಅಂತ್ಯದೊಳಗೆ ಬೇಲಿ ಹಾಕಲಾಗುತ್ತದೆ. ಇದಕ್ಕಾಗಿ 40 ಕೋಟಿ ರೂ.ಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಐದಾರು ಕೆರೆಗಳಲ್ಲಿ ಬೇಲಿ ಕಾಮಗಾರಿಯೂ ಆರಂಭವಾಗಿದೆ.
ವಿಜಯ ಕರ್ನಾಟಕ ಬೆಂಗಳೂರಿನ ಕೆರೆಗಳ ದುಸ್ಥಿತಿಯನ್ನು 'ನಮ್ಮೂರ್ ಕೆರೆ' ಲೇಖನ ಮಾಲಿಕೆ ಮೂಲಕ ವಿವರಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಆನಂತರ ಬೆಂಗಳೂರಿನ ಕೆರೆಗಳ ಅಭಿವೃದ್ಧಿಗೆ ಬಿಬಿಎಂಪಿ, ಬಿಡಿಎ ವಿಶೇಷ ಯೋಜನೆಗಳನ್ನು ರೂಪಿಸಿವೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ (2009-10) ಬಿಬಿಎಂಪಿ 21 ಕೆರೆಗಳಿಗೆ ಕಾಯಕಲ್ಪ ನೀಡುವ ಕಾಮಗಾರಿಗೆ ಚಾಲನೆ ನೀಡಿದೆ. ಇದರಲ್ಲಿ ಪ್ರಮುಖವಾಗಿ ಒತ್ತುವರಿ ತೆರವುಗೊಳಿಸಿರುವುದು ಗಮನಾರ್ಹ. ಯಾವುದೇ ಒತ್ತುವರಿಯನ್ನು ಮನ್ನಾ ಮಾಡಬೇಡಿ ಎಂಬ ಬಿಬಿಎಂಪಿ ಆಯುಕ್ತರ ಆದೇಶವನ್ನು ಅಧಿಕಾರಿಗಳು ಪಾಲಿಸುತ್ತಿದ್ದಾರೆ. ಆದರೆ, ಕೆಲವೆಡೆ ಶಾಸಕರ ಒತ್ತಾಸೆಗೆ ಕೆಲವು ಒತ್ತುವರಿ ತೆರವಾಗಿಲ್ಲ. ಅಭಿವೃದ್ಧಿಯ ಪಥದಲ್ಲಿರುವ ಕೆರೆಯಲ್ಲಿ ಹೂಳು ತೆಗೆದು, ಬೇಲಿ ಹಾಕುವ ಕಾರ್ಯ ಪ್ರಗತಿಯಲ್ಲಿದೆ.
ಕೆರೆಗಳಿಗೆ ಬೇಲಿ ಹಾಕುವ ಕಾಮಗಾರಿಗೆ ಮುನ್ನ ಅಲ್ಲಿನ ಒತ್ತುವರಿಗೆ ಪ್ರಥಮವಾಗಿ ಅಂತ್ಯ ಹಾಡಲಾಗುತ್ತದೆ. ಇದರಿಂದ ಬಡಾವಣೆಗಳಿಗಾಗಿ ಕೆರೆಗಳನ್ನು ನುಂಗಿಕೊಂಡಿದ್ದ ಭೂದಾಹಿಗಳಿಗೆ ಹಿನ್ನಡೆ ಆಗಲಿದೆ. ಅಷ್ಟೇಅಲ್ಲ, ಹೊಸ ಒತ್ತುವರಿಗೂ ಕಡಿವಾಣ ಬೀಳಲಿದೆ.
ಈ ನಡುವೆ ಬಿಬಿಎಂಪಿ ಅಧಿಕಾರಿಗಳು ಬೆಂಗಳೂರಿನಲ್ಲಿರುವ ಕೆರೆಗಳ ಸಮೀಕ್ಷೆ ಕಾರ್ಯ ಆರಂಭಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 183 ಕೆರೆಗಳನ್ನು ಗುರುತಿಸಲಾಗಿದೆ. ಇದರಲ್ಲಿ, ಲಾಲ್‌ಬಾಗ್, ಅಗರ, ಹೆಬ್ಬಾಳ, ಹಲಸೂರು, ಕೆಂಪಾಂಬುಧಿ, ಯಡಿಯೂರು, ಸ್ಯಾಂಕಿ, ಹೆಣ್ಣೂರು, ಕೆಂಗೇರಿ, ವಸಂತಪುರ, ಹಲಗೆವಡೇರಹಳ್ಳಿ ಕೆರೆ ಸೇರಿದಂತೆ 25 ಕೆರೆಗಳನ್ನು ಬಿಡಿಎ, ಬಿಬಿಎಂಪಿ ಹಾಗೂ ಅರಣ್ಯ ಇಲಾಖೆ ಅಭಿವೃದ್ಧಿಪಡಿಸಿವೆ. ಬಿಬಿಎಂಪಿ 21 ಕೆರೆಗಳಲ್ಲಿ ಅಭಿವೃದ್ಧಿ ಕಾಮಗಾರಿ ಆರಂಭಿಸಿದೆ. ಬಿಡಿಎ ತನ್ನ ವ್ಯಾಪ್ತಿಯ 12 ಕೆರೆಗಳಲ್ಲಿ ಅಭಿವೃದ್ಧಿಗೆ ಚಾಲನೆ ನೀಡಿದೆ. ಕೆರೆ ಅಭಿವೃದ್ಧಿ ಪ್ರಾಧಿಕಾರ ಅಮೃತಹಳ್ಳಿ ಹಾಗೂ ಜಕ್ಕೂರು ಕೆರೆಗಳನ್ನು ಅಭಿವೃದ್ಧಿಪಡಿಸುತ್ತಿದೆ. ಇನ್ನು ಉಳಿದ 123 ಕೆರೆಗಳಿಗೆ ಬಿಬಿಎಂಪಿ, ಒತ್ತುವರಿ ತೆರವುಗೊಳಿಸಿ ಬೇಲಿ ಹಾಕುವ ಕಾರ್ಯವನ್ನು ಆರಂಭಿಸಿದೆ.
ನಗರದ 11 ವಿಧಾನಸಭೆ ವ್ಯಾಪ್ತಿಯಲ್ಲಿರುವ ಈ 123 ಕೆರೆಗಳ ಸಮೀಕ್ಷೆ ಕಾರ್ಯ ಆರಂಭವಾಗಿದೆ. ಇದರಲ್ಲಿ 50 ಕೆರೆಗಳ ಸರ್ವೆ ಮುಗಿದಿದ್ದು, ಉಳಿದ್ದದ್ದು ಇನ್ನು ಒಂದು ತಿಂಗಳಲ್ಲಿ ಮುಗಿಯಲಿದೆ. ಡಿಸೆಂಬರ್ 2ನೇ ವಾರದಲ್ಲಿ ಈ ಎಲ್ಲ ಕೆರೆಗಳಿಗೆ ಬೇಲಿ ಹಾಕುವ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ಜನವರಿ ಅಂತ್ಯಕ್ಕೆ ಈ ಕಾಮಗಾರಿ ಮುಗಿಯಲಿದೆ.
ಬೆಳ್ಳಂದೂರು, ಅಟ್ಟೂರು, ಕಲ್ಕೆರೆ, ಚಿನ್ನಪ್ಪನಹಳ್ಳಿ, ವರ್ತೂರು ಕೆರೆಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಇಲ್ಲಿ ಬೇಲಿ ಹಾಕುವ ಕಾರ್ಯ ಆರಂಭವಾಗಿದ್ದು, ಅಂಗಳದಲ್ಲಿ ಸಸಿ ನೆಡಲಾಗುತ್ತಿದೆ. ಮಳೆ ನೀರು ಕೆರೆಗಳಿಗೆ ಹರಿಯಲು ರಾಜಾಕಾಲುವೆಗಳ ತೆರವುಗೊಳಿಸಲಾಗುತ್ತಿದೆ.
ಕೆರೆಗಳಲ್ಲಿ ಔಷಧ ಸಸ್ಯ
ಬಿಬಿಎಂಪಿ ಅಭಿವೃದ್ಧಿಪಡಿಸುತ್ತಿರುವ ಕೆರೆಗಳ ಅಂಗಳದಲ್ಲಿ ಔಷಧೀಯ ಗುಣಗಳುಳ್ಳ ಸಸ್ಯಗಳನ್ನು ನಡೆಲಾಗುತ್ತಿದೆ. ಇದಕ್ಕಾಗಿ 16 ಸಸ್ಯಗಳನ್ನು ಗುರುತಿಸಲಾಗಿದೆ. ಅಮೃತಬಳ್ಳಿ, ಮಾವು, ಬಜೆ, ಆಡುಸೊಗೆ, ಲಾವಂಚಾ, ಭೃಂಗರಾಜ, ದಾಸವಾಳ, ಚಕ್ರಮುಖಿ, ಬಿಳೀ ಲಕ್ಕಿ ಸಸ್ಯಗಳು ಇದರಲ್ಲಿ ಸೇರಿವೆ.
ಬೆಂಗಳೂರಿನಲ್ಲಿ ಎಂಬತ್ತೇ ಕೆರೆಗಳಿರುವುದು ಎಂದು ಕೈಕಟ್ಟಿ ಕುಳಿತಿದ್ದ ಅಧಿಕಾರಿಗಳು, ಇದೀಗ ಎಚ್ಚೆತ್ತುಕೊಂಡಿದ್ದಾರೆ. ಅದಕ್ಕೇ 183 ಕೆರೆಗಳು ಕಾಣಿಸಿಕೊಂಡಿವೆಯಲ್ಲದೆ, ಲೆಕ್ಕಕ್ಕೂ ಸಿಕ್ಕಿವೆ. ಕಂದಾಯ ಇಲಾಖೆಯ ಕಡತಗಳನ್ನು ಪರಿಶೀಲಿಸಿ ಮತ್ತಷ್ಟು ಶೋಧಕಾರ್ಯ ಆದದ್ದೇ ಆದರೆ, ಇನ್ನೂ ನೂರಾರು ಕೆರೆಗಳು ಸಿಗುತ್ತವೆ. ಅವುಗಳೆಲ್ಲಕ್ಕೂ ಬೇಲಿ ಬಿದ್ದರೆ ಭೂದಾಹಿಗಳು
ವಿಧಾನಸಭೆ ಕ್ಷೇತ್ರವಾರು ಬೇಲಿ ಕಾಣಲಿರುವ ಕೆರೆಗಳು
ಮಹದೇವಪುರ-26, ಬೆಂಗಳೂರು ದಕ್ಷಿಣ-24, ಯಶವಂತಪುರ-19, ಕೆ.ಆರ್. ಪುರ-15, ಬ್ಯಾಟರಾಯನಪುರ-10, ಬೊಮ್ಮನಹಳ್ಳಿ-7, ರಾಜರಾಜೇಶ್ವರಿನಗರ-7, ಯಲಹಂಕ-5, ಸರ್ವಜ್ಞನಗರ-4, ದಾಸರಹಳ್ಳಿ-4, ಸಿವಿ ರಾಮನ್‌ನಗರ-2

183 lakes in Bengaluru - this is the official...

123 A blessing for the lakes; a fence for the land-thirsty

Reminiscing the glorious past of the garden city, the lakes that were deteriorating are finally getting a boost. The Bruhat Bengaluru Mahanagara Palike has answered the question of whether there are hundreds of lakes in the city. 183 lakes have been taken into account by the BBMP, and 123 lakes will soon be fenced off.
In addition to the 36 lakes for which development has already begun in Bengaluru, survey work has begun for 123 lakes. Encroachments in them will be cleared and fenced off by the end of January. For this, the tender process of Rs 40 crore has been completed, and fencing work has also begun in five or six lakes.
It may be recalled here that Vijaya Karnataka described the poor condition of Bengaluru's lakes through the 'Nammoor Lake' article series. Later, BBMP and BDA have formulated special plans for the development of Bengaluru's lakes.
In the current financial year (2009-10), BBMP has launched the work of rehabilitating 21 lakes. It is noteworthy that encroachments have been removed. The officials are following the BBMP Commissioner's order not to vacate any encroachment. However, in some places, some encroachments have not been removed due to the insistence of the MLAs. The work of removing silt and fencing the lakes that are on the development path is in progress.
Before the work of fencing the lakes, the encroachments there will be put to an end first. This will give a setback to the land grabbers who have swallowed the lakes for their settlements. Not only that, it will also curb new encroachments.
Meanwhile, BBMP officials have started the survey of lakes in Bengaluru. 183 lakes have been identified under BBMP jurisdiction. Of these, 25 lakes including Lalbagh, Agar, Hebbal, Halsur, Kempambudhi, Yediyur, Sanki, Hennur, Kengeri, Vasantapura, Halagevaderahalli Lake have been developed by the BDA, BBMP and the Forest Department. BBMP has started development work in 21 lakes. BDA has launched development in 12 lakes under its jurisdiction. The Lake Development Authority is developing Amruthahalli and Jakkur lakes. BBMP has started the work of clearing encroachments and fencing the remaining 123 lakes.
The survey work of these 123 lakes under the jurisdiction of 11 assembly constituencies of the city has begun. The survey of 50 lakes has been completed, and the remaining will be completed in a month. The work of fencing all these lakes will be launched in the 2nd week of December. This work will be completed by the end of January.
Encroachments have been cleared in the Bellandur, Attur, Kalkere, Chinnappanahalli, and Varthur lakes. Fencing has begun here, and saplings are being planted in the courtyards. Rajakaluvas are being cleared to allow rainwater to flow into the lakes.

Medicinal plants in lakes

Plants with medicinal properties are being grown in the courtyards of the lakes being developed by BBMP. 16 plants have been identified for this. These include Amruthaballi, Mango, Baje, Adusoge, Lavancha, Bhringaraja, Dasavala, Chakramukhi, and Bili Lucky plants.
The officials who were sitting idly by and thinking that there were only eighty lakes in Bangalore have now woken up. That is why 183 lakes have not only been identified, but have also been accounted for. If further searches are done by checking the files of the Revenue Department, hundreds more lakes will be found. If all of them are fenced, then the land grabbers will be destroyed

Assembly constituency wise lakes that will see fences

Mahadevapura-26, Bangalore South-24, Yeshwantpura-19, K.R. Pura-15, Byatarayanapura-10, Bommanahalli-7, Rajarajeshwari Nagar-7, Yelahanka-5, Sarvajnanagar-4, Dasarahalli-4, CV Ramannagar-2

Tuesday, October 27, 2009

ಕೆಂಪಾಂಬುಧಿ ಕೆರೆ ಏರಿ ಮೇಲೆ...

ಬೆಂಗಳೂರಿನ ಕೆಂಪಾಂಬುಧಿ ಕೆರೆಯ ಏರಿ ಮೇಲೆ ಮೊನ್ನೆ ಶುಕ್ರವಾರ ಅಂದರೆ, ಅಕ್ಟೋಬರ್ 23ರಂದು ವಿಶಿಷ್ಟ ಕಾರ್ಯಕ್ರಮ ಆಯೋಜನೆಯಾಗಿತ್ತು. "ನಮ್ಮ ಕೆರೆ ಸಂರಕ್ಷಣೆಯಲ್ಲಿ ನಮ್ಮ ಪಾತ್ರ' ಎಂಬ ಶೀರ್ಷಿಕೆಯಡಿ ಕೆರೆಯ ಸಂರಕ್ಷಣೆ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸುವ ಉದ್ದೇಶ ಕಾರ್ಯಕ್ರಮದ್ದಾಗಿತ್ತು. ಜತೆಗೆ ಸ್ಥಳೀಯ ಶಾಸಕರಿಂದ ಕೆರೆ ಅಭಿವೃದ್ಧಿಗೆ ಏನು ಮಾಡುತ್ತೀರಿ ಎಂದು ಕೇಳುವ ಪ್ರಶ್ನೆಯ ವೇದಿಕೆಯನ್ನೂ ಸೃಷ್ಟಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಸ್ನೇಹ ಚೈತನ್ಯ ಸಾಮಾಜಿಕ ಟ್ರಸ್ಟ್ ಹಾಗೂ ಪ್ರಗತಿ ಪರ ಮಹಿಳಾ ಸಮಾಜ ಆಯೋಜಿಸಿದ್ದರಿಂದ ಮಹಿಳೆಯರೇ ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕೆರೆ ಸಂರಕ್ಷಣೆಗೆ ಮಹಿಳೆಯರೇ ಬೇಕು. ಅವರಲ್ಲಿರುವ ಕಾಳಜಿ ಹಾಗೂ ಮನೆಯಲ್ಲಿ ನೀರು ಬರಲಿಲ್ಲವೆಂದರೆ ಅವರೇ ಪಾಡು ಪಡಬೇಕಾದ್ದು ಅಲ್ಲವೆ?
ಕೆಂಪೇಗೌಡ ಮನೆತನದವರು ಕಟ್ಟಿಸಿದ ಕೆರೆ ಕೆಂಪಾಂಬುಧಿ ಕೆರೆ. ಪಾಳೇಗಾರರ ವಂಶಸ್ಥರಾದ ಕೆಂಪಮ್ಮನವರ ಹೆಸರು ಈ ಕೆರೆಗಿತ್ತು. ಕೆಂಪಮ್ಮ ಕೆರೆ ಕಾಲ ಕಳೆದಂತೆ ಕೆಂಪಾಂಬುಧಿ ಆಯಿತು. ಕುಡಿಯುವ ನೀರು ಪೂರೈಸುತ್ತಿದ ಕೆರೆ ಇಂದು, ವಿಷಾನಿಲ ಸೂಸುತ್ತಿದೆ. ಕೆರೆಯ ಅಂಗಳದಲ್ಲಿ ಓಡಾಡುವುದೂ ಕಷ್ಟಕರವಾಗಿದೆ. 1983ರಿಂದಲೂ ಈ ಕೆರೆಯ ಅಭಿವೃದ್ಧಿ ಆಗುತ್ತಿದೆ ಎಂಬುದು ಬಹುತೇಕ ಜನರಿಗೆ ತಿಳಿದಿಲ್ಲ. ಅಂದರೆ, ಎಷ್ಟು ಕೋಟಿ ರೂ. ಕೆರೆಗೆ ಚೆಲ್ಲಿದ್ದಾರೆ ಯೋಚಿಸಿ! ಆದರೂ ಈ ಕೆರೆ ಅಭಿವೃದ್ಧಿ ಆಗಿಲ್ಲ. ಈಗ ಮತ್ತೆ ೮ ಕೋಟಿ ರೂ.ಗಳಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಅಂದರೆ ನಮ್ಮ ಹಣ ಹೇಗೆ ವ್ಯಯ ಆಗುತ್ತಿದೆ ನೋಡಿ. ಇದನ್ನು ನಾವು ಎದ್ದು ನಿಂತು ಕೇಳಲಿಲ್ಲವೆಂದರೆ ಅದೆಲ್ಲದರ ಹೊರೆ ನಮ್ಮ ಮೇಲೇ ಬೀಳುತ್ತದೆ.
ಕುಡಿಯುವ ನೀರು ಕೊಡಿ ಎಂದು ಜನಪ್ರತಿನಿಧಿಗಳ ಮೇಲೆ ಒತ್ತಾಯ ಮಾಡುತ್ತೇವೆ. ಆದರೆ, ಸ್ಥಳೀಯ ವಾತಾವರಣ ಹೇಗಿದೆ? ಅದನ್ನು ಉಳಿಸಿಕೊಳ್ಳುವುದು ಹೇಗೆ? ಎಂಬುದರ ಬಗ್ಗೆ ಕಾಳಜಿ ವಹಿಸುವುದಿಲ್ಲ. ಕಾವೇರಿ ನೀರು ಸಾಲುತ್ತಿಲ್ಲ ಎಂದರೆ, ಬೋರ್‌ವೆಲ್ ಹಾಕಿಬಿಡಿ. ಟ್ಯಾಂಕ್ ಕಟ್ಟಿಸಿ, ಅಲ್ಲಿಂದ ನೀರು ತೆಗೆದುಕೊಳ್ಳುತ್ತೇವೆ ಎಂಬುದು ಸಲಹಾತ್ಮಕ ಒತ್ತಾಯವಾಗಿರುತ್ತದೆ. ಆದರೆ, ಸುತ್ತಮುತ್ತಲಿನ ಪರಿಸರ ಉತ್ತಮವಾಗಿಲ್ಲದಿದ್ದರೆ ಬೋರ್‌ವೆಲ್‌ನಲ್ಲಿ ಒಳ್ಳೆ ನೀರು ಎಲ್ಲಿಂದ ಬರುತ್ತೆ? ಅಂತರ್ಜಲ ಮೂಲವಾಗಿರುವ ಕೆರೆಗಳಲ್ಲಿ ತ್ಯಾಜ್ಯ, ರಾಸಾಯನಿಕ ಅಂಶ, ಕೊಳಕೇ ಇದ್ದರೆ, ಅದೇ ಬೋರ್‌ವೆಲ್‌ನಲ್ಲೂ ಬರುತ್ತದೆ. ಇದು ಎಲ್ಲರ ಗಮನದಲ್ಲಿರಲಿ.
ಅಂದಹಾಗೆ, ಈ ಕಾರ್ಯಕ್ರಮ ಮಧ್ಯಾಹ್ನ 3.3-0ಕ್ಕೆ ಆಯೋಜನೆಯಾಗಿತ್ತು. ಸಮಾರಂಭಕ್ಕೆ ಸಚಿವ ಸುರೇಶ್ ಕುಮಾರ್ ಬರಲಿಲ್ಲ. ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಬಗ್ಗೆ ತನಿಖೆಗೆ ಕೇಂದ್ರದ ತಂಡ ಆಗಮಿಸಿದ್ದರಿಂದ ಅದರಲ್ಲಿ ಪಾಲ್ಗೊಳ್ಳುವ ಕಾರಣದಿಂದ ಸಚಿವರು ಬರಲಿಲ್ಲವಂತೆ. ಅದರಿಂದ ಕಾರ್ಯಕ್ರಮ ಆರಂಭ ತಡವಾಯಿತು. ಸ್ಥಳೀಯ ಶಾಸಕ ರವಿ ಸುಬ್ರಹ್ಮಣ್ಯ ಕೂಡ ತಡವಾಗಿಯೇ ಬಂದರು. ಆದರೆ, ಪರಿಸರವಾದಿ ಡಾ. ಅ.ನ. ಯಲ್ಲಪ್ಪರೆಡ್ಡಿ ಸರಿಯಾದ ಸಮಯಕ್ಕೆ ಹಾಜರಿದ್ದರು.
ಕೆರೆ ಸಂರಕ್ಷಣೆಗೆ ಅಲ್ಲಲ್ಲಿ ಆಯಾ ಸ್ಥಳೀಯ ಸಂಘ-ಸಂಸ್ಥೆಗಳು ಟೊಂಕಕಟ್ಟಿ ನಿಂತರೆ, ಏನು ಅಭಿವೃದ್ಧಿ ಆಗುತ್ತಿದೆ ಎಂದು ಪ್ರಶ್ನಿಸಿದರೆ ಬೇಕಾಬಿಟ್ಟಿಗೆ ತಡೆಬೀಳುತ್ತದೆ. ಇಂತಹ ಪ್ರಯತ್ನ ಅಲ್ಲಲ್ಲಿ ಆಗಲಿ.
ವಾಹನಗಳಿಗೇ ಹೆಚ್ಚು ಕಾವೇರಿ ನೀರು ಬಳಕೆ
ನೂರಾರು ಕಿಲೋಮೀಟರ್ ದೂರದಿಂದ ಬೆಂಗಳೂರಿಗೆ ತರುತ್ತಿರುವ ಕಾವೇರಿ ನೀರು ಕುಡಿಯುವುದಕ್ಕಿಂತ ಹೆಚ್ಚಾಗಿ ಇತರೆ ಬಳಕೆಗೆ ಅರ್ಧಕ್ಕಿಂತ ಹೆಚ್ಚು ಬಳಕೆ ಆಗುತ್ತಿದೆಯೇ?
ಹೌದು, ಎನ್ನುತ್ತಾರೆ ಬಸವನಗುಡಿ ಶಾಸಕ ರವಿಸುಬ್ರಮಣ್ಯ. ಬೆಂಗಳೂರು ನಗರದಲ್ಲಿ ಶೇ.೫೦ಕ್ಕೂ ಹೆಚ್ಚು ಕಾವೇರಿ ನೀರು ವಾಹನಗಳನ್ನು ತೊಳೆಯುವುದಕ್ಕೆ ವ್ಯಯವಾಗುತ್ತಿದೆ. ಈ ಬಳಕೆಯನ್ನು ಕಡಿಮೆ ಮಾಡದಿದ್ದರೆ, ಕುಡಿಯುವ ನೀರಿಗೆ ಸಂಕಷ್ಟ ಎದುರಾಗಲಿದೆ ಎಂಬ ಆತಂಕವೂ ಶಾಸಕರದ್ದಾಗಿದೆ.
ಬೃಂದಾವನಗರದ ಸ್ನೇಹ ಚೈತನ್ಯ ಸಾಮಾಜಿಕ ಸೇವಾ ಟ್ರಸ್ಟ್ ಹಾಗೂ ಪ್ರಗತಿಪರ ಮಹಿಳಾ ಸಮಾಜದ ಸಹಯೋಗದಲ್ಲಿ ಬಸವನಗುಡಿಯ ಕೆಂಪಾಂಬುಧಿ ಕೆರೆ ಏರಿಯಲ್ಲಿ "ನಮ್ಮ ಕೆರೆ ಸಂರಕ್ಷಣೆಯಲ್ಲಿ ನಮ್ಮ ಪಾತ್ರ' ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಶುಕ್ರವಾರ ಅವರು ಮಾತನಾಡಿದರು.
ಕೆಂಪಾಂಬುಧಿ ಕೆರೆಯನ್ನು 1983ರಿಂದಲೂ ಅಭಿವೃದ್ಧಿ ಮಾಡಲಾಗುತ್ತಿದೆ. ಆದರೂ ಕೆರೆ ಶುಚಿಯಾಗಿಲ್ಲ. ಇದೀಗ ಕೆರೆಯ ಸಮಗ್ರ ಅಭಿವೃದ್ಧಿಗೆ ೮ ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದೆ. ನವೆಂಬರ್ ಎರಡನೇ ವಾರದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ಆರು ತಿಂಗಳಲ್ಲಿ ಕೆರೆ ಅಭಿವೃದ್ಧಿ ಆಗುವುದಲ್ಲದೆ, ನಾಡಪ್ರಭು ಕೆಂಪೇಗೌಡರ ಕಾಲದ ಚಿತ್ರಣ ನೀಡುವ ಸ್ಮಾರಕ ಭವನವನ್ನು ಇಲ್ಲಿ ನಿರ್ಮಿಸಲಾಗುತ್ತದೆ. ನಗರಕ್ಕೆ ಮಾದರಿ ಕೆರೆಯಾಗಿ ಕೆಂಪಾಂಬುಧಿ ಕೆರೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಚನ್ನಮ್ಮರಾಗಿ ಕೆರೆ ಉಳಿಸಿ
ಕಿತ್ತೂರು ರಾಣಿ ಚನ್ನಮ್ಮ ರೀತಿಯಲ್ಲಿ ಧೈರ್ಯವಂತರಾಗಿ ನನ್ನ ಜತೆ ಹೋರಾಡಿ. ನೂರು ಚನ್ನಮ್ಮಂದಿರು ನನ್ನೊಂದಿಗೆ ಹೋರಾಡಿದರೆ ಬೆಂಗಳೂರಿನಲ್ಲಿರುವ ಎಲ್ಲ ಕೆರೆಗಳನ್ನೂ ಉಳಿಸುತ್ತೇನೆ ಎಂದು ಪರಿಸರವಾದಿ ಡಾ. ಅ.ನ. ಯಲ್ಲಪ್ಪರೆಡ್ಡಿ ಆಶ್ವಾಸನೆ ನೀಡಿದರು.
ನಿಮ್ಮ ಸಮೀಪವಿರುವ ಕೆರೆಗೆ ಯಾರಾದರೂ ಮಣ್ಣು ತುಂಬಿದರೆ, ತ್ಯಾಜ್ಯವನ್ನು ತಂದು ಸುರಿಯುತ್ತಿದ್ದರೆ ಅವರಿಗೆ ಪೊರಕೆ ಸೇವೆ ಮಾಡಿ. ಕೆರೆ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸಿ. ಯೋಜನೆ ಬಗ್ಗೆ ನಿಗಾವಹಿಸಿ, ಲೆಕ್ಕ ಪರಿಶೋಧಿಸಿ. ಇದರಿಂದ ಕೆರೆ ಅಭಿವೃದ್ಧಿ ಆಗುತ್ತದೆ ಎಂದು ಕರೆ ನೀಡಿದರು.
ಬೃಂದಾವನಗರದ ಸ್ನೇಹ ಚೈತನ್ಯ ಸಾಮಾಜಿಕ ಸೇವಾ ಟ್ರಸ್ಟ್ ಮಹಾಪೋಷಕ ಸಿದ್ದೇಗೌಡ, ವಿಜಯ ಕರ್ನಾಟಕದ ಹಿರಿಯ ವರದಿಗಾರ ಆರ್. ಮಂಜುನಾಥ್, ನಿಸರ್ಗ ಪ್ರಸ್ಥಾನದ ಅಧ್ಯಕ್ಷ ಚಂದ್ರಶೇಖರ ಬಾಳೆ, ಗ್ಲೋಬಲ್ ಟೆಕ್ನಾಲಜಿಯ ಪ್ರೊ. ವೈ. ಲಿಂಗರಾಜು, ಪರಿಸರವಾದಿ ಶಿವಮಲ್ಲು, ಟ್ರಸ್ಟ್ ಅಧ್ಯಕ್ಷೆ ಶೋಭಾಗೌಡ ಹಾಗೂ ಪ್ರಗತಿಪರ ಮಹಿಳಾ ಸಂಘದ ಅಧ್ಯಕ್ಷೆ ಕಮಲ ಬಾಳೆ ಹಾಜರಿದ್ದರು.

Tuesday, September 29, 2009

ಹೆಸರಘಟ್ಟ ಜಲಾಶಯದಲ್ಲಿ 7 ಅಡಿ ನೀರು

ನಂದಿ ಬೆಟ್ಟದಿಂದ ತಾಯಿ ಅರ್ಕಾವತಿ ಹರಿಯಲು ಇನ್ನೂ ಅನುವು ಮಾಡಿಕೊಟ್ಟಿಲ್ಲ. ನದಿ ಪುನಶ್ಚೇತನದ ಮಾತು, ಪಾದಯಾತ್ರೆ ಮಾತ್ರ ಆಗಿದೆ. ಒತ್ತುವರಿ ತೆರವಿಗೆ ಒಂದಿಷ್ಟೂ ಮನೋನಿರ್ಧಾರವಾಗಿದೆ. ಅಷ್ಟರಲ್ಲೇ, ವರುಣ ಕೃಪೆ ತೋರಿದ್ದಾನೆ. 10 ವರ್ಷಗಳ ನಂತರ ಹೆಸರಘಟ್ಟ ಜಲಾಶಯಕ್ಕೆ ಹೆಚ್ಚಿನ ನೀರು ಹರಿಸಿದ್ದಾನೆ. ನೀರೆಲ್ಲ ಹೆಸರಘಟ್ಟ ಸುತ್ತಮುತ್ತಲಿಂದ ಬಂದದ್ದು. ನಂದಿಯಲ್ಲಿನ ಮಳೆ ಕಾಲುವೆ ಮೂಲಕ ನೇರವಾಗಿ ಹರಿದಿದ್ದರೆ ಹೆಸರಘಟ್ಟ ಇನ್ನೆಷ್ಟು ನೀರು ತುಂಬಿಕೊಳ್ಳುತ್ತಿತ್ತು? ಅಂದರೆ, ಈಗ ಸುರಿಯುತ್ತಿರುವ ಮಳೆಯ ಪ್ರಮಾಣದಲ್ಲೇ ಹೆಸರಘಟ್ಟಕ್ಕೆ ನೀರು ಹರಿಸಬಹುದೆಂಬುದು ಸಾಬೀತಾಗಿದೆ ಅಲ್ಲವೆ? ಇನ್ನೇಕೆ ತಡ? ಕಾರ್ಯಾರಂಭವಾಗಲಿ....

  • ಬೆಂಗಳೂರಿಗೆ ಪ್ರಥಮ ಬಾರಿಗೆ ಸಂಸ್ಕರಿತ ನೀರು ಪೂರೈಸಿದ ಹೆಸರಘಟ್ಟ ಜಲಾಶಯ ಹತ್ತು ವರ್ಷಗಳ ನಂತರ 7 ಅಡಿ ನೀರಿನ ಸೌಭಾಗ್ಯ ಕಂಡಿದೆ. ನಂದಿ ಬೆಟ್ಟದಲ್ಲಿ ಹುಟ್ಟುವ ಅರ್ಕಾವತಿ ನದಿಯೇ ಇದಕ್ಕೆ ಪ್ರಮುಖ ಆಸರೆಯಾಗಿದ್ದು, ಕಳೆದ7ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ನೀರಿನ ಹರಿವು ಹೆಚ್ಚಾಗಿದೆ.

ಹೆಸರಘಟ್ಟಕ್ಕೆ ನೀರು ಬರಬೇಕೆಂದರೆ ಬ್ಯಾತ ಹಾಗೂ ಕಾಕೋಳು ಕೆರೆಗಳು ಕೋಡಿ ಆಗಬೇಕು. ಇದರಲ್ಲಿ ಬ್ಯಾತ ಕೆರೆ ಕೋಡಿ ಹರಿಯುತ್ತಿದ್ದು, ಹೆಚ್ಚಿನ ನೀರು ಈ ಮೂಲಕವೇ ಹೆಸರಘಟ್ಟಕ್ಕೆ ಹರಿಯುತ್ತಿದೆ. 20 ದಿನಗಳ ಹಿಂದಷ್ಟೇ ಗಾಲ್ಫ್ ಮೈದಾನದಂತಾಗಿದ್ದ ಹೆಸರಘಟ್ಟ, ಇಂದು ಹತ್ತು ವರ್ಷಗಳ ಹಿಂದಿನ ವೈಭವಕ್ಕೆ ಮರಳಿದೆ. ಜಲಾಶಯದ ಏರಿಯಿಂದ ನೋಡಿದ ದೂರದಷ್ಟೂ ನೀರು ಕಾಣುತ್ತಿದೆ. 1998ರಲ್ಲಿ 8 ಅಡಿ ನೀರು ಬಂದಿತ್ತು. ಅದಾದ ಮೇಲೆ 3-4 ಅಡಿಯಷ್ಟು ನೀರಿನ ಸಂಗ್ರಹ ಮಾತ್ರ ಇಲ್ಲಿ ದಾಖಲಾಗುತ್ತಿತ್ತು.
ಹೆಸರಘಟ್ಟದಲ್ಲಿರುವ ನೀರಿನ ಮಾಪನದಲ್ಲಿ 49 ಅಡಿ ಎಂದು ಸೂಚಿಸುತ್ತಿದೆ. ಆದರೆ, ಗಣನೆಗೆ ತೆಗೆದುಕೊಳ್ಳುವುದು ೪೨ ಅಡಿ ಯಿಂದ. ಉಳಿದದ್ದು ಹೂಳು ತುಂಬಿದೆ. ಹೆಸರಘಟ್ಟ ಜಲಾಶಯದಲ್ಲಿ ಹೂಳು ಏಕೆ ತೆಗೆಯುತ್ತೀರಿ? ನೀರು ಬರೋಲ್ಲ ಎಂದು ಕೊಂಕು ನುಡಿದಿದ್ದವರಿಗೆ ವರುಣ ಸೂಕ್ತ ಉತ್ತರ ನೀಡಿದ್ದಾನೆ. ಅದಕ್ಕೇ ದಿನವೂ ನೂರಾರು ಜನರು ಹೆಸರಘಟ್ಟಕ್ಕೆ ಬಂದು ನೀರಿನ ಸಂಗ್ರಹದ ಸೊಬಗು ಸವಿಯುತ್ತಿದ್ದಾರೆ.
ಅರ್ಕಾವತಿ ನದಿಯಿಂದ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೂ ಈ ವರ್ಷ ಹೆಚ್ಚಿನ ನೀರು ಹರಿದುಬರುತ್ತಿದೆ. ಹಿಂದೆ ಕೇವಲ ಕಲ್ಮಶಯುಕ್ತ ನೀರು ಮಾತ್ರ ತಿಪ್ಪಗೊಂಡನಹಳ್ಳಿ ಸೇರುತ್ತಿತ್ತು. ಈ ಬಾರಿ ಸ್ವಚ್ಛ ಮಳೆ ನೀರು ಹರಿದುಬರುತ್ತಿರುವುದು ಜಲಮಂಡಳಿ ಅಧಿಕಾರಿಗಳಲ್ಲಿ ಹರ್ಷ ತಂದಿದೆ. ಕಳೆದ ಐದಾರು ವರ್ಷಗಳಲ್ಲಿ ಇಷ್ಟು ನೀರಿನ ಹರಿವು ಅರ್ಕಾವತಿ ನದಿಯಿಂದ ತಿಪ್ಪಗೊಂಡನಹಳ್ಳಿಗೆ ಬಂದಿರಲಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.
ಅರ್ಕಾವತಿ ನದಿ ಹರಿದರೆ ಹೆಸರಘಟ್ಟ ಮತ್ತು ತಿಪ್ಪಗೊಂಡನಹಳ್ಳಿ ಜಲಾಶಯ ತುಂಬುತ್ತವೆ. ನಂದಿಬೆಟ್ಟದಿಂದ ಕಾಲುವೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿ, ಒತ್ತುವರಿ ತೆರವುಗೊಳಿಸಿ, ನದಿ ಪುನಶ್ಚೇತನವಾದರೆ ಹೆಸರಘಟ್ಟಕ್ಕೆ ನೀರು ತುಂಬುತ್ತದೆ ಎಂದು 'ವಿಜಯ ಕರ್ನಾಟಕ' ವರದಿ ಮಾಡಿತ್ತು. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಶಾಸಕರಾದ ಎಸ್.ಆರ್. ವಿಶ್ವನಾಥ್ ಹಾಗೂ ಎಸ್. ಮುನಿರಾಜು ಪಾದಯಾತ್ರೆಯನ್ನೂ ಮಾಡಿದ್ದರು. ಸರಕಾರ ಪುನಶ್ಚೇತನಕ್ಕೆ ಸಮಿತಿ ರಚಿಸುವ ಭರವಸೆಯನ್ನೂ ನೀಡಿದೆ. ಈ ಪುನಶ್ಚೇತನದ ಪ್ರಕ್ರಿಯೆ ಆರಂಭವಾಗುವ ಮುನ್ನವೇ ಹೆಸರಘಟ್ಟಕ್ಕೆ ಹೆಚ್ಚಿನ ನೀರು ಹರಿದು ಬಂದಿದೆ. ಇನ್ನು ರಾಜಕಾಲುವೆ ಒತ್ತುವರಿ ತೆರವುಗೊಳಿಸಿದ್ದರೆ ಇನ್ನೆಷ್ಟು ನೀರು ಬಂದಿರುತ್ತಿತ್ತು? ಈ ಬಗ್ಗೆ ಆಲೋಚಿಸಿ, ಅರ್ಕಾವತಿ ನದಿ ಪುನಶ್ಚೇತನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು.

ಮಳೆ: ಒಳಭಾಗದಲ್ಲಿ ಕಿರಿಕಿರಿ; ಹೊರಭಾಗದಲ್ಲಿ ನಲಿನಲಿ

ಭಾರಿ ಮಳೆ ಬಂದಾಗ ಮಹಾನಗರ ತತ್ತರಿಸುತ್ತದೆ. ಒಳಭಾಗದಲ್ಲಿರುವ ಜನರ ಶಾಪಕ್ಕೂ ಗುರಿಯಾಗುತ್ತದೆ. ಏಕೆಂದರೆ, ಇಲ್ಲಿ ಬರೀ ನೀರಲ್ಲ, ಕೊಳಕೂ ಮನೆ ಒಳಗೆ ನುಗ್ಗುತ್ತದೆ. ಆದರೆ, ಹೊರವಲಯ ಹಾಗಲ್ಲ. ಮಳೆಯಲ್ಲಿ ಮಿಂದೇಳಲು ಬಯಸುತ್ತದೆ. ಅದಕ್ಕೇ, ಉದ್ಯಾನನಗರಿಯ ಅಂಚಿನಲ್ಲಿ ನದಿಯೊಂದು ದಶಕದ ನಂತರ ಸ್ವಚ್ಛವಾಗಿ ಹರಿಯುತ್ತಿದೆ.
ಸೋಮವಾರದಿಂದ ಬೆಂಗಳೂರು ಭಾರಿ ಮಳೆ ಸುರಿಯುತ್ತಿದೆ. ನೂರಾರು ಮಿಲಿಮೀಟರ್‌ನಷ್ಟು ಮಳೆಯಾಗಿದೆ. ನಗರದಲ್ಲಿ ನೂರಾರು ಕೆರೆಗಳಿದ್ದರೂ ಈ ನೀರನ್ನು ತಮ್ಮ ಒಡಲಿಗೆ ಸೇರಿಸಿಕೊಳ್ಳುವಲ್ಲಿ ವಿಫಲವಾಗಿವೆ. ರಾಜಕಾಲುವೆ ಹಾಗೂ ಮಳೆ ನೀರು ಕೆರೆಗೆ ಹರಿಯುವ ವ್ಯವಸ್ಥೆ ಇಲ್ಲ. ಆದ್ದರಿಂದಲೇ ನಗರ ಹಲವು ಭಾಗದಲ್ಲಿ ಒಳಚರಂಡಿ ನೀರು ಮನೆಯೊಳಗೆ ನುಗ್ಗಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹೀಗಿದ್ದರೂ, ವೃಷಭಾವತಿ ನದಿ ಮಾತ್ರ ಅಲ್ಪ ಕೊಳೆ ಕಳೆದುಕೊಂಡಿದೆ.
ನಗರದಲ್ಲಿರುವ ಕೆರೆಗಳಿಗೆ ಮಳೆ ನೀರು ಹರಿಸುವ ಸೂಕ್ತ ವ್ಯವಸ್ಥೆ ಇಲ್ಲದಿರುವುದೇ ಬೆಂಗಳೂರು ನಗರ ಮಳೆಗೆ ತತ್ತರಿಸುವಂತಾಗಿರುವುದಕ್ಕೆ ಪ್ರಮುಖ ಕಾರಣ. ಮಡಿವಾಳ, ಅಗರ, ಬೇಗೂರು, ದೊರೆಕೆರೆ, ಸಾರಕ್ಕಿ, ಪುಟ್ಟೇನಹಳ್ಳಿಯಂತಹ ದೊಡ್ಡ ಕೆರೆಗಳು ಇಂದಿಗೂ ಕೋಡಿ ಹೋಗಿಲ್ಲ. ಏಕೆಂದರೆ, ಸಾಮಾನ್ಯ ಹರಿವೇ ಹೊರಹೋಗುತ್ತಿದೆ. ಅಂದರೆ, ಒಳಚರಂಡಿ ನೀರು ಬಿಟ್ಟರೆ ಮಳೆ ನೀರು ಇಲ್ಲಿಗೆ ಹರಿಯುತ್ತಿಲ್ಲ. ನಗರದಲ್ಲಿ ಹಲವು ಕೆರೆಗಳಿಗೆ ಮಳೆ ನೀರು ಹರಿಯಲು ಮಾರ್ಗವೇ ಇಲ್ಲ. ಕೆಲವು ಕೆರೆಗಳಿಗೆ ನೀರು ಹರಿದರೂ, ಅಲ್ಲಿ ನೀರಿನ ಸಂಗ್ರಹಕ್ಕೆ ಸ್ಥಳವೇ ಇಲ್ಲ. ಹೂಳು ಯಥೇಚ್ಛವಾಗಿ ತುಂಬಿದೆ.
ಈ ಬಾರಿಯ ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಮಳೆ ನೀರು ಹರಿಯಲು ರಾಜಕಾಲುವೆಗಳನ್ನು ಸೂಕ್ತವಾಗಿ ನಿರ್ವಹಿಸಲಾಗಿದೆ. ಕೆರೆಗೆ ನೀರು ಹರಿಸಿ, ಪ್ರವಾಹ ಆಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಬೇಸಿಗೆ ಕಾಲದಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೇಳಿತ್ತು. ಆದರೆ, ಕಳೆದ ವಾರದ ನಾಲ್ಕು ದಿನ ಮಳೆ ಇದನ್ನು ಅಲ್ಲಗಳೆದಿದೆ. ಬಿಬಿಎಂಪಿ ಯಾವುದೇ ಮುನ್ನೆಚ್ಚರಿಕೆ ಕಾರ್ಯ ಕೈಗೊಂಡಿಲ್ಲ, ಕೆರೆಯಲ್ಲಿ ಹೂಳು ಎತ್ತಿಲ್ಲ ಎಂಬುದು ಸಾಬೀತಾಗಿದೆ. ಕೆರೆಗಳ ಮಹತ್ವ ಬಿಬಿಎಂಪಿ ಅರಿವಿಗೆ ಇನ್ನಾದರೂ ಬಂದೀತೇ?
ಹೊರವಲಯದಲ್ಲಿ ಖುಷಿ
ನಗರದ ಒಳಗೆ ಮಳೆ ಏಕೆ ಬರುತ್ತೋ ಎಂದು ಜನ ಒಲ್ಲದ ಮನಸ್ಸಿನಿಂದ ಶಾಪ ಹಾಕುತ್ತಿದ್ದರೆ, ಹೊರಭಾಗದಲ್ಲಿ ಮಳೆ ಇನ್ನಷ್ಟು ಬಂದಿದ್ದರೆ ನಮ್ಮ ಕೆರೆ ತುಂಬುತ್ತಿತ್ತು. ಬೋರ್‌ವೆಲ್‌ನಲ್ಲಿ ನೀರು ಹೆಚ್ಚಾಗುತ್ತಿತ್ತು. ನಮ್ಮ ಜಲಾಶಯ ತುಂಬುತ್ತಿತ್ತು ಎಂಬ ಮಾತು ಕೇಳಿಬರುತ್ತಿದೆ. ಮಾಕಳಿಯಲ್ಲಿ ಅರ್ಕಾವತಿ ಹೊಳೆಯನ್ನು ದಾಟುವುದೇ ಅದೃಷ್ಟ ಎಂಬಂತೆ ಮಕ್ಕಳು, ಹಿರಿಯರು ಸಂತಸಪಡುತ್ತಿದ್ದಾರೆ.
ಹೆಸರಘಟ್ಟ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾದಂತೆ ಅಲ್ಲಿಂದ, ತಿಪ್ಪಗೊಂಡನಹಳ್ಳಿಯವರೆಗೆ ಅರ್ಕಾವತಿ ನದಿ ಹರಿವು ಕೂಡ ಹೆಚ್ಚಾಗಿದೆ. ತರಬನಹಳ್ಳಿ ಸಮೀಪವಿರುವ ರೈಲ್ವೆ ಸೇತುವೆ ಕೆಳಗೆ ಅರ್ಕಾವತಿ ಹೊಳೆ ಮೈದುಂಬಿ ಹರಿಯುತ್ತಿದೆ. ೧೫ ದಿನಗಳ ಹಿಂದ ವಾಹನ ಓಡಾಡುವ ರಸ್ತೆಯಾಗಿದ್ದ ಈ ಪ್ರದೇಶದಲ್ಲಿ ಈಗ ನೀರಿನ ಸಾಮ್ರಾಜ್ಯ.
ಮಾಕಳಿಯ ಬಳಿಯಿರುವ ಭೀರೇಶ್ವರ ಸ್ವಾಮಿ ದೇವಾಲಯದ ತಪ್ಪಲಿನಲ್ಲಿ ಹೊಳೆಯ ಹರಿವು ವೃದ್ಧಿಯಾಗಿದೆ. ಶಾಲಾ ಮಕ್ಕಳು ಈ ಹೊಳೆಯನ್ನು ದಾಟುವುದೇ ಅದೃಷ್ಟ ಎಂಬಂತೆ ಮೋಜು ಅನುಭವಿಸುತ್ತಿದ್ದಾರೆ. ಯಾವಾಗಲೂ, ಕಲ್ಮಶವನ್ನು ಮೈಗಂಟಿಕೊಂಡು ಸಣ್ಣದಾಗಿ ಹರಿಯುತ್ತಿದ್ದ ಅರ್ಕಾವತಿ ನದಿ, ಈಗ ಇಲ್ಲಿ ಮೀನುಗಾರರಿಗೆ ಕೆಲಸ ನೀಡಿದ್ದಾಳೆ. ಅಲ್ಲಲ್ಲಿ ಸಣ್ಣ ಬಲೆಗಳನ್ನು ಹಾಕಿ ಮೀನು ಹಿಡಿಯುವ ಕಾರ್ಯ ನಡೆಯುತ್ತಿದೆ.
ಹೆಸರಘಟ್ಟದಿಂದ ತಿಪ್ಪಗೊಂಡನಹಳ್ಳಿಯವರೆಗೂ ಅರ್ಕಾವತಿ ನದಿ ಹರಿವು ಹತ್ತು ವರ್ಷಗಳ ನಂತರ ಉತ್ತಮವಾಗಿದೆ. ಸೊಂಡೆಕೊಪ್ಪ, ವರ್ತೂರು ಬಳಿಯ ಹೊಳೆಯ ಹರಿವು ಕಂಡು ಜನ ಸಂತಸಗೊಂಡಿದ್ದಾರೆ. ಅಬ್ಬಾ, ನಮ್ಮ ನದಿ ಮತ್ತೊಮ್ಮೆ ಹರಿಯುತ್ತಿದೆಯಲ್ಲ ಎಂದು ಹಿರಿಯರು ಸಮಾಧಾನ ಪಡುತ್ತಿದ್ದಾರೆ. ಯುವಕರಿಗೆ ಉಲ್ಲಾಸ ಮೈತುಂಬಿದ್ದರೆ, ಮಕ್ಕಳು ಕಣ್ಣರಳಿಸಿಕೊಂಡು ಹೊಳೆಯನ್ನು ನೋಡುತ್ತಿದ್ದಾರೆ. ನೀರು ಹರಿಯುತ್ತಿರುವ ಎಲ್ಲ ಕಡೆಯೂ ಜನ ಅಚ್ಚರಿಯಿಂದ ದೃಷ್ಟಿ ಹರಿಸುತ್ತಿದ್ದಾರೆ.

Monday, September 21, 2009

ದೊರೆ ಕೊಳಕು ಸಾಮ್ರಾಜ್ಯಕ್ಕೆ ತೆರೆ; ಹೈಟೆಕ್ ಹೊಳೆ

ಬೆಂಗಳೂರು ದಕ್ಷಿಣದ ಉತ್ತರಹಳ್ಳಿಯಲ್ಲಿರುವ ದೊರೆ ಕೆರೆಯ 29 ಎಕರೆ ಸಾಮ್ರಾಜ್ಯ ಕಲ್ಮಶದಿಂದ ಮುಕ್ತವಾಗಿದೆ. ಒಳಚರಂಡಿ ನೀರಿಗೆ ತನ್ನ ಸೆರಗಿನಲ್ಲಿ ರೂಪಿಸಿರುವ ಕಾಲುವೆಯಲ್ಲಿ ದಾರಿ ಮಾಡಿಕೊಟ್ಟು, ಹೈಟೆಕ್ ರೂಪಪಡೆದುಕೊಂಡು, ಪ್ರಕಾಶ ಬೀರಲು ಸಜ್ಜಾಗುತ್ತಿದೆ.
ದೊರೆಕೆರೆಗೆ ಒಳಚರಂಡಿ ನೀರು ಈಗ ಹೋಗುತ್ತಿಲ್ಲ. ಕೆರೆಯನ್ನು ಸಂಪೂರ್ಣ ಒಣಗಿಸಲಾಗಿದೆ. ಮಳೆ ನೀರು ಮಾತ್ರ ಕೆರೆಗೆ ಹರಿಯುತ್ತಿದೆ. ಒಳಚರಂಡಿ ನೀರಿಗೆ ಕೆರೆಯ ಅಂಚಿನಲ್ಲಿ ಕಾಲುವೆ ನಿರ್ಮಿಸಿ ಅಲ್ಲಿಂದ ಹರಿದು ಹೋಗುವಂತೆ ಮಾಡಲಾಗಿದೆ. ಕೆರೆಯ ಒಳಗೆ ಎರಡು ದ್ವೀಪಗಳನ್ನು ಸೃಷ್ಟಿಸಲಾಗಿದೆ. ಅಷ್ಟೇಅಲ್ಲ, ಕೆರೆಯ ಅಂಗಳಕ್ಕೆ ಬೇಲಿ ಹಾಕಲಾಗಿದೆ. ಆದರೆ, ಮೂಲ ಸ್ವರೂಪ ಅಥವಾ ವ್ಯಾಪ್ತಿಗೆ ಬೇಲಿ ಹಾಕಿಲ್ಲ ಎಂಬುದು ಅಚ್ಚರಿ ಸಂಗತಿ. ಇಷ್ಟಾದರೂ, ಕೆರೆಗೊಂದು ಬೇಲಿ, ಕಲ್ಮಶಮುಕ್ತ ವಾತಾವರಣ ರೂಪಿಸಲಾಗಿರುವುದು ಸಮಾಧಾನಕರ. ದಾಖಲೆಯಲ್ಲಿರುವ ದೊರೆ ಕೆರೆಯ ವಿಸ್ತೀರ್ಣ 31 ಎಕರೆ 32.88 ಗುಂಟೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ 1.20 ಕೋಟಿ ರೂ. ವೆಚ್ಚದಲ್ಲಿ ದೊರೆ ಕೆರೆಯ ಅಭಿವೃದ್ಧಿ ಕಾಮಗಾರಿ ಆರಂಭವಾಗಿದೆ. ಮೊದಲ ಹಂತದಲ್ಲಿ ಕೆರೆಯನ್ನು ಒಣಗಿಸಿ, ಅದರಲ್ಲಿನ ಕಲ್ಮಶವನ್ನು ಹೊರಹಾಕಲಾಗಿದೆ. ಅದರೊಳಗೆ ಎರಡು ದ್ವೀಪ ನಿರ್ಮಾಣವಾಗಿದೆ. ಸುತ್ತಲೂ ವಾಕಿಂಗ್ ಟ್ರ್ಯಾಕ್ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಕೆರೆಗೆ ಮಳೆನೀರು ಮಾತ್ರ ಒಳಬರುವ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಇದಲ್ಲದೆ, ಬೋಟಿಂಗ್ ವ್ಯವಸ್ಥೆ, ಶೌಚಾಲಯ, ನೀರು ಸಂಸ್ಕರಣ ಘಟಕ, ವಾಚ್‌ಮೆನ್ ಶೆಡ್, ಧ್ಯಾನ ಕೇಂದ್ರ ಒಳಗೊಂಡಂತೆ ಹೈಟೆಕ್ ಮಾದರಿಯಲ್ಲಿ (ನೀಲನಕ್ಷೆ ನೋಡಿ) ದೊರೆಕೆರೆ ಅಭಿವೃದ್ಧಿಯಾಗಲಿದೆ.
ದೊರೆಕೆರೆಯನ್ನು ನಗರಕ್ಕೆ ಮಾದರಿ ಕೆರೆಯನ್ನಾಗಿ ಪರಿವರ್ತಿಸಲಾಗುವುದು. ಈಗಾಗಲೇ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಇನ್ನಾರು ತಿಂಗಳಲ್ಲಿ ಕೆರೆಗೆ ಹೊಸ ಸ್ವರೂಪ ನೀಡಲಾಗುತ್ತದೆ. ದೊರೆ ಕೆರೆ ಈ ಕ್ಷೇತ್ರದಲ್ಲಿ ಅತ್ಯಂತ ದೊಡ್ಡ ಕೆರೆಗಳಲ್ಲಿ ಒಂದಾಗಿದೆ. ಎಲ್ಲ ರೀತಿಯ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಗೆ ಹೈಟೆಕ್ ಸ್ವರೂಪ ನೀಡಲಾಗುತ್ತದೆ. ಈ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿಸುವ ನಿಟ್ಟಿನಲ್ಲಿ ದ್ವೀಪ, ಬೋಟಿಂಗ್ ವ್ಯವಸ್ಥೆಗಳನ್ನೂ ಮಾಡಲಾಗುತ್ತದೆ.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 14 ದೊಡ್ಡ ಕೆರೆಗಳಿವೆ. ಅವುಗಳೆಲ್ಲವನ್ನೂ ಉನ್ನತ ದರ್ಜೆಯಲ್ಲಿಯೇ ಅಭಿವೃದ್ಧಿ ಮಾಡಲಾಗುತ್ತದೆ. ಬಿಡಿಎ, ಬಿಬಿಎಂಪಿ ವತಿಯಿಂದ ಈ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಎಲ್ಲ ಪ್ರಥಮ ಹಂತದ ಕಾಮಗಾರಿಯಲ್ಲಿ ಕೆರೆಗಳೂ ಕಲ್ಮಶಂiಮುಕ್ತವಾಗುವಂತೆ ಮಾಡಲಾಗುತ್ತದೆ. ಮುಂದಿನ ಒಂದೂವರೆ ವರ್ಷಗಳಲ್ಲಿ ಈ ಎಲ್ಲ ಕೆರೆಗಳನ್ನೂ ಅಭಿವೃದ್ಧಿಪಡಿಸಲಾಗುತ್ತದೆ. ಕೆರೆಗಳೆಂದರೆ ಹೀಗಿರಬೇಕು ಎಂದು ಪರಿಸರವಾದಿಗಳು ಸೇರಿದಂತೆ ಸ್ಥಳೀಯ ಜನರು ಹೆಮ್ಮೆ ಪಟ್ಟುಕೊಂಡು ಹೇಳಬೇಕು. ಆ ರೀತಿ ಈ ಕೆರೆಗಳು ಅಭಿವೃದ್ಧಿ ಆಗಲಿವೆ.
ಕೊತ್ತನೂರು, ಚುಂಚಘಟ್ಟ ಕೆರೆ ಕಲ್ಮಶ ಮುಕ್ತ
ಕೊತ್ತನೂರು ಹಾಗೂ ಚುಂಚಘಟ್ಟ ಕೆರೆಗೆ ಸುತ್ತಮುತ್ತಲ ಪ್ರದೇಶದ ಒಳಚರಂಡಿ ನೀರು ಸಂಪೂರ್ಣವಾಗಿ ಹರಿಯುತ್ತಿದೆ. ಈ ಕಲ್ಮಶವನ್ನು ಕೆರೆಯ ಹೊರಭಾಗದಿಂದ ಹರಿಯುವಂತೆ ಮಾಡಿ, ಅದಕ್ಕಾಗಿ ವಿಶೇಷ ರೀತಿಯ ಕಾಮಗಾರಿಯನ್ನು ಕೈಗೊಳ್ಳಲು ಬೆಂಗಳೂರು ಒಳಚರಂಡಿ ಮಂಡಳಿ ಅಣಿಯಾಗಿದೆ. ಈ ಎರಡೂ ಕೆರೆಗಳ ಅಂಚಿನಿಂದ ಪೈಪ್‌ಲೈನ್ ಮೂಲಕ ಒಳಚರಂಡಿ ನೀರು ಹರಿಯುವಂತೆ ಮಾಡಲಾಗುತ್ತದೆ. ಒಳಚರಂಡಿ ನೀರು ಕೆರೆಗೆ ಹೋಗದಂತೆ ತಡೆ ಹಾಕಲಾಗುತ್ತದೆ.
ಈ ಎರಡೂ ಕೆರೆಗಳನ್ನು ಕಲ್ಮಶಮುಕ್ತವನ್ನಾಗಿಸುವ ಯೋಜನೆಗೆ ಇನ್ನು ಮೂರು ತಿಂಗಳಲ್ಲಿ ಚಾಲನೆ ದೊರೆಯಲಿದೆ. ಈಗಾಗಲೇ ಯೋಜನೆ ರಚನೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ. ಇದು ಪೂರ್ಣಗೊಂಡ ಕೂಡಲೇ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ಮೂರು ಅಥವಾ ನಾಲ್ಕು ತಿಂಗಳಲ್ಲೆ ಚುಂಚಘಟ್ಟ ಹಾಗೂ ಕೊತ್ತನೂರು ಕೆರೆಗಳು ಕಲ್ಮಶದಿಂದ ಮುಕ್ತವಾಗುತ್ತದೆ.
ಕೊತ್ತನೂರು ಕೆರೆಯನ್ನು ಬಿಡಿಎ ಅಭಿವೃದ್ಧಿಪಡಿಸಲು 3.6 ಕೋಟಿ ರೂ. ವೆಚ್ಚದ ಯೋಜನೆಯನ್ನು ರೂಪಿಸಿದೆ. ಈ ಕಾಮಗಾರಿಗೆ ಇನ್ನೂ ಚಾಲನೆ ದೊರೆತಿಲ್ಲವಾದರೂ, ಇದನ್ನು ಕೂಡಲೇ ಆರಂಭಿಸಲು ಬಿಡಿಎ ಅಧಿಕಾರಿಗಳಿಗೆ ಸೂಚಿಸಲಾಗುತ್ತದೆ. ಇನ್ನೊಂದು ವರ್ಷದಲ್ಲಿ ಕೊತ್ತನೂರು ಕೆರೆ ಅಭಿವೃದ್ಧಿ ಆಗಲಿದೆ.
ಚುಂಚಘಟ್ಟ ಕೆರೆಯನ್ನು ಬಿಬಿಎಂಪಿ ವತಿಯಿಂದ ಅಭಿವೃದ್ಧಿಪಡಿಸಲಾಗುತ್ತದೆ. ಕೆರೆ ಸಂಪೂರ್ಣ ಕಲ್ಮಶಗೊಂಡಿರುವುದರಿಂದ ಏರಿಯ ಕೆಳಭಾಗದಲ್ಲಿ ಕೊಳವೆ ಬಾವಿಯಲ್ಲಿ ಕಲ್ಮಶ ನೀರು ಬರುತ್ತಿದೆ. ಆದ್ದರಿಂದ, ಮೊದಲ ಹಂತದಲ್ಲಿ ಒಳಚರಂಡಿ ನೀರಿಗೆ ತಡೆ ಹಾಕಲಾಗುತ್ತದೆ. ನಂತರ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎನ್ನುತ್ತಾರೆ ಶಾಸಕ ಎಂ. ಕೃಷ್ಣಪ್ಪ.
ಗೊಟ್ಟಿಗೆರೆ ಊರ ಬಂಡೆ ಮೇಲೆ ಜಲಸಂಗ್ರಹಗಾರ
ಗೊಟ್ಟಿಗೆರೆ ಕೆರೆ ನೈಸ್ ರಸ್ತೆಯ ಕಾಮಗಾರಿಯಿಂದ ಪ್ರಚಲಿತವಾಗಿದೆ. ಈ ಕೆರೆಯ ಮೇಲೆ ನೈಸ್ ರಸ್ತೆ ಸಾಗದಂತೆ ಸ್ಥಳೀಯರು ಹಾಗೂ ಪರಿಸರವಾದಿಗಳು ಒತ್ತಾಯಿಸುತ್ತಿದ್ದಾರೆ. ಅದಕ್ಕೆ ಹೈಕೋರ್ಟ್ ಕೂಡ ಸಾಕಷ್ಟು ಸಹಕರಿಸುತ್ತಿದೆ. ಇದೇ ಗೊಟ್ಟಿಗೆರೆಯ ಊರಬಂಡೆ, ಇದೀಗ ಸುದ್ದಿಯಲ್ಲಿದೆ. ನೂರಾರು ಬಡಾವಣೆಗಳಿಗೆ ನೀರು ಕಾವೇರಿ ನೀರು ಕೊಡುವ ಜಲಾಗಾರಕ್ಕೆ ಈ ಊರಬಂಡೆ ಆಶ್ರಯ ನೀಡಲು ಅಣಿಯಾಗುತ್ತಿದೆ.
ಕಾವೇರಿ ನದಿಯಿಂದ ಬೆಂಗಳೂರಿಗೆ ನೀರು ಸರಬರಾಜು ಮಾಡುವ ನಾಲ್ಕನೇ ಹಂತದ 2ನೇ ಘಟ್ಟಕ್ಕೆ ಜಲಸಂಗ್ರಹಗಾರಕ್ಕಾಗಿ ಪ್ರದೇಶವನ್ನು ಹುಡುಕಲಾಗುತ್ತಿತ್ತು. 950 ಮೀಟರ್ ಎತ್ತರವಿರುವ, ಗೊಟ್ಟಿಗೆರೆ ಊರಬಂಡೆ ಪ್ರದೇಶವನ್ನು ಇದೀಗ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಊರಬಂಡೆ ಜಾಗದಲ್ಲಿ ತೋಟಗಾರಿಕೆ ಇಲಾಖೆ ಈಗಾಗಲೇ ಉದ್ಯಾನ ನಿರ್ಮಿಸುವ ಕಾಮಗಾರಿ ಕೈಗೊಂಡಿದೆ. ಇದೀಗ ಜಲಸಂಗ್ರಹಗಾರಕ್ಕೆ 6 ಎಕರೆ ಪ್ರದೇಶವನ್ನು ನೀಡುವ ಮೂಲಕ ಮತ್ತೊಂದು ಹೆಗ್ಗಳಿಕೆಗೆ ಊರಬಂಡೆ ಪಾತ್ರವಾಗುತ್ತದೆ.
ನಗರದ ಅತ್ಯಂತ ಎತ್ತರ ಪ್ರದೇಶವಾಗಿರುವ ಈ ಊರಬಂಡೆಯಲ್ಲಿ ಜಲಸಂಗ್ರಹಗಾರ ನಿರ್ಮಿಸಿದರೆ, ಪಂಪಿಂಗ್‌ನ ಅಗತ್ಯವಿಲ್ಲದೆ ಗುರುತ್ವಾಕರ್ಷಣೆಯಿಂದಲೇ ನೀರನ್ನು ಪೂರೈಸಬಹುದು. 22 ದಶಲಕ್ಷ ಲೀಟರ್ ನೀರು ಪೂರೈಸಬಹುದು. ಆದ್ದರಿಂದ, ಈ ಪ್ರದೇಶವನ್ನು ಜಲಮಂಡಳಿಗೆ ನೀಡಲು ತೀರ್ಮಾನಿಸಲಾಗಿದೆ. ಈ ಕಾಮಗಾರಿಗೆ ಜಲಮಂಡಳಿ ಖಾತೆ ಸಚಿವ ಕಟ್ಟಾ ಸುಬ್ರಹ್ಮಣನಾಯ್ಡು ಅವರೇ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಎಂ. ಕೃಷ್ಣಪ್ಪ ತಿಳಿಸಿದ್ದಾರೆ.
ಪರಿಸರ ರಕ್ಷಣೆಯಲ್ಲಿ ಉದ್ಯಾನವನಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಬೆಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ 50 ಉದ್ಯಾನವನಗಳನ್ನು ನಿರ್ಮಿಸಲಾಗುತ್ತದೆ. ಇದರಲ್ಲಿ 15 ಉದ್ಯಾನಗಳನ್ನು ಇನ್ನು 15 ದಿನಗಳಲ್ಲಿ ಉದ್ಘಾಟಿಸಲಾಗುತ್ತದೆ. ಕೆಲವು ಉದ್ಯಾನಗಳಲ್ಲಿ ಸಂಗೀತದ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ.

Wednesday, September 16, 2009

ಪುನಶ್ಚೇತನ ಸಮಿತಿ ಸಾಲದು; ಪ್ರಾಮಾಣಿಕ ಪ್ರಯತ್ನ ಅತ್ಯಗತ್ಯ

ಅರ್ಕಾವತಿ ನದಿ ಪುನಶ್ಚೇತನಕ್ಕೆ ಆಡಳಿತಾರೂಢ ಪಕ್ಷ ಶಾಸಕರು ಹಾಗೂ ಸಚಿವರು ಪಾದಯಾತ್ರೆ ಮಾಡಿ, ಯಶಸ್ಸೂ ಸಾಧಿಸಿದ್ದಾರೆ. ಅಧಿಕಾರದಲ್ಲಿರುವವರು ಕ್ರಮ ಕೈಗೊಳ್ಳಬಹುದಲ್ಲವೇ? ಪಾದಯಾತ್ರೆ ಏಕೆ? ಎಂದು ಹತ್ತಾರು ದನಿಗಳು ಎದ್ದಿವೆ. ನದಿಪಾತ್ರದಲ್ಲಿನ ಒತ್ತುವರಿ ತೆರವಿಗೆ ಜನಜಾಗೃತಿಗಾಗಿ ಈ ಪಾದಯಾತ್ರೆ ಎಂಬುದು ಸ್ಪಷ್ಟ ಉತ್ತರ. ಇದಾದ ಮೇಲೆ ಮುಂದೇನು? ಎಂಬುದು ಈಗಿನ ಪ್ರಶ್ನೆ.ಅರ್ಕಾವತಿ ನದಿ ಸಂರಕ್ಷಣಾ ವೇದಿಕೆ ಹೆಸರಿನಡಿ ಶಾಸಕಸ್.ಆರ್. ವಿಶ್ವನಾಥ್ ಪಕ್ಷಾತೀತವಾಗಿ ನಂದಿಬೆಟ್ಟದಿಂದ ತಿಪ್ಪಗೊಂಡನಹಳ್ಳಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದರು. ಎಲ್ಲ ಪಕ್ಷದ ಶಾಸಕರನ್ನೂ ಆಹ್ವಾನಿಸಲಾಗಿತ್ತು. ಪರಿಸರವಾದಿಗಳು ಹಾಗೂ ಹಲವು ಸಂಘಟನೆಗಳು ಇದರಲ್ಲಿ ಪಾಲ್ಗೊಂಡು, ಯಶಸ್ವಿಗೊಳಿಸಿದರು. ಪ್ರತಿಪಕ್ಷಗಳ ಶಾಸಕರು ಬಿಜೆಪಿ ಶಾಸಕರೊಂದಿಗೆ ನಾವೇಕೆ ಗುರುತಿಸಿಕೊಳ್ಳಬೇಕೆಂದು ಸುಮ್ಮನಾದರು.
ನಂದಿಬೆಟ್ಟದಿಂದ ದೊಡ್ಡಬಳ್ಳಾಪುರದವರೆಗೆ ಪ್ರಥಮ ಹಂತದಲ್ಲೇ ಕಾಲುವೆಗಳ ಒತ್ತುವರಿ ತೆರವುಗೊಳಿಸಬೇಕಿದೆ. ನಂತರ ಹಂತದಲ್ಲಿ ಒತ್ತುವರಿ ಸೇರಿಕೊಂಡಂತೆ ಮಾಲಿನ್ಯರಹಿತ ನದಿಪಾತ್ರ ಸೃಷ್ಟಿಸಬೇಕಿದೆ. ಕೈಗಾರಿಕೆಗಳ ಯಾವುದೇ ಒತ್ತಡಕ್ಕೆ ಮಣಿಯದೆ, ಕಾರ್ಖಾನೆಗಳನ್ನು ನದಿಪಾತ್ರದ ಒಂದು ಕಿಮೀ ದೂರದಿಂದ ಹೊರಗುಳಿಸಬೇಕಿದೆ. ಇದಕ್ಕೆಲ್ಲ ಸಾರ್ವಜನಿಕರು ಹಾಗೂ ಸ್ಥಳೀಯರ ಬೆಂಬಲವೂ ದೊರೆತಿದೆ. ಒತ್ತುವರಿ ತೆಗೆಸಿರಿ, ಇಲ್ಲದಿದ್ದರೆ ನೀರು ಹರಿಯುವುದಿಲ್ಲ. ಇದಕ್ಕಾಗಿ ನಾವೇನು ಮಾಡಬೇಕು ಹೇಳಿ? ನಮ್ಮ ಸಂಪೂರ್ಣ ಸಹಕಾರ ನಿಮಗಿದೆ ಎಂದು ನದಿಪಾತ್ರದ ಮುಖಂಡರು ಹಾಗೂ ನಾಗರಿಕರು ಪಾದಯಾತ್ರಿಗಳಿಗೆ ಭರವಸೆಯನ್ನು ನೀಡಿದ್ದಾರೆ.
ಅರ್ಕಾವತಿ ನದಿ ಪಾತ್ರದಲ್ಲಿರುವ ನಾಗರಿಕರು ನದಿ ಹರಿಸುವ ಕಾರ್ಯಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಆದರೆ, ಇವತ್ತು ಬಂದಿದ್ದಾರೆ ನಾಳೆ ಇದಕ್ಕೆ ಚಾಲನೆ ನೀಡುತ್ತಾರೆಯೇ? ಎಂಬ ಅನುಮಾನವೂ ಅವರಲ್ಲಿದೆ. ಇದನ್ನು ನಿವಾರಿಸಬೇಕೆಂದರೆ, ಪಾದಯಾತ್ರೆಯ ಜನಜಾಗೃತಿ ಉದ್ದೇಶ ಈಡೇರಬೇಕಿದೆ. ಭೇದಭಾವವಿಲ್ಲದೆ ನದಿ ಪುನಶ್ಚೇತನಕ್ಕೆ ಸಕಲ ಕ್ರಮವನ್ನೂ ಕೈಗೊಳ್ಳಬೇಕಿದೆ. ಸರಕಾರ ಇದಕ್ಕೆ ಸ್ಪಂದಿಸಿ ಅರ್ಕಾವತಿ ನದಿ ಪುನಶ್ಚೇತನ ಸಮಿತಿಯನ್ನು ರಚಿಸುವ ಭರವಸೆಯನ್ನೂ ನೀಡಿದೆ.
ನದಿ ಪುನಶ್ಚೇತನಕ್ಕೆ ಪಾದಯಾತ್ರೆ, ಸಮಿತಿ ರಚನೆ ಅಷ್ಟೇ ಸಾಲದು. ಇಷ್ಟಾಯಿತಲ್ಲ ಎಂದು ವಿರಮಿಸಿದರೆ, ಇದೊಂದು ಗಿಮಿಕ್ ಎಂದೆನಿಸಿಬಿಡುತ್ತದೆ. ನದಿ ಪುನಶ್ಚೇತನಕ್ಕೆ ಪ್ರಾಮಾಣಿಕ ಕೆಲಸ ಆಗಬೇಕೆಂದರೆ, ರಚಿಸುವ ಸಮಿತಿಗೆ ಸಂಪೂರ್ಣ ಅಧಿಕಾರವನ್ನು ನೀಡಲೇಬೇಕು. ಎಲ್ಲ ಇಲಾಖೆಗಳಿಂದಲೂ ಕೆಲಸ ಮಾಡಿಸುವ ಅಧಿಕಾರ ಈ ಸಮಿತಿಗೆ ಇರಬೇಕು. ಅರ್ಕಾವತಿ ನದಿ ಪಾತ್ರ ಸಂರಕ್ಷಣೆಗೆ ೨೦೦೩ರಲ್ಲಿ ಸರಕಾರ ಹೊರಡಿಸಿರುವ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ತರುವ ಜವಾಬ್ದಾರಿಯೂ ಈ ಸಮಿತಿಗೆ ಇರಬೇಕು.
ನದಿ ಪುನಶ್ಚೇತನಕ್ಕೆ ವಿಧಾನಸೌಧದಲ್ಲಿ ಗಟ್ಟಿಯಾಗಿ ಕುಳಿತು ಯೋಜನೆ ರೂಪಿಸಬೇಕಿತ್ತು. ಇದನ್ನು ಬಿಟ್ಟು ಸರಕಾರದ ಸಚಿವರು, ಶಾಸಕರು ಪಾದಯಾತ್ರೆ ಮಾಡಿರುವುದು ಹಾಸ್ಯಾಸ್ಪದ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ಆಪಾದಿಸಿದ್ದಾರೆ. ಪಾದಯಾತ್ರೆ-ಸಮಿತಿ ರಚನೆ ಭರವಸೆ ಹಂತದಲ್ಲಿಯೇ ಈ ರೀತಿಯ ಆಪಾದನೆ ಆರಂಭವಾಗಿದೆ ಎಂದರೆ, ಮುಂದಿನ ದಿನಗಳಲ್ಲಿ ಇನ್ಯಾವ ರೀತಿ ಆಪಾದನೆಗಳು ಎದುರಾಗಬಹುದು ಎಂಬುದನ್ನು ಅರಿತು, ಸರಕಾರ ಹೆಜ್ಜೆ ಇರಿಸಬೇಕಿದೆ.
ಅರ್ಕಾವತಿ ನದಿ ಪುನಶ್ಚೇತನ ಕಾರ್ಯಕ್ಕೆ ಪಕ್ಷಾತೀತ ಸಹಕಾರವೂ ಅಗತ್ಯ. ಪ್ರತಿಪಕ್ಷ ಕೇವಲ ಆಪಾದನೆಯನ್ನಷ್ಟೇ ಮಾಡಬಾರದು. ಒತ್ತುವರಿ ಮಾಡಿಕೊಂಡಿರುವವರಲ್ಲಿ ಎಲ್ಲ ಪಕ್ಷದ ಮುಖಂಡರೂ ಇದ್ದಾರೆ. ಅವರೆಲ್ಲನ್ನೂ ತೆರವುಗೊಳಿಸಬೇಕು. ಇದಕ್ಕೊಂದು ಸ್ಪಷ್ಟ ನೀತಿ, ನಿರ್ದಾಕ್ಷಿಣ್ಯ ಕ್ರಮ ಅತ್ಯಗತ್ಯ. ಈ ಕಾರ್ಯ ಪ್ರಾಮಾಣಿಕವಾಗಿ ಆಗದಿದ್ದರೆ, ಪಾದಯಾತ್ರೆಯ ಉದ್ದೇಶ ಈಡೇರುವುದಿಲ್ಲ. ಇತಿಹಾಸದಲ್ಲಿ ಒಂದು ಕಾರ್ಯಕ್ರಮವಾಗಿ ಮಾತ್ರ ಉಳಿಯುತ್ತದೆ. ಹಾಗಾಗದಿರಲಿ, ಅರ್ಕಾವತಿ ಹರಿಯಲಿ, ರೈತರು, ಪಟ್ಟಣವಾಸಿಗಳಿಗೆ ನೀರು ಲಭಿಸಲಿ.

Tuesday, September 8, 2009

ತಿಪ್ಪಗೊಂಡನಹಳ್ಳಿಯಲ್ಲಿ ಅಂತ್ಯ; ಪುನಶ್ಚೇತನಕ್ಕೆ ಮುನ್ನುಡಿ

ಅರ್ಕಾವತಿ ಪಾದಯಾತ್ರೆ-ದಿನ-4: ಸೆಪ್ಟೆಂಬರ್ 6, 2009
ಸರ್ ಎಂ. ವಿಶ್ವೇಶ್ವರಯ್ಯ ನೇತೃತ್ವದಲ್ಲಿ ತಿಪ್ಪಗೊಂಡನಹಳ್ಳಿ ಜಲಾಶಯ ನಿರ್ಮಾಣವಾಗುತ್ತಿದ್ದಾಗ ಸಾವಿರಾರು ಜನರು ಕಾಮಗಾರಿಯಲ್ಲಿ ತೊಡಗಿದ್ದರು. ಅದಾದ ಮೇಲೆ, ಸುಮಾರು 76 ವರ್ಷಗಳ ನಂತರ, ಈ ಜಲಾಶಯದಲ್ಲಿ ಸಾವಿರಾರು ಜನರು ಒಂದೇ ಬಾರಿಗೆ ಇದ್ದದ್ದು ಸೆಪ್ಟೆಂಬರ್ 6, 2009ರ ಭಾನುವಾರ. ಅಂದು ಅರ್ಕಾವತಿ ನದಿ ನೀರಿಗೆ ಅಡ್ಡಲಾಗಿ ಕಾಮಗಾರಿ ನಡೆಯುತ್ತಿದ್ದು, ಇಂದು ಆ ನದಿಗೆ ನೀರು ಹರಿಸಲು ಗಂಗಾಪೂಜೆ ನೆರವೇರಿಸಲು ಜನಪ್ರತಿನಿಧಿಗಳೊಂದಿಗೆ ನಾಗರಿಕರು ಸೇರಿದ್ದರು.
ನಂದಿಬೆಟ್ಟದಿಂದ ತಿಪ್ಪಗೊಂಡನಹಳ್ಳಿವರಿಗೆ ಅರ್ಕಾವತಿ ಸಂರಕ್ಷಣಾ ವೇದಿಕೆ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದ ನಾಲ್ಕು ದಿನದ 106 ಕಿಲೋಮೀಟರ್‌ಗಳ ಪಾದಯಾತ್ರೆ ತಿಪ್ಪಗೊಂಡನಹಳ್ಳಿಯಲ್ಲಿ ಭಾನವಾರ ಮುಕ್ತಾಯವಾಯಿತು. ಪಾದಯಾತ್ರೆಯ ಅಂತಿಮಸ್ತರದಲ್ಲಿ ಸಂಸದ ಅನಂತಕುಮಾರ್, ಸಾರಿಗೆ ಸಚಿವ ಆರ್. ಅಶೋಕ್, ಶಾಸಕರಾದ ಎಸ್. ಮುನಿರಾಜು, ರವಿಸುಬ್ರಹ್ಮಣ್ಯ, ವಿಜಯಕುಮಾರ್ ಅವರೊಂದಿಗೆ ಎರಡು ಸಾವಿರಕ್ಕೂ ಹೆಚ್ಚು ಜನರು ಪಾದಯಾತ್ರೆಯನ್ನು ಸೇರಿಕೊಂಡು, ಗಂಗಾಪೂಜೆಗೆ ಸಾಕ್ಷೀಭೂತರಾದರು.
ಅಂತಿಮ ದಿನದ ಪಾದಯಾತ್ರೆ ಸೊಂಡೆಕೊಪ್ಪದಿಂದ ಭಾನುವಾರ ಬೆಳಗ್ಗೆ ಆರಂಭವಾಯಿತು. ಮಲ್ಲಸಂದ್ರದ ವೀರಭದ್ರೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ತಿಪ್ಪಗೊಂಡನಹಳ್ಳಿಯವರೆಗಿನ ಪ್ರತಿ ಹಳ್ಳಿಯಲ್ಲಿಯೂ ಹಸಿರತೋರಣದ ಸ್ವಾಗತದೊಂದಿಗೆ ಜನಜಾಗೃತಿ ಸಭೆಗಳು ನಡೆದವು. ಹಾಗೆಯೇ, 200ರ ಆಸುಪಾಸಿನಲ್ಲಿದ್ದ ಪಾದಯಾತ್ರಿಗಳ ಗಣನೆ ಎರಡು ಸಾವಿರಕ್ಕೂ ಹೆಚ್ಚಿನ ಸಂಖ್ಯೆಗೆ ವಿಸ್ತರಿಸುತ್ತಾ ಹೋಯಿತು. ವಿಶ್ವನಾಥ್ ಹಾಗೂ ಮುನಿರಾಜು ನೇತೃತ್ವದ ಪಾದಯಾತ್ರೆಗೆ ಚೋಳನಾಯಕಹಳ್ಳಿ ಸಮೀಪ ಸಂಸದ ಅನಂತಕುಮಾರ್, ಸಚಿವ ಆರ್. ಅಶೋಕ್, ಶಾಸಕರಾದ ರವಿಸುಬ್ರಹ್ಮಣ್ಯ, ವಿಜಯ್‌ಕುಮಾರ್ ಸೇರಿಕೊಂಡು, ತಿಪ್ಪಗೊಂಡನಹಳ್ಳಿ ಜಲಾಶಯದವರೆಗೆ ಹೆಜ್ಜೆ ಹಾಕಿದರು.
ಜಲಾಶಯದ ಹಿಂಭಾಗಕ್ಕೆ ಸಾಗಿದ ಪಾದಯಾತ್ರೆ, ಗಣೇಶನಂತೆ ಆಕಾರ ಹೊಂದಿರುವ ಕಲ್ಲಿಗೆ ವಿಘ್ನೇಶನ ಪೂಜೆ ನೆರವೇರಿಸಿತು. ಅಲ್ಲಿ ನಡೆದ ಗಂಗಾಪೂಜೆಯಲ್ಲಿ ಎಲ್ಲರೂ ಭಾಗವಹಿಸಿದರು. ಅರ್ಕಾವತಿ ಉಗಮಸ್ಥಾನದಿಂದ ಪಾದಯಾತ್ರೆಯಲ್ಲಿ ರಥದ ಮೂಲಕ ತಂದಿದ್ದ ಪಂಚಕುಂಭಗಳಲ್ಲಿನ ನೀರನ್ನು ವಿಶ್ವನಾಥ್ ಹಾಗೂ ಮುನಿರಾಜು ದಂಪತಿ ಮತ್ತು ಅನಂತಕುಮಾರ್, ಅಶೋಕ್ ಅವರು ಜಲಾಶಯಕ್ಕೆ ಸಮರ್ಪಿಸಿದರು. ನಂದಿಬೆಟ್ಟದಲ್ಲಿ ಉಗಮಿಸುವ ಅರ್ಕಾವತಿ ಇಲ್ಲಿಗೆ ಸರಾಗವಾಗಿ ಹರಿಯಲಿ ಎಂದು ಪ್ರಾರ್ಥಿಸಿದರು.
ಅರ್ಕಾವತಿ ನದಿ ಪುನಶ್ಚೇತನಕ್ಕೆ ಸಚಿವರ ನೇತೃತ್ವದಲ್ಲಿ ಉನ್ನತಾಧಿಕಾರಿಗಳ ಸಮಿತಿ ರಚಿಸಬೇಕೆಂಬ ಮನವಿ ಪತ್ರವನ್ನು ಪಾದಯಾತ್ರಿಗಳ ಪರವಾಗಿ ವಿಶ್ವನಾಥ್ ಹಾಗೂ ಮುನಿರಾಜು ಅವರು ಸಂಸದ ಅನಂತಕುಮಾರ್, ಸಚಿವ ಅಶೋಕ್ ಅವರಿಗೆ ನೀಡಿದರು. ಮುಖ್ಯಮಂತ್ರಿಯವರಿಗೆ ಈ ಮನವಿ ಪತ್ರ ತಲುಪಿಸಲು ಕೋರಲಾಯಿತು. ಅರ್ಕಾವತಿ ಪುನಶ್ಚೇತನ ಸಮಿತಿಗೆ ಎಲ್ಲ ಇಲಾಖೆಗಳೂ ನಿರ್ದೇಶನ ನೀಡುವ, ಅವರಿಂದ ಕೆಲಸ ಮಾಡುವ ಅಧಿಕಾರ ಸೇರಿದಂತೆ ಸರ್ವ ಅಧಿಕಾರ ನೀಡಬೇಕು ಎಂದು ಮನವಿಪತ್ರದಲ್ಲಿ ತಿಳಿಸಲಾಗಿದೆ.
ಇಂತಹ ಇತಿಹಾಸ ರಚಿಸಿದ ಪಾದಯಾತ್ರೆಯ ಉದ್ದೇಶವನ್ನು ಈಡೇರಿಸುವ ಸ್ಪಷ್ಟ ಸೂಚನೆಯನ್ನೂ ರಾಜ್ಯ ಸರಕಾರ ನೀಡಿದೆ. ಸಚಿವರನ್ನು ಒಳಗೊಂಡ ಉನ್ನತಾಧಿಕಾರಿಗಳ ಸಮಿತಿ ರಚನೆಯನ್ನು ಮಾಡುವುದಾಗಿ ಹೇಳಿದೆ. ಇದು ಹೇಳಿಕೆಗೆ ಮಾತ್ರ ಸೀಮಿತವಾಗದೆ, ನದಿಯೊಂದನ್ನು ಪುನಶ್ಚೇತನಗೊಳಿಸಿ ಇತಿಹಾಸ ರಚನೆಯ ಕೆಲಸ ರಾಜ್ಯ ಸರಕಾರದಿಂದ ಪ್ರಾಮಾಣಿಕವಾಗಿ ಆಗಬೇಕಿದೆ. ಆಗ, ಇಡೀ ರಾಷ್ಟ್ರಕ್ಕೆ ಅರ್ಕಾವತಿ ನದಿ ಪುನಶ್ಚೇತನ ಮಾದರಿಯಾಗುತ್ತದೆ.

ಏನೆಂದರು?
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ರಾಷ್ಟ್ರೀಯ ಜಲನೀತಿ ಅರ್ಕಾವತಿ ನದಿ ಪುನಶ್ಚೇತನಕ್ಕೆ ಪೂರ್ಣವಾಗಿ ಸಮ್ಮತವಾಗುತ್ತದೆ. ನದಿ ಪುನಶ್ಚೇತನದ ಅವರ ಕನಸನ್ನು ರಾಜ್ಯಮಟ್ಟದಲ್ಲಿ ಪೂರ್ಣಗೊಳಿಸುವ ಕಾರ್ಯ ಅರ್ಕಾವತಿಯಿಂದಲೇ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಹರಿಯುತ್ತಿದ್ದ ನದಿಯನ್ನು ನಾವು ಬತ್ತಿಸಿದ್ದೇವೆ. ಎಲ್ಲವನ್ನೂ ಹೊಂದಿರುವ ಈ ಮಹಾನಗರಿಗೆ ನದಿ ದಂಡೆಯ ವೈಭವವೂ ಲಭಿಸಿದರೆ ಉದ್ಯಾನನಗರಿಯ ಸೊಬಗು ಮತ್ತಷ್ಟು ವೃದ್ಧಿಸುತ್ತದೆ. ಅಷ್ಟೇಅಲ್ಲ, ಕೃಷಿ ಚಟುವಟಿಕೆಗೆ ಬೆನ್ನೆಲುಬಾಗುವ ಅರ್ಕಾವತಿ ನದಿ ಪುನಶ್ಚೇತನದ ಕನಸನ್ನು ರಾಜ್ಯ ಸರಕಾರ ನನಸು ಮಾಡುತ್ತದೆ. ಕೇಂದ್ರದ ಪ್ರತಿನಿಧಿಗಳು ಇದರಲ್ಲಿರುತ್ತಾರೆ. -ಅನಂತಕುಮಾರ್, ಸಂಸದ
ಮುಂದಿನ ದಿನಗಳಲ್ಲಿ ನೀರಿನ ಬವಣೆ ಹೆಚ್ಚಾಗಲಿದೆ. ಇದನ್ನು ಅರಿತಿರುವ ಸರಕಾರ ಮುಂದಾಲೋಚನೆ ದೃಷ್ಟಿಯಿಂದ ಅರ್ಕಾವತಿ ನದಿ ಪುನಶ್ಚೇತನವನ್ನು ಗಂಭೀರವಾಗಿ ಪರಿಗಣಿಸಿದೆ. ಇದನ್ನು ಮತ್ತೊಂದು ವೃಷಭಾವತಿ ಆಗಲು ಬಿಡುವುದಿಲ್ಲ. ಅರ್ಕಾವತಿ ನದಿಯನ್ನು ಮಲೀನ ಮಾಡುತ್ತಿರುವವರು, ಒತ್ತುವರಿ ಮಾಡಿಕೊಂಡಿರುವರು, ನದಿ ಪಾತ್ರದಲ್ಲಿ ಕೈಗಾರಿಕೆ, ಗಣಿಗಾರಿಕೆ, ಮರಳುಸಾಗಣೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ, ಮರಳು ನೀತಿಯಲ್ಲಿ ಇವೆಲ್ಲವನ್ನು ಸೇರಿಸಿಕೊಳ್ಳಲು ಕಾನೂನಿಗೆ ತಿದ್ದುಪಡಿ ತರಲಾಗುತ್ತದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುತ್ತದೆ. ಮುಖ್ಯಮಂತ್ರಿಗಳು ನಗರಕ್ಕೆ ಬಂದ ಕೂಡಲೇ ಉನ್ನತಾಧಿಕಾರಿಗಳ ಸಮಿತಿ ರಚನೆ ಆಗಲಿದೆ. ಅರ್ಕಾವತಿ ಮತ್ತೆ ಹರಿಯಲಿ. ಇದಕ್ಕೆ ಸರಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ. -ಆರ್. ಅಶೋಕ್, ಸಾರಿಗೆ ಸಚಿವ
ಅರ್ಕಾವತಿ ನದಿ ಪುನಶ್ಚೇತನದಿಂದ ಬೆಂಗಳೂರಿಗೆ ನೀರು ದೊರೆಯುವುದು ಮಾತ್ರವಲ್ಲ, ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಗ್ರಾಮಗಳಲ್ಲಿ ಕೃಷಿಗೆ ಅನುಕೂಲವಾಗುತ್ತದೆ. ಅಂತರ್ಜಲ ಮಟ್ಟ ವೃದ್ಧಿಸುತ್ತದೆ. ಇದರಿಂದ ಪರಿಸರದಲ್ಲಿರುವ ಸಾವಿರಾರು ರೀತಿಯ ಜಲಚರ, ಪ್ರಾಣಿಪಕ್ಷಿಗಳಿಗೆ ಪ್ರಯೋಜನವಾಗುತ್ತದೆ. ಅರ್ಕಾವತಿ ನದಿ ಪುನಶ್ಚೇತನಕ್ಕಾಗಿ ಜನಜಾಗೃತಿಗೆ ಈ ಪಾದಯಾತ್ರೆ ನಡೆಸಲಾಯಿತು. ಅರ್ಕಾವತಿ ನದಿ ನಂದಿಬೆಟ್ಟಯಿಂದ ಹರಿದು ಹೆಸರಘಟ್ಟ ತುಂಬಿದರೆ, ಅಲ್ಲಿಂದ ನಂದಿಗೆ ಪಾದಯಾತ್ರೆ ಮಾಡುತ್ತೇನೆ. ಆ ತಾಯಿಗೆ ಪ್ರಾರ್ಥನೆ ಸಲ್ಲಿಸುತ್ತೇನೆ. -ಎಸ್.ಆರ್. ವಿಶ್ವನಾಥ್, ಶಾಸಕ
ಅರ್ಕಾವತಿ ನದಿ ಹರಿದು ಹೆಸರಘಟ್ಟ ತುಂಬಿದರೆ, ಈಗಿರುವ ವ್ಯವಸ್ಥೆಯಿಂದ ದಾಸರಹಳ್ಳಿ ಕ್ಷೇತ್ರಕ್ಕೆ ಕೂಡಲೇ ಕುಡಿಯುವ ನೀರು ನೀಡಬಹುದು. ಇದು ನನ್ನ ಕ್ಷೇತ್ರದ ಜನರ ಪಾಲಿನ ಜೀವಗಂಗೆ. ಈ ನದಿಯನ್ನು ಹರಿಸಿದರೆ, ಬೆಂಗಳೂರಿನ ಶೇ.25ರಷ್ಟು ಭಾಗಕ್ಕೆ ನೀರು ಕೊಡಬಹುದು. ಆದ್ದರಿಂದ ಈ ನದಿ ಪುನಶ್ಚೇತನಕ್ಕಾಗಿ ಸರ್ವಪ್ರಯತ್ನ ಮಾಡುತ್ತೇನೆ. -ಎಸ್. ಮುನಿರಾಜು, ಶಾಸಕ

ಯಾರು ಎಷ್ಟು ನಡೆದರು?
ಅರ್ಕಾವತಿ ಪುನಶ್ಚೇತನ ವೇದಿಕೆಯಡಿ ಆಯೋಜಿಸಲಾಗಿದ್ದ ಈ ಪಾದಯಾತ್ರೆ ನಂದಿಬೆಟ್ಟದಿಂದ ತಿಪ್ಪಗೊಂಡನಹಳ್ಳಿ ಜಲಾಶಯದವರೆಗೆ 106 ಕಿಮೀ ಹೆಜ್ಜೆ ಹಾಕಿತು. ಈ ಸಂಪೂರ್ಣ ನಾಲ್ಕು ದಿನ, ಒಂದು ನಿಮಿಷವೂ ವಾಹನ ಹತ್ತದೆ, ಸಂಪೂರ್ಣ ನಡಿಗೆಯಲ್ಲಿ ಪಾಲ್ಗೊಂಡಿದ್ದು ಶಾಸಕ ಎಸ್. ವಿಶ್ವನಾಥ್. ಪಾದಯಾತ್ರೆಯ ರೂವಾರಿ ಆಗಿದ್ದ ವಿಶ್ವನಾಥ್, ಭಾಷಣ ಮಾಡುವಾಗ ಮಾತ್ರ ಮೈಕ್‌ಗಾಗಿ ವಾಹನ ಹತ್ತಿದ್ದು ಬಿಟ್ಟರೆ, ಅಂತಿಮ ದಿನ ಬೆರಳ ಸಂದಿಯಲ್ಲಿ ರಕ್ತ ಸುರಿಯುತ್ತಿದ್ದರೂ 106 ಕಿಮೀ ದೂರವನ್ನು ನಡಿಗೆಯಲ್ಲೇ ಪೂರ್ಣಗೊಳಿಸಿದರು.
ವಿಶ್ವನಾಥ್ ಜತೆಗೆ ಪೂರ್ಣ ಪಾದಯಾತ್ರೆ ಸುಮಾರು 100 ಜನರು ಹೆಜ್ಜೆ ಹಾಕಿದರು. ಶಾಸಕ ಎಸ್. ಮುನಿರಾಜು ನಾಲ್ಕು ದಿನ ಬಹುತೇಕ (ಸುಮಾರು 80 ಕಿ.ಮೀ.) ಹೆಜ್ಜೆ ಹಾಕಿದರು. ನಾಗದಳ ತಂಡ ನಂದಿಬೆಟ್ಟದಿಂದ ದೊಡ್ಡಬಳ್ಳಾಪುರ (30 ಕಿಮೀ); ಪರಿಸರವಾದಿ ಮಹೇಶ್ ಭಟ್ 12 ಕಿಮೀ (ಹನಿಯೂರಿನಿಂದ ಹೆಸರಘಟ್ಟ); ಕರ್ನಾಟಕ ರಕ್ಷಣಾ ವೇದಿಕೆಯ ದೊಡ್ಡಬಳ್ಳಾಪುರ ತಂಡ 11 ಕಿಮೀ (ನಂದಿಬೆಟ್ಟದಿಂದ ಸೀಗೇಹಳ್ಳಿ ಗೇಟ್); ಸಚಿವ ಸುರೇಶ್ ಕುಮಾರ್ 8 ಕಿಮೀ (ನಂದಿಬೆಟ್ಟದಿಂದ ಕ್ರಾಸ್‌ವರೆಗೆ); ಸಚಿವ ಆರ್ ಅಶೋಕ್ 7 ಕಿಮೀ (ತರಬನಹಳ್ಳಿಯಿಂದ ರೈಲ್ವೆ ಸೇತುವೆ ಹೊಳೆ ಹಾಗೂ ಚೋಳನಾಯಕನಹಳ್ಳಿಯಿಂದ ತಿಪ್ಪಗೊಂಡನಹಳ್ಳಿ); ಸಚಿವ ರಾಮಚಂದ್ರಗೌಡ 6 ಕಿಮೀ (ರಾವುತ್ತನಹಳ್ಳಿಯಿಂದ ಸೊಂಡೆಕೊಪ್ಪ); ಶಾಸಕ ನರಸಿಂಹಸ್ವಾಮಿ ದೊಡ್ಡಬಳ್ಳಾಪುರದ ವೀರಾಪುರದವರೆಗೆ (ಸುಮಾರು 6 ಕಿಮೀ), ಸಂಸದ ಅನಂತಕುಮಾರ‍್, ಶಾಸಕರಾದ ರವಿಸುಬ್ರಹ್ಮಣ್ಯ ಹಾಗೂ ವಿಜಯಕುಮಾರ್ 5 ಕಿಮೀ (ಚೋಳನಾಯಕನಹಳ್ಳಿಯಿಂದ ತಿಪ್ಪಗೊಂಡನಹಳ್ಳಿ); ಶಾಸಕ ನಾಗರಾಜ್ 4 ಕಿಮೀ(ಸೊಂಡೆಕೊಪ್ಪದ ಸಮೀಪದಲ್ಲಿ). ಇವರಲ್ಲದೆ, ಯಲಹಂಕ, ದಾಸರಹಳ್ಳಿಯ ಮುಖಂಡರು ಹಾಗೂ ನೂರಾರು ಜನರು ದಿನಕ್ಕೆ ಹತ್ತಾರು ಕಿಮೀ ದೂರ ಪಾದಯಾತ್ರೆಯಲ್ಲಿ ಸಾಗಿದರು.

ಇತಿಹಾಸ ರಚನೆ
ಅರ್ಕಾವತಿ ನದಿ ಪುನಶ್ಚೇತನಕ್ಕೆ ಜನಪ್ರತಿನಿಧಿಗಳನ್ನು ಒಳಗೊಂಡ ನಾಲ್ಕು ದಿನಗಳ ಪಾದಯಾತ್ರೆ ಹೊಸ ಇತಿಹಾಸ ರಚಿಸಿತು. ನದಿ ಪುನಶ್ಚೇತನ ಹಾಗೂ ಸಂರಕ್ಷಣೆ ಬಗ್ಗೆ ಜನಜಾಗೃತಿಯ ಮೂಲ ಉದ್ದೇಶವನ್ನು ಹೊಂದಿದ್ದ ಪಾದಯಾತ್ರೆ, ಪಕ್ಷಾತೀತವಾಗಿ ಹೆಜ್ಜೆಹಾಕಿತ್ತು. ಸಚಿವರು ಹಾಗೂ ಶಾಸಕರು ಸೇರಿದಂತೆ ಪರಿಸರವಾದಿಗಳಾದ ಡಾ. ಅ.ನ. ಯಲ್ಲಪ್ಪರೆಡ್ಡಿ, ಸುರೇಶ್ ಹೆಬ್ಳೀಕರ್, ಮಹೇಶ್ ಭಟ್, ಸೀತಾರಾಂ, ಶಿವಮಲ್ಲು, ಕೆ.ಸಿ. ಶಿವರಾಂ, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ, ಅರ್ಕಾವತಿ ಪುನಶ್ಚೇತನ ಸಮಿತಿ, ನಾಗದಳ, ಕುಮುದ್ವತಿ ನೆಲ-ಜಲ ರಕ್ಷಣಾ ಸಮಿತಿ, ಅರ್ಕಾವತಿ ಜನಜಾಗೃತಿ ಸಮಿತಿ, ಜನಧ್ವನಿ, ಕರ್ನಾಟಕ ಸುರಕ್ಷಾ ಸೇನಾಪಡೆ ಸೇರಿದಂತೆ ಹತ್ತಾರು ಸಂಘ-ಸಂಸ್ಥೆಗಳು, ಪರಿಸರವಾದಿಗಳು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
ಪಾದಯಾತ್ರೆಯ ಸಂದರ್ಭದಲ್ಲಿ ಮೂರು ದಿನ ಸುಗಮಸಂಗೀತದ ದಿಗ್ಗಜರಾದ ಡಾ. ಸಿ. ಅಶ್ವತ್ಥ್, ಡಾ. ಶಿವಮೊಗ್ಗ ಸುಬ್ಬಣ್ಣ, ವೈ.ಕೆ. ಮುದ್ದುಕೃಷ್ಣ, ಕಿಕ್ಕೇರಿ ಕೃಷ್ಣಮೂರ್ತಿ ತಂಡ ಪರಿಸರ ಗೀತೆಗಳ ಸುಧೆಹರಿಸಿ, ಪರಿಸರ-ನದಿ ಉಳಿಸುವ ಪ್ರಯತ್ನದಲ್ಲಿ ನಾವಿದ್ದೇವೆ ಎಂದು ಸಾರಿದ್ದು ಗಮನಾರ್ಹವಾಗಿತ್ತು.
ಈ ಹಿಂದೆ, 2007ರ ಜನವರಿಯಲ್ಲಿ ಹಲವು ಸಂಘ-ಸಂಸ್ಥೆಗಳು, ಪರಿಸರವಾದಿಗಳು ಸೇರಿಕೊಂಡು ಕೆ.ಸಿ. ಶಿವರಾಂ ಸಂಘಟನೆಯಲ್ಲಿ ನಂದಿಬೆಟ್ಟದಿಂದ ಕನಕಪುರದ ಸಂಗಮದವರೆಗೆ 190 ಕಿಮೀ ದೂರವನ್ನು ಒಂಬತ್ತು ದಿನದಲ್ಲಿ ಪಾದಯಾತ್ರೆ ಮೂಲಕ ಕ್ರಮಿಸಿದ್ದರು.

ನಿರೀಕ್ಷೆಗೂ ಮೀರಿದ ಸ್ಪಂದನೆ, ಉನ್ನತ ಸಮಿತಿ ರಚನೆ

ಅರ್ಕಾವತಿ ಪಾದಯಾತ್ರೆ-ದಿನ-3: ಸೆಪ್ಟೆಂಬರ್ 5, 2009
ಅರ್ಕಾವತಿ ನದಿ ಪುನಶ್ಚೇತನ, ಜನಜಾಗೃತಿ ಪಾದಯಾತ್ರೆಗೆ ಮೂರನೇ ದಿನ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಯಿತು. ಜತೆಗೆ, ನದಿ ಪುನಶ್ಚೇತನಕ್ಕೆ ಮೂರು ಸಚಿವರನ್ನೊಳಗೊಂಡ ಸರಕಾರದ ಉನ್ನತ ಸಮಿತಿ ರಚನೆಗೂ ಮನ್ನಣೆ ಸಿಕ್ಕಿತು. ಸಾರಿಗೆ ಸಚಿವ ಆರ್. ಅಶೋಕ್ ಹಾಗೂ ವೈದ್ಯಕೀಯ ಶಿಕ್ಷಣ ಖಾತೆಸಚಿವ ರಾಮಚಂದ್ರಗೌಡ ಅವರು ಪಾದಯಾತ್ರೆಯಲ್ಲಿ ಕೊಂಚದೂರ ಹೆಜ್ಜೆ ಹಾಕಿ ನದಿ ಪುನಶ್ಚೇತನಕ್ಕೆ ಸರಕಾರ ಕಂಕಣಬದ್ಧರಾಗಿರುವುದಾಗಿ ಪ್ರಕಟಿಸಿದ್ದು, ಶನಿವಾರದ ಪಾದಯಾತ್ರೆಯ ಹೈಲೈಟ್.
ಹೆಸರಘಟ್ಟದಿಂದ ಬೆಳಗ್ಗೆ 7.15ಕ್ಕೆ ಆರಂಭವಾದ ಮೂರನೇ ದಿನದಪಾದಯಾತ್ರೆಗೆ ತರಬನಹಳ್ಳಿಯಲ್ಲಿ ಊರ ಹಬ್ಬದ ಮೆರವಣಿಗೆ ಸೊಗಡಿನ ಸ್ವಾಗತ ದೊರೆಯಿತು. ಶಾಸಕರಾದ ವಿಶ್ವನಾಥ್ ಹಾಗೂ ಮುನಿರಾಜು ನೇತೃತ್ವದಪಾದಯಾತ್ರೆಗೆಸಾರಿಗೆ ಸಚಿವ ಆರ್. ಅಶೋಕ್ ಸ್ವಾಗತಿಸಿ, ಕೊಂಚ ದೂರ ಹೆಜ್ಜೆ ಹಾಕಿದರು. ಅಲ್ಲದೆ, ಮಹಿಳೆಯರು ಹೊತ್ತುತಂದಿದ್ದ ಕಳಸದ ನೀರನ್ನು ಅರ್ಕಾವತಿ ನದಿ ಪಾತ್ರದಲ್ಲಿ ಸುರಿಯುವ ಮೂಲಕ ಪುನಶ್ಚೇತನದ ಶಪಥ ಮಾಡಿದರಲ್ಲದೆ, ಅದನ್ನೇ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು ಹಾಗೂ ನಾಗರಿಕರಿಗೆ ಬೋಧಿಸಿದರು.
ತರಬನಹಳ್ಳಿಯಿಂದ ಹೆಗ್ಗಡದೇವನಪುರದವರೆಗೆ ಡೊಳ್ಳುಕುಣಿತ, ತಮಟೆ, ದೊಡ್ಡ ಮುಖವಾಡದ ಗೊಂಬೆಗಳು, ಪೂಜಾಕುಣಿತದೊಂದಿಗೆ ಸಾವಿರಾರು ಜನರು ಪ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಸುಮಾರ 6 ಕಿಮೀ ದೂರ ನದಿ ಪಾತ್ರದಲ್ಲೇ ಪಾದಯಾತ್ರೆ ಸಾಗಿತು. ಮಾಕಳಿ ಮೂಲಕ, ರಾವುತ್ತನಹಳ್ಳಿ ಕ್ರಾಸ್ ಮೂಲಕ ಸೊಂಡೆಕೊಪ್ಪ ತಲುಪಿದ ಪಾದಯಾತ್ರಿಗಳಲ್ಲಿ ನದಿ ಪುನಶ್ಚೇತನ ಸಮಿತಿ ರಚನೆಯ ಸಂತಸ ನಡಿಗೆಯ ಉತ್ಸಾಹವನ್ನು ಮರೆಮಾಡಿತ್ತು. ಕರ್ನಾಟಕ ಸುಗಮ ಸಂಗೀತ ಪರಿಷತ್ ಅಧ್ಯಕ್ಷ ವೈ.ಕೆ. ಮುದ್ದುಕೃಷ್ಣ ಹಾಗೂ ಕಿಕ್ಕೇರಿ ಕೃಷ್ಣಮೂರ್ತಿ ತಂಡದ ಸುಗಮ ಸಂಗೀತ ಗಾಯನ, ಪರಿಸರ ರಕ್ಷಣೆಯಲ್ಲಿ ಮತ್ತಷ್ಟು ತೊಡಗಿಸಿಕೊಳ್ಳಲು ಪಾದಯಾತ್ರಿಗಳನ್ನುಪ್ರೇರೇಪಿಸಿತು.
ಮಾಕಳಿಯಲ್ಲಿ ಕೈಗಾರಿಕೆಗಳ ಬೆಂಬಲ
ಅರ್ಕಾವತಿ ನದಿ ಪಾತ್ರವನ್ನು ಉಳಿಸಿ, ಹರಿಸಲು ಹಾಗೂ ಒತ್ತುವರಿ ತೆರವು, ಮಾಲಿನ್ಯ ಬಿಡುವ ಕೈಗಾರಿಕೆಗಳನ್ನು ತೆರವುಗೊಳಿಸಲು ಅರ್ಕಾವತಿ ಕೈಗಾರಿಕೆಗಳ ಕ್ಷೇಮಾಭಿವೃದ್ಧಿ ಸಂಘ ಬೆಂಬಲ ಸೂಚಿಸಿದೆ.
ಪಾದಯಾತ್ರಿಗಳನ್ನು ಸ್ವಾಗತಿಸಲು ಸಂಘ ಮಾಕಳಿಯಲ್ಲಿ ಸಭೆ ಆಯೋಜಿಸಿತ್ತು. ನದಿ ಪಾತ್ರದ ಒಂದು ಕಿಮೀ ಆಸುಪಾಸು ಮಾಲಿನ್ಯ ಉಂಟು ಮಾಡದ ಕಾರ್ಖಾನೆ ಹಾಗೂ ಗಾರ್ಮೆಂಟ್ಸ್‌ಗಳನ್ನು ಉಳಿಸಿಕೊಳ್ಳಲು ಸಂಘ ಮನವಿ ಮಾಡತು. ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ವಿಶ್ವನಾಥ್ ಭರವಸೆ ನೀಡಿದರು.
ವಿರೋಧ
ಸರಕಾರ 2003ರಲ್ಲಿ ಹೊರಡಿಸಿರುವ ಅಧಿಸೂಚನೆ ಪ್ರಕಾರ, ನದಿ ಪಾತ್ರದಿಂದ 1 ಕಿಮೀ ಆಸುಪಾಸು ಯಾವುದೇ ಕಾರ್ಖಾನೆಗಳಿರುವಂತಿಲ್ಲ. ಮಾಲಿನ್ಯ- ಮಾಲಿನ್ಯ ರಹಿತ ಕಾ ರ್ಖಾನೆಗಳೆಂದು ವಿಂಗಡಿಸಿಲ್ಲ. ಆದ್ದರಿಂದ ಎಲ್ಲ ಕೈಗಾರಿಕೆಗಳನ್ನು ತೆರವುಗೊಳಿಸಬೇಕು. ಯಾವ ಒತ್ತಡಕ್ಕೂ ಮಣಿಯಬಾರದು ಎಂದು ಪರಿಸರವಾದಿಗಳು ಹಾಗೂ ಸ್ಥಳೀಯರು ಅಭಿಪ್ರಾಯಪಟ್ಟರು. ಕೈಗಾರಿಕೆಗಳು ಉಳಿಯಲು ಅನುವು ಮಾಡಿಕೊಟ್ಟರೆ ಹೋರಾಟ ಮಾಡುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಏನೆಂದರು?
ಕಂದಾಯ ಸಚಿವ, ಜಲಮಂಡಳಿ ಸಚಿವ ಹಾಗೂ ನೀರಾವರಿ ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಉನ್ನತ ಸಮಿತಿಯನ್ನು ಅರ್ಕಾವತಿ ನದಿ ಪುನಶ್ಚೇತನಕ್ಕೆ ರಚಿಸಲಾಗುತ್ತದೆ. ಮುಖ್ಯಮಂತ್ರಿ ಅವರು ಚೀನಾದಿಂದ ಬಂದಕೂಡಲೇ ಇದಕ್ಕೆ ಚಾಲನೆ ನೀಡಲಾಗುತ್ತದೆ. ಇದು ಕೇವಲ ಪಾದಯಾತ್ರೆ ಅಲ್ಲ, ಸರಕಾರದ ಹಣದ ಸದುಯೋಗ ಹಾಗೂ ಪರಿಸರ ಉಳಿಸುವ ಅರಿವನ್ನು ಜನರಲ್ಲಿ ಮೂಡಿಸುವ ಆಂದೋಲನ. ನದಿ-ಕೆರೆ ಒತ್ತುವರಿಯನ್ನು ಸರಕಾರ ಸಹಿಸುವುದಿಲ್ಲ. ಕೈಗಾರಿಕೆಗಳು ಸೇರಿದಂತೆ ಯಾರೇ ಒತ್ತುವರಿ ಮಾಡಿಕೊಂಡಿದ್ದರೂ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. -ಆರ್. ಅಶೋಕ್, ಸಾರಿಗೆ ಸಚಿವ

ಕಲುಷಿತ ನೀರನ್ನು ನದಿಗೆ ಬಿಡುವ ಕಾರ್ಖಾನೆಗಳು ಹಾಗೂ ನದಿಪಾತ್ರದಲ್ಲಿ ಬಡಾವಣೆ ನಿರ್ಮಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕಾರ್ಖಾನೆಯನ್ನು ಬದಲಿಸಬಹುದು. ಆದೆ ನದಿಯನ್ನು, ಅದರ ಹರಿವನ್ನು ಬದಲಿಸಲು ಸಾಧ್ಯವಿಲ್ಲ. ಒತ್ತುವರಿ ತೆರವಿಗೆ ಯಾವ ಒತ್ತಡಕ್ಕೂ ಮಣಿಯುವುದಿಲ್ಲ. -ಎಸ್.ಆರ್. ವಿಶ್ವನಾಥ್, ಶಾಸಕ

ಪಾದಯಾತ್ರೆ ಹೆಜ್ಜೆಗಳು- ದಿನ-3
ಬೆಳಗ್ಗೆ 7.15: ಹೆಸರಘಟ್ಟದಿಂದ ಹೊರಟು ಐವರುಕಂಡ ಪುರದ ಮೂಲಕ ತಿರುಮಳಾಪುರ ಪ್ರವೇಶ. ಸ್ಥಳೀಯರಿಂದ ಹಸಿರುತೋರಣದ ಸ್ವಾಗತ.
9.30: ತರಬನಹಳ್ಳಿಯಲ್ಲಿ ಸಚಿವ ಆರ್. ಅಶೋಕ್ ಅವರಿಂದ ಸ್ವಾಗತ. ಊರಹಬ್ಬದ ಮೆರವಣಿಗೆಯಲ್ಲಿ ಪಾದಯಾತ್ರೆ ಹೆಜ್ಜೆ.
10.45: ಅಶೋಕ್ ಅವರಿಂದ ಅರ್ಕಾವತಿ ನದಿ ಪಾತ್ರಕ್ಕೆ ಕಳಸ ನೀರು ಸಮರ್ಪಣೆ. ಮೆರವಣಿಯಲ್ಲಿ ಮುನಿಯಯ್ಯನ ಪಾಳ್ಯ, ಆಲೂರಿಗೆ ಪ್ರವೇಶ. ಅಲ್ಲಿ ಸ್ವಾಗತ, ಜನಜಾಗೃತಿ ಸಭೆ.
12.30: ಹೆಗ್ಗಡದೇವನಪುರಕ್ಕೆ ಆಗಮನ. ನೃತ್ಯ ಹಾಗೂ ಡೊಳ್ಳು ಕುಣಿತದ ಸ್ವಾಗತ.
1.45: ಮಾಕಳಿಯಲ್ಲಿರುವ ಅಗಸ್ತ್ಯ ಮುನಿಗಳು ತಪಸ್ಸು ಮಾಡಿದ್ದ ಭೀಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ.
2.00: ಅರ್ಕಾವತಿ ಕೈಗಾರಿಕೆಗಳ ಕ್ಷೇಮಾಭಿವೃದ್ಧಿ ಸಂಘದೊಂದಿಗೆಸಭೆ.
3.20: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮರದ ಕಾಲಿನ ಕುಣಿತ ಸ್ವಾಗತದೊಂದಿಗೆ ರಾವುತ್ತಹಳ್ಳಿ ಕ್ರಾಸ್ ಪ್ರವೇಶ.
4.30: ಶಿವಪುರದಲ್ಲಿ ಸ್ವಾಗತ ಸಭೆ.
5.20: ರಾವುತ್ತನಹಳ್ಳಿ ಪ್ರವೇಶ. ಗ್ರಾಮದಲ್ಲಿ ಸಭೆ. ಸಚಿವ ರಾಮಚಂದ್ರಗೌಡಪಾದಯಾತ್ರೆಗೆ ಸೇರ್ಪಡೆ.
6.00: ಸೊಂಡೆಕೊಪ್ಪ ಪ್ರವೇಶ. ಆದರ್ಶ ಸುಗಮಸಂಗೀತ ಅಕಾಡೆಮಿ ನೇತೃತ್ವದಲ್ಲಿ ವೈ.ಕೆ. ಮುದ್ದುಕೃಷ್ಣ ಅವರಿಂದ ಪರಿಸರಗೀತೆಗಳ ಗಾಯನ.

ಎರಡನೇ ದಿನ ಮುಗಿಲು ಮುಟ್ಟಿದ ಉತ್ಸಾಹ

ಅರ್ಕಾವತಿ ಪಾದಯಾತ್ರೆ-ದಿನ-2: ಸೆಪ್ಟೆಂಬರ್ 4, 2009
ಹಳ್ಳಿಗಳಲ್ಲಿ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು ಅಲ್ಲಿನ ಬೀದಿಗಳಲ್ಲಿ ಸ್ವಾಗತ ಸಭೆ, ಮನವಿ ಮಾಡುವುದು ಸಾಮಾನ್ಯವಾಗಿ ಚುನಾವಣೆ ಸಮಯದಲ್ಲಿ ಮಾತ್ರ. ಆದರೆ, ಶುಕ್ರವಾರ ದೊಡ್ಡಬಳ್ಳಾಪುರ ಹಾಗೂ ಬೆಂಗಳೂರು ಉತ್ತರ ತಾಲೂಕು ಇದಕ್ಕೆ ತದ್ವಿರುದ್ಧವಾಗಿ ಪ್ರತಿಕ್ರಿಯಿಸಿತ್ತು
ಈ ತಾಲೂಕುಗಳಲ್ಲಿ ಶುಕ್ರವಾರ ಜನಪ್ರತಿನಿಧಿಗಳು ಹಾಗೂ ಮುಖಂಡರ ಜಾತ್ರೆಯೇ ನಡೆದಿತ್ತು. ಆದರೆ ಇದು ಚುನಾವಣೆ ಪ್ರಚಾರ ಆಗಿರಲಿಲ್ಲ. ಅದಕ್ಕಿಂತ ಹೆಚ್ಚಿನ ಉತ್ಸಾಹವೂ ಇತ್ತು. ಏಕೆಂದರೆ ಪಕ್ಷಭೇದ ಮರೆತು ಜನಪ್ರತಿನಿಧಿಗಳು ಅರ್ಕಾವತಿ ನದಿ ಸಂರಕ್ಷಣೆಗೆ ಮನವಿ ಮಾಡುತ್ತಿದ್ದರು. ಅದರ ಅಗತ್ಯವನ್ನು ತಿಳಿಹೇಳಿದರು.
ಅರ್ಕಾವತಿ ನದಿ ಪುನಶ್ಚೇತನ ಹಾಗೂ ಸಂರಕ್ಷಣೆಯ ಜನಜಾಗೃತಿ ಪಾದಯಾತ್ರೆಗೆ ಶುಕ್ರವಾರ ವಿಭಿನ್ನ ರಂಗೇರಿತ್ತು. ಜನಪ್ರತಿನಿಧಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದರು. ಅಷ್ಟೇಅಲ್ಲ, ಪಾದಯಾತ್ರಿಗಳ ಸಂಖ್ಯೆಯೂ ವೃದ್ದಿಸುತ್ತಾ ಹೋಯಿತು.
ಪಾದಯಾತ್ರೆಯ ಎರಡನೇ ದಿನ ದೊಡ್ಡಬಳ್ಳಾಪುರದ ಬಸವಭವನದಿಂದ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಆರಂಭವಾಯಿತು. ಅಲ್ಲಿಂದ ನಾಗರಕೆರೆ, ವೀರಾಪುರ, ಮಜರಾ ಹೊಸಹಳ್ಳಿ ಮೂಲಕ ಹನಿಯೂರು ಪ್ರವೇಶಿಸಿ, ಹೆಸರಘಟ್ಟ ತಲುಪಿತು.
ದೊಡ್ಡಬಳ್ಳಾಪುರದಲ್ಲಿ ಒಂದಷ್ಟು ದೂರ ಶಾಸಕ ನರಸಿಂಹಸ್ವಾಮಿ ಹೆಜ್ಜೆ ಹಾಕಿದರು. ನಾಗರಕೆರೆ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ತಾವು ಬದ್ಧ ಎಂದು ಹೇಳಿದ್ದು ಗಮನಾರ್ಹವಾಗಿತ್ತ. ಈ ಕೆರೆ ಉಳಿವಿಗಾಗಿ ನಾಗದಳ ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದೆ.
ಹನಿಯೂರು ತಲುಪಿದಾಗಲೇ ಪಾದಯಾತ್ರೆಗೆ ವಿಭಿನ್ನ ರೂಪ ದೊರೆತತ್ತು. ಪಾದಯಾತ್ರೆ ಹನಿಯೂರಿಗೆ ಆಗಮಿಸಿದಾಗ, ಮಾವಿನ ತೋರಣ, ಪೂರ್ಣಕುಂಭಗಳ ಮೂಲಕ ಹೂವಿನ ಮಳೆಯಲ್ಲಿ ಸ್ವಾಗತ ಕೋರಲಾಯಿತು. ಪರಿಸರವಾದಿ, ಕಲಾವಿದ ಸುರೇಶ್ ಹೆಬ್ಳೀಕರ್, ಶಾಸಕ ಎಸ್. ಮುನಿರಾಜು, ವಾಣಿಶ್ರೀ ವಿಶ್ವನಾಥ್, ಅರ್ಕಾವತಿ-ಕುಮುದ್ವತಿ ಪುನಶ್ಚೇತನ ಸಮಿತಿ ಅಧ್ಯಕ್ಷ ಮಹೇಶ್ ಭಟ್ ಇಲ್ಲಿ ಪಾದಯಾತ್ರೆಗೆ ಸೇರಿಕೊಂಡರು. ವಿಶ್ವನಾಥ್ ಇವರೆಲ್ಲರೊಂದಿಗೆ ಸೇರಿಕೊಂಡು ಹನಿಯೂರು ಕೆರೆಯಲ್ಲಿ ಗಂಗಾಪೂಜೆ ನೆರವೇರಿಸಿದರು.
ಬೆಂಗಳೂರು ಉತ್ತರ ತಾಲೂಕಿನಲ್ಲಿ ಪಾದಯಾತ್ರೆಗೆ ಅತ್ಯದ್ಭುತ ಸ್ವಾಗತ, ಪ್ರಶಂಸೆ ಹಾಗೂ ಭಾಗವಹಿಸುವಿಕೆ ಕಂಡುಬಂದಿತು. ಸಂಜೆ ಹೆಸರಘಟ್ಟ ಜಲಾಶಯದ ಹಿನ್ನೆಲೆಯಲ್ಲಿ, ಆದರ್ಶ ಸುಗಮಸಂಗೀತ ಅಕಾಡೆಮಿ ನೇತೃತ್ವದಲ್ಲಿ ಹಿರಿಯ ಗಾಯಕ ಡಾ. ಅಶ್ವತ್ಥ್ ಅವರಿಂದ ಸುಗಮ ಸಂಗೀತ ಆಯೋಜಿಸಲಾಗಿತ್ತು.

ಏನೆಂದರು?
ನದಿ ಪುನಶ್ಚೇತನಕ್ಕೆ ಅಧಿಕಾರದಲ್ಲಿರುವ ಜನಪ್ರತಿನಿಧಿಗಳು ಸೇರಿದಂತೆ ಎಲ್ಲ ಪಕ್ಷದವರು ಜತೆಗೂಡಿರುವುದು ರಾಷ್ಟ್ರದಲ್ಲೇ ಇದು ಪ್ರಥಮ. ಅರ್ಕಾವತಿ ನದಿ ಪುನಶ್ಚೇತನಕ್ಕಾಗಿ ಹಮ್ಮಿಕೊಂಡಿರುವ ಈ ಪಾದಯಾತ್ರೆ ರಾಜ್ಯಕ್ಕೇ ಮಾದರಿ. -ಸುರೇಶ್ ಹೆಬ್ಳೀಕರ್, ಕಲಾವಿದ, ಪರಿಸರವಾದಿ
ಅರ್ಕಾವತಿ ನದಿ ಸಂರಕ್ಷಣೆ ಹಾಗೂ ಅರಿವು ಮೂಡಿಸುವ ಕಾರ್ಯಕ್ಕೆ ನಾನು ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ. ಸದ್ಯ ನಡೆಯುತ್ತಿರುವ ಪಾದಯಾತ್ರೆಗೆ ಸರಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂಧನೆ ಸಿಗದಿದ್ದರೆ, ಲಕ್ಷಾಂತರ ಜನರೊಂದಿಗೆ ವಿಧಾನಸೌಧಕ್ಕೆ ತೆರಳಿ ಅಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ. ಅರ್ಕಾವತಿ ಉಳಿವಿಗಾಗಿ ನಾನು ಯಾವ ತ್ಯಾಗಕ್ಕೂ ಸಿದ್ಧ. -ಡಾ. ಸಿ. ಅಶ್ವತ್ಥ್, ಹಿರಿಯ ಗಾಯಕರು.

ಪಾದಯಾತ್ರೆ ಹೆಜ್ಜೆಗಳು- ದಿನ-2
ಬೆಳಗ್ಗೆ 7.15: ದೊಡ್ಡಬಳ್ಳಾಪುರದ ಬಸವಭವನದಿಂದ ಪ್ರಾರಂಭವಾಗಿ, ನಾಗರಕೆರೆಏರಿ ಮೂಲಕ ರೈಲು ನಿಲ್ದಾಣ.
9.15: ಬಾಶೆಟ್ಟಿಹಳ್ಳಿ ಸ್ಥಳೀಯರಿಂದ ಸ್ವಾಗತ. ವೀರಾಪುರಕ್ಕೆ ಪ್ರವೇಶ.
10.30: ವೀರಾಪುರದ ಆಂಜನೇಯ ದೇವಾಲಯದಲ್ಲಿ ಪೂಜೆ ಮತ್ತು ಜನಜಾಗೃತಿ ಸಭೆ.
11.05: ಜಿಂಕೆ ಬಚ್ಚಹಳ್ಳಿ, ದೊಡ್ಡ ತುಮಕೂರಿಗೆ ಪ್ರವೇಶ. ತಮಟೆ ಮೂಲಕ ಸ್ವಾಗತ. ಗ್ರಾ.ಪಂ. ಗ್ರಂಥಾಲಯದಲ್ಲಿ ಸಭೆ. ಕೆರೆ ಒತ್ತುವರಿ ತೆರವಿಗೆ ಪಣ.
1 ಗಂಟೆ: ಹನಿಯೂರಿನಲ್ಲಿ ಅದ್ಧೂರಿ ಸ್ವಾಗತ. ಪೂರ್ಣಕುಂಭ, ಹಸಿರುತೋರಣ ಹಾಗೂ ಪಟಾಕಿ ಮೂಲಕ ಸ್ವಾಗತ. ಹನಿಯೂರು ಕೆರೆಯಲ್ಲಿ ಗಂಗಾಪೂಜೆ.
3.45: ಸೊಣ್ಣೇನಹಳ್ಳಿ ಕ್ರಾಸ್‌ಗೆ ಆಗಮನ. ಜನಜಾಗೃತಿ ಸಭೆ. ನಂತರ ಸೀಡ್ ಫಾರ್ಮ್ ಮೂಲಕ ಬ್ಯಾತಕೆರೆ ಮೂಲಕ ಹೆಸರಘಟ್ಟ ಜಲಾಶಯಕ್ಕೆ ಆಗಮನ.
ಸಂಜೆ 6 ಗಂಟೆಗೆ ಡಾ. ಅಶ್ವತ್ಥ್ ಅವರಿಂದ ಸುಗಮಸಂಗೀತ.

ರಾಜ್ಯದಲ್ಲಿ ಹೊಸ ಇತಿಹಾಸ ರಚನೆ

ಅರ್ಕಾವತಿ ಪಾದಯಾತ್ರೆ-ದಿನ-1: ಸೆಪ್ಟೆಂಬರ್ 3, 2009
ರಾಜ್ಯದಲ್ಲಿ ನಂದಿಬೆಟ್ಟ ಮನೆಮಾತು. ಒಂದು ದಿನದ ಮೋಜಿನ ಪ್ರವಾಸಕ್ಕೆ ಹೇಳಿ ಮಾಡಿಸಿದ ತಾಣ. ಪ್ರೇಮಿಗಳಿಗಂತೂ ನೆಚ್ಚಿನ ವಾತಾವರಣ. ವರ್ಷದ ಬಹುತೇಕ ದಿನ ಮಂಜಿನಿಂದ ತುಂಬಿರುವ ನಂದಿಬೆಟ್ಟ, ಜನಪ್ರತಿನಿಧಿಗಳು, ಪರಿಸರವಾದಿಗಳು ಹಾಗೂ ಪರಿಸರ ಪ್ರೇಮಿಗಳ ಸಮೂಹದಲ್ಲಿ ಗುರುವಾರ ಮಿಂದೆತ್ತಿತ್ತು. ಅಷ್ಟೇಅಲ್ಲ, ರಾಜ್ಯದಲ್ಲಿ ಹೊಸ ಇತಿಹಾಸ ರಚನೆಗೆ ಸಾಕ್ಷಿಯಾಯಿತು.
ಅರ್ಕಾವತಿ ನದಿ ಸಂರಕ್ಷಣೆ ವೇದಿಕೆ ಅರ್ಕಾವತಿ ನದಿ ಉಳಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆಯ ಚಿತ್ರಣ ನಂದಿಬೆಟ್ಟದಲ್ಲಿ ಅನಾವರಣಗೊಂಡಿದ್ದು ಹೀಗೆ.
ಅರ್ಕಾವತಿ ಉಗಮಸ್ಥಾನದಲ್ಲಿ ಮಂಜು ತುಂಬಿದ ವಾತಾವರಣದಲ್ಲೇ ಗುರುವಾರ ಬೆಳಗ್ಗೆ 6.30ರಿಂದ ಗಂಗಾಪೂಜೆ ಆರಂಭಗೊಂಡಿತ್ತು. ಸುಮಾರು ಎರಡು ಗಂಟೆ ನಡೆದ ಗಂಗಾಪೂಜೆಯ ಅಂತ್ಯದಲ್ಲಿ, ಶಾಸಕರಾದ ಎಸ್. ಆರ್. ವಿಶ್ವನಾಥ್, ಎಸ್. ಮುನಿರಾಜು ಹಾಗೂ ಪರಿಸರವಾದಿ ಡಾ. ಅ.ನ. ಯಲ್ಲಪ್ಪರೆಡ್ಡಿ ಅರ್ಕಾವತಿಗೆ ಬಾಗಿನ ಅರ್ಪಿಸಿದರು. ಸಂಸದೀಯ ವ್ಯವಹಾರಗಳ ಸಚಿವ ಸುರೇಶ್‌ಕುಮಾರ್ 9.30ಕ್ಕೆ ಪಾದಯಾತ್ರೆಗೆ ಚಾಲನೆ ನೀಡಿದರು.
ಸಚಿವ ಸುರೇಶ್ ಕುಮಾರ್ ಪಾದಯಾತ್ರೆಗೆ ಚಾಲನೆ ನೀಡಿದಷ್ಟೇ ಅಲ್ಲ, 'ಹರಿಯಲಿ ಹರಿಯಲಿ ಅರ್ಕಾವತಿ ಹರಿಯಲಿ', 'ಅರ್ಕಾವತಿ ನದಿ ಪುನಶ್ಚೇತನ ಶೀಘ್ರ ಆಗಲಿ', 'ಬೇಕೇ ಬೇಕು ಅರ್ಕಾವತಿ ಬೇಕು' ಎಂಬ ಘೋಷಣೆಗಳನ್ನು ಕೂಗಿ ಪಾದಯಾತ್ರಿಗಳನ್ನು ಉತ್ತೇಜಿಸುತ್ತ, ಅತ್ಯಂತ ಉತ್ಸಾಹದಿಂದ ಸುಮಾರು 8 ಕಿಮೀ ಪಾದಯಾತ್ರೆ ಮಾಡಿದರು. ನಂತರ ಶಾಸಕರಾದ ಎಸ್.ಆರ್. ವಿಶ್ವನಾಥ್ ಹಾಗೂ ಎಸ್. ಮುನಿರಾಜು ನೇತೃತ್ವದಲ್ಲಿ ಪಾದಯಾತ್ರೆ ಮುಂದುವರಿಯಿತು.
ಪಕ್ಷಭೇಧ ಮರೆತು ರಾಜಕೀಯ ಮುಖಂಡರು, ಅರ್ಕಾವತಿ ಪುನಶ್ಚೇತನಕ್ಕೆ ರಚನೆಯಾಗಿರುವ ಸಂಘ-ಸಂಸ್ಥೆಗಳು, ಕರ್ನಾಟಕ ರಕ್ಷಾ ವೇದಿಕೆಯ ದೊಡ್ಡಬಳ್ಳಾಪುರ ಮತ್ತು ಚಿಕ್ಕಬಳ್ಳಾಪುರ ಘಟಕದ ಕಾರ್ಯಕರ್ತರು ಸೇರಿದಂತೆ ಅರ್ಕಾವತಿ ಉಗಮ ಸ್ಥಾನದಿಂದ ಸುಮಾರು 500ಕ್ಕೂ ಹೆಚ್ಚು ಜನರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇದರಿಂದ ನಂದಿಬೆಟ್ಟದ ರಸ್ತೆ ಸಂಪೂರ್ಣವಾಗಿ ಜನರಿಂದ ತುಂಬಿಹೋಗಿತ್ತು. ನಂದಿಬೆಟ್ಟದ ಇತಿಹಾಸದಲ್ಲೇ ಇಷ್ಟೊಂದು ಜನ ಸೇರಿದ್ದು ಇದೇ ಮೊದಲು ಎಂಬುದು ಸ್ಥಳೀಯರ ಮಾತಾಗಿತ್ತು.
ನದಿ ರಕ್ಷಣೆ-ಪುನಶ್ಚೇತನಕ್ಕಾಗಿ ಜನಪ್ರತಿನಿಧಿಗಳು, ಸಚಿವರು, ಪರಿಸರವಾದಿಗಳು ಒಂದುಗೂಡಿ ನಡೆಸಿದ ಪಾದಯಾತ್ರೆ ರಾಜ್ಯದ ಇತಿಹಾಸದಲ್ಲಿ ಇದೇ ಪ್ರಥಮ. ಇಂತಹ ಪ್ರಯತ್ನ ಕೆರೆ-ಕುಂಟೆ, ನದಿಗಳನ್ನು ಉಳಿಸಲು ಇತರೆ ಪ್ರದೇಶಗಳ ನಿವಾಸಿಗಳಿಗೆ ಮಾದರಿ.

ಯಾರು ಏನೆಂದರು?
ಮರಗಳನ್ನು ನೆಡಿ, ಕೆರೆಗಳನ್ನು ಕಟ್ಟಿ, ಪರಿಸರ ಬೆಳೆಸಿ ಎಂದು ಹಿಂದೆ ಹೇಳುತ್ತಿದ್ದರು. ಇಂದು, ಮರಗಳನ್ನು ಕಡಿ, ಕೆರೆಗಳನ್ನು ಮುಚ್ಚಿ, ನಿವೇಶನ ನಿರ್ಮಿಸಿ ಎಂದು ಇಂದು ಹೇಳುತ್ತಿದ್ದಾರೆ. ಬೆಂಗಳೂರಿನ ಜೀವನದಿ ಅರ್ಕಾವತಿ. ಈ ನದಿ ಉಳಿಸಿದರೆ, ಅಂತರ್ಜಲ ಹೆಚ್ಚಾಗುತ್ತದೆ. ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಅರ್ಕಾವತಿ ನದಿ ಉಳಿವಿಗೆ ಸರಕಾರ ಸರ್ವ ಪ್ರಯತ್ನವನ್ನೂ ಮಾಡಲಿದೆ. -ಸುರೇಶ್ ಕುಮಾರ್, ಕಾನೂನು ಸಚಿವ

ಅರ್ಕಾವತಿ ನದಿ ಸಂರಕ್ಷಣೆ ಹಾಗೂ ಪುನಶ್ಚೇತನಕ್ಕಾಗಿ ಪಕ್ಷಾತೀತವಾಗಿ ಈ ಪಾದಯಾತ್ರೆ ಮಾಡಲಾಗುತ್ತಿದೆ. ಕಾವೇರಿ ಮುಗಿದ ಮೇಲೆ ಬೆಂಗಳೂರಿಗೆ ನೀರಿನ ಬರ ಉಂಟಾಗುತ್ತದೆ. ಅದನ್ನು ನೀಗಿಸಲು ಅರ್ಕಾವತಿ ನದಿಯನ್ನು ಹರಿಸಬೇಕು. ಇದರಿಂದ ಅಂತರ್ಜಲ ವೃದ್ದಿಯಾಗಲಿದ್ದು, ಕೆಲವೇ ನೂರು ಅಡಿಗಳಲ್ಲಿ ರೈತರಿಗೆ ಕೊಳವೆ ಬಾವಿಯಲ್ಲಿ ನೀರು ಸಿಗುತ್ತದೆ. ನದಿ ಸಂರಕ್ಷಣೆಗೆ ಸರಕಾರದಿಂದ ಸದ್ಯವೇ ಉನ್ನತ ಮಟ್ಟದ ಸಮಿತಿ ರಚನೆಯಾಗಲಿದೆ. ಅರ್ಕಾವತಿ ನದಿ ಪುನಶ್ಚೇತನಕ್ಕೆ ಈ ಉಗಮಸ್ಥಾನದಲ್ಲಿ ನಾವೆಲ್ಲ ಶಪಥ ಮಾಡೋಣ. -ಎಸ್.ಆರ್. ವಿಶ್ವನಾಥ್, ಶಾಸಕ

ಅರ್ಕಾವತಿ ನದಿ ಉಳಿದರೆ ರೈತರ ಬಾಳು ಬೆಳಗುತ್ತದೆ. ಕೃಷಿಗೆ ನೀರು ಹೆಚ್ಚಿನ ಮಟ್ಟದಲ್ಲಿ ಲಭ್ಯವಾಗುತ್ತದೆ. ಈಗಾಗಲೇ 1000 ಅಡಿ ಕೊರೆಯಲಾಗುತ್ತದೆ. ನದಿ ಪುನಶ್ಚೇತನವಾದರೆ 1500 ಅಡಿ ಕೊರೆಯಬೇಕಾಗುತ್ತದೆ. ಆಗ ಸಿಗುವ ನೀರು ವಿಷಮಯವಾಗಿರುತ್ತದೆ. ಆದ್ದರಿಂದ ನಾವೆಲ್ಲ ಎಚ್ಚೆತ್ತು ಒತ್ತುವರಿ ತೆರವುಗೊಳಿಸಿ, ಅರ್ಕಾವತಿ ಹರಿಸಬೇಕು. -ಎಸ್. ಮುನಿರಾಜು, ಶಾಸಕ

ಭೂಮಿ ತಾಯಿಯ ಚರ್ಮವನ್ನು ಸುಲಿಯುತ್ತಿದ್ದೇವೆ. ಮೇಲ್ಪದರವನ್ನು ಘಾಸಿಗೊಳಿಸಿ, ಅಂತರ್ಜಲಕ್ಕೆ ಪೆಟ್ಟು ನೀಡುತ್ತಿದ್ದೇವೆ. ಇದು ಹೀಗೆ ಮುಂದುವರಿದರೆ, ಕುಡಿಯಲು ನೀರಿಗಾಗಿ ಹೋರಾಟ ಮಾಡಬೇಕಾಗುತ್ತದೆ. ಆದ್ದರಿಂದ, ಅರ್ಕಾವತಿ ನದಿ ಪುನಶ್ಚೇತನಗೊಳಿಸಿ, ಪರಿಸರ ಹಾಗೂ ಅಂತರ್ಜಲ ವೃದ್ಧಿಸಬೇಕಾದ್ದು ಅನಿವಾರ್ಯ. -ಡಾ. ಅ.ನ. ಯಲ್ಲಪ್ಪ ರೆಡ್ಡಿ

ಪಾದಯಾತ್ರೆ ಹೆಜ್ಜೆಗಳು- ದಿನ-1
ಬೆ. 6.30 ಗಂಟೆ: ಅರ್ಕಾವತಿ ಉಗಮಸ್ಥಾನದಿಂದ ಬೆಳಗ್ಗೆ 6.30ರಿಂದ ಗಂಗಾಪೂಜೆ. ಪಾದಯಾತ್ರೆ ನೆನಪಿಗೆ ಕಲ್ಲಿನ ಫಲಕ ಪ್ರತಿಷ್ಠಾಪನೆ.
10 ಗಂಟೆ: ಸಚಿವ ಸುರೇಶ್‌ಕುಮಾರ್ ಅವರಿಂದ ಪಾದಯಾತ್ರೆಗೆ ಚಾಲನೆ. ಸಚಿವರಿಂದ 8 ಕಿಮೀ ನಡಿಗೆ. ನಂತರ ಶಾಸಕರಾದ ವಿಶ್ವನಾಥ್ ಹಾಗೂ ಮುನಿರಾಜು ನೇತೃತ್ವದಲ್ಲಿ ಪಾದಯಾತ್ರೆ ಮುಂದುವರಿಕೆ.
11.30: ಹೆಗ್ಗಡಿ ಹಳ್ಳಿ ಕೆರೆಗೆ ಆಗಮನ. ಮಾರ್ಗಮಧ್ಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ದೊಡ್ಡಬಳ್ಳಾಪುರ ಘಟಕದ ಕಾರ್ಯಕರ್ತರಿಂದ ಪಾದಯಾತ್ರಿಗಳಿಗೆ ಸ್ವಾಗತ.
12.30 ಗಂಟೆ: ಸೀಗೇಹಳ್ಳಿ ಮೂಲಕ ಮೇಳೇಕೋಟೆಗೆ ಆಗಮನ. ಅಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರಿಂದ ಸ್ವಾಗತ. ಅರ್ಕಾವತಿ ನದಿ ಪುನಶ್ಚೇತನಕ್ಕೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಿವು ಮೂಡಿಸಲು ನಿರ್ಧಾರ.
2.00 ಗಂಟೆ: ಲಿಂಗನಹಳ್ಳಿ ಕ್ರಾಸ್‌ನಲ್ಲಿ ಅದ್ಧೂರಿ ಸ್ವಾಗತ. ರಸ್ತೆಯ ಇಕ್ಕೆಲಗಳಲ್ಲಿ ಬಾಳೆಕಂಬ ಕಟ್ಟಿ, ಹೂಮಾಲೆ ಹಾಕಲಾಗಿತ್ತು. ಪಾದಯಾತ್ರಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ಸ್ಥಳೀಯರು, ನದಿ ಪುನಶ್ಚೇತನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.
2.30 ಗಂಟೆ: ರಾಜಘಟ್ಟದಲ್ಲಿ ಗಾಂಧಿವಾದಿ ಶಂಕರಲಿಂಗೇಗೌಡರು ಸೈಕಲ್ ಮೇಲೆ ರಾಷ್ಟ್ರಧ್ವಜ ಹಾಗೂ ನಾಡ ಬಾವುಟವನ್ನು ಕಟ್ಟಿಕೊಂಡು ಬಂದು, ಪಾದಯಾತ್ರಿಗಳಿಗೆ ಸ್ವಾಗತ ಕೋರಿದರು. ಸ್ಥಳೀಯರು ನೂರಾರು ಸಂಖ್ಯೆಯಲ್ಲಿ ಹಾಜರಿದ್ದರು.
3.00 ಗಂಟೆ ರಾಜಘಟ್ಟದ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪಾದಯಾತ್ರಿಗಳು, ಅಲ್ಲಿ ಭೋಜನ ಮುಗಿಸಿದರು.
ಸಂ. 5 ಗಂಟೆ: ತಿಮ್ಮಸಂದ್ರದ ಮೂಲಕ ದೊಡ್ಡಬಳ್ಳಾಪುರಕ್ಕೆ ಪಾದಯಾತ್ರೆ ಆಗಮಿಸಿತು. ನಂತರ ಆಸ್ಪತ್ರೆ ವೃತ್ತದಲ್ಲಿ ಬೆಂಗಳೂರಿನ ಆದರ್ಶ ಸುಗಮ ಸಂಗೀತ ಅಕಾಡೆಮಿ ನೇತೃತ್ವದಲ್ಲಿ ಡಾ. ಶಿವಮೊಗ್ಗ ಸುಬ್ಬಣ್ಣ ಅವರಿಂದ ಪರಿಸರ ಗೀತೆಗಳ ಗಾಯನ ಹಾಗೂ ಜನಪ್ರತಿನಿಧಿಗಳು ಮತ್ತು ಸ್ಥಳೀಯರೊಂದಿಗೆ ಸಂವಾದ ನಡೆಯಿತು.

Wednesday, September 2, 2009

ಅರ್ಕಾವತಿ ನದಿ ಜಾಗೃತಿಗೆ ಪಾದಯಾತ್ರೆ

ಅರ್ಕಾವತಿ ನದಿ ಸಂರಕ್ಷಣೆ ಹಾಗೂ ಪುನಶ್ಚೇತನದ ಅಗತ್ಯ ಕುರಿತಂತೆ ನದಿ ಪಾತ್ರದಲ್ಲಿರುವ ಹಳ್ಳಿ ಹಾಗೂ ಪಟ್ಟಣಗಳ ಜನತೆಯಲ್ಲಿ ಅರಿವು ಮೂಡಿಸುವ ಸಲುವಾಗಿ ರಾಜಕೀಯ ಮುಖಂಡರು, ಪರಿಸರವಾದಿಗಳು, ಸ್ವಾಮೀಜಿಗಳು, ಸ್ಥಳೀಯ ಸಂಘ-ಸಂಸ್ಥೆಗಳು, ಅರ್ಕಾವತಿ ನದಿ ಪುನಶ್ಚೇತನಕ್ಕೆ ಈಗಾಗಲೇ ಸಾಕಷ್ಟು ಪ್ರಯತ್ನಪಡುತ್ತಿರುವ ಸಂಘಟನೆಗಳ ಕಾರ್ಯಕರ್ತರು ಸೆಪ್ಟೆಂಬರ 3ರಿಂದ 6ರವರೆಗೆ ನಂದಿಬೆಟ್ಟದ ಅರ್ಕಾವತಿ ಉಗಮಸ್ಥಾನದಿಂದ ತಿಪ್ಪಗೊಂಡನಹಳ್ಳಿ ಜಲಾಶಯದವರೆಗೆ ಪಾದಯಾತ್ರೆ ಮಾಡಲಿದ್ದಾರೆ.

ಅರ್ಕಾವತಿ ನದಿ ಪುನಶ್ಚೇತನಕ್ಕೆ ಸರಕಾರದಿಂದ ಒಂದು ಸಮಿತಿ ಅಥವಾ ಪ್ರಾಧಿಕಾರದ ರಚನೆ ಕುರಿತಂತೆ ಈಗಾಗಲೇ ಸಾಕಷ್ಟು ಬಾರಿ ಪ್ರಸ್ತಾಪಿಸಲಾಗಿದೆ. ಜತೆಗೆ, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿಯನ್ನೂ ನೀಡಲಾಗಿದೆ. ಇದು ನನಸಾಗುವ ಕಾಲ ಹತ್ತಿರದಲ್ಲೇ ಇದೆ. ಈ ಸಂದರ್ಭದಲ್ಲಿ ಪಕ್ಷಭೇಧ ಮರೆತು ಜನಪ್ರತಿನಿಧಿಗಳು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿರುವುದು ಶ್ಲಾಘನೀಯ. ಅದರಲ್ಲೂ ಆಡಳಿತ ಪಕ್ಷದ ಶಾಸಕರು ಸಕ್ರಿಯವಾಗಿರುವುದು ನದಿ ಪುನಶ್ಚೇತನದ ದಿಕ್ಕಿನತ್ತ ಮಹತ್ವದ ಹೆಜ್ಜೆಯಾಗಿದೆ.
ಶಾಸಕ ಎಸ್‌.ಆರ್‌. ವಿಶ್ವನಾಥ್‌ ಪಾದಯಾತ್ರೆ ಮಾಡುವುದಾಗಿ ಈ ಹಿಂದೆಯೇ ಹೇಳಿದ್ದರು. ಅರ್ಕಾವತಿ ನದಿ ಪುನಶ್ಚೇತನದ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಲು ಉಗಮಕ್ಷೇತ್ರದಿಂದ ಪಾದಯಾತ್ರೆ ಮಾಡುವುದಾಗಿ ‘ಅರ್ಕಾವತಿ ಏಕೀ ದುರ್ಗತಿ’ ಲೇಖನ ಮಾಲಿಕೆಗೆ ಪ್ರತಿಕ್ರಿಯೆ ನೀಡಿದ್ದರು. ಇದಕ್ಕೆ ಶಾಸಕ ಎಸ್‌. ಮುನಿರಾಜು ಕೂಡ ಬೆಂಬಲ ನೀಡಿದ್ದರು. ಈ ಮಾತನ್ನು ಇವರಿಬ್ಬರೂ ಇದೀಗ ಪೂರೈಸಲು ಮುಂದಾಗಿದ್ದಾರೆ. ಜತೆಗೆ ದೊಡ್ಡಬಳ್ಳಾಪುರದ ಶಾಸಕ ನರಸಿಂಹಸ್ವಾಮಿ ಕೂಡ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಗಮನಾರ್ಹ. ದೊಡ್ಡಬಳ್ಳಾಪುರದ ಪ್ರಮುಖ ಕೆರೆ ಹಾಗೂ ಅರ್ಕಾವತಿ ಕ್ಷೇತ್ರದ ಜೀವಾಳ ನಾಗರಕೆರೆಯನ್ನು ಮುಚ್ಚಿ ಬಸ್‌ ನಿಲ್ದಾಣ ಮಾಡುವುದಾಗಿ ಹೇಳುತ್ತಿರುವ ನರಸಿಂಹಸ್ವಾಮಿ, ಪಾದಯಾತ್ರೆಯಲ್ಲಿರುತ್ತಾರಂತೆ. ಅಂದರೆ ನಾಗರಕೆರೆ ಕೆರೆಯಾಗಿಯೇ ಉಳಿದೀತೇ? ಈ ಪ್ರಶ್ನೆಯನ್ನು ಅವರನ್ನು ನೇರವಾಗಿ ಕೇಳಬೇಕಿದೆ, ಅದೇ ಪಾದಯಾತ್ರೆಯಲ್ಲಿ.
ನಾಲ್ಕು ದಿನಗಳ ಈ ಪಾದಯಾತ್ರೆ ಸಾಧ್ಯವಾಗುತ್ತಿರುವುದು ಎಸ್‌.ಆರ್‌. ವಿಶ್ವನಾಥ್‌ ಅವರ ಕಾಳಜಿಯಿಂದ. ಈ ಪಾದಯಾತ್ರೆಗೆ ಎಲ್ಲ ರೀತಿಯ ಸಂಘಟನೆಗೆ ಅವರೇ ಕಾರಣ. ಎಲ್ಲರನ್ನೂ ಒಂದುಗೂಡಿಸಿ ಪಕ್ಷಾತೀತವಾಗಿ, ರಾಜಕೀಯ ಸೇರಿಸದೆ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸರಕಾರ ಕೂಡಲೇ ಇತ್ತ ಗಮನಹರಿಸಿ ಕಾರ್ಯೋನ್ಮುಖವಾಗಬೇಕೆಂಬ ಉದ್ದೇಶದೊಂದಿಗೆ ಪಾದಯಾತ್ರೆ ಆಯೋಜಿಸಿದ್ದಾರೆ. ಇದಕ್ಕೆ ಎಲ್ಲ ವಲಯದ ಮುಖಂಡರೂ ಸೇರಿಕೊಂಡಿರುವುದು ಒಳ್ಳೆಯ ಬೆಳವಣಿಗೆ.
ಪರಿಸರವಾದಿ ಡಾ. ಅ.ನ. ಯಲ್ಲಪ್ಪರೆಡ್ಡಿ, ಪರಿಸರ ರಕ್ಷಣೆ ಹೋರಾಟಗಾರ ಸುರೇಶ್‌ ಹೆಬ್ಳೀಕರ್‌ ಸೇರಿದಂತೆ ದೊಡ್ಡಬಳ್ಳಾಪುರದ ಹಲವು ಸಂಘಟನೆಗಳ ಮುಖಂಡರು ಈ ಪಾದಯಾತ್ರೆಯಲ್ಲಿರುತ್ತಾರೆ. ಅಲ್ಲದೆ, ಹಲವು ಮಠಗಳ ಸ್ವಾಮೀಜಿಗಳೂ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿರುವುದು ಗಮನಾರ್ಹವಾಗಿದೆ. ಅಷ್ಟೇ ಅಲ್ಲ, ಸುಗಮಸಂಗೀತ ಕ್ಷೇತ್ರದ ದಿಗ್ಗಜರೂ ಇದರಲ್ಲಿ ಭಾಗವಹಿಸುತ್ತಿರುವುದು ಸಂತೋಷಕರ. ಈ ಪಾದಯಾತ್ರೆ ನಾನು ಸಂಪೂರ್ಣವಾಗಿ ಭಾಗವಹಿಸುತ್ತಿದ್ದು, ಸಮಗ್ರ ವಿವರವನ್ನು ನಿಮ್ಮ ಮುಂದಿಡಲಿದ್ದೇನೆ.
ಬೆಂಗಳೂರಿನ ಆದರ್ಶ ಸುಗಮ ಸಂಗೀತ ಅಕಾಡೆಮಿ ನೇತೃತ್ವದಲ್ಲಿ ದೊಡ್ಡಬಳ್ಳಾಪುರದ ಅರ್ಕಾವತಿ ಕ್ಷೇತ್ರ (ಸೆ.೩)ದಲ್ಲಿ ಡಾ. ಶಿವಮೊಗ್ಗ ಸುಬ್ಬಣ್ಣ, ಹೆಸರಘಟ್ಟದಲ್ಲಿ (ಸೆ.೪) ಡಾ. ಸಿ. ಅಶ್ವತ್ಥ್‌ ಹಾಗೂ ಸೊಂಡೆಕೊಪ್ಪದಲ್ಲಿ (ಸೆ.೫) ವೈ.ಕೆ. ಮುದ್ದುಕೃಷ್ಣ ಅವರ ಜತೆ ಕಿಕ್ಕೇರಿ ಕೃಷ್ಣಮೂರ್ತಿ ಅವರ ತಂಡ ಸಂಜೆಯ ಸಮಯದಲ್ಲಿ ಸಂಗೀತ ಸುಧೆ ಹರಿಸಲಿದೆ.
ಅರ್ಕಾವತಿ ಉಗಮಸ್ಥಾನ ನಂದಿಬೆಟ್ಟದಿಂದ ಆರಂಭವಾಗುವ ಪಾದಯಾತ್ರೆ, ಹೆಗ್ಗಡಿಹಳ್ಳಿ, ಸೀಗೆಹಳ್ಳಿ, ಮೇಳೆಕೋಟೆ, ಬೀಡಿಕೆರೆ, ರಾಜಘಟ್ಟ, ತಿಮ್ಮಸಂದ್ರ, ದೊಡ್ಡಬಳ್ಳಾಪುರ ಡಿಕ್ರಾಸ್, ಅರ್ಕಾವತಿ ಕ್ಷೇತ್ರವನ್ನು ತಲುಪುತ್ತದೆ. ಮಾರನೆ ದಿನ ಅಂದರೆ ಸೆಪ್ಟೆಂಬರ‍್ ೪ರಂದು ಬೆಳಗ್ಗೆ ಅರ್ಕಾವತಿ ಕ್ಷೇತ್ರದಿಂದ ನಾಗರಕೆರೆ ಏರಿ ಮೂಲಕ ಸಾಗಿ, ಬಾಶೆಟ್ಟಿಹಳ್ಳಿ ಕ್ರಾಸ್‌, ವೀರಾಪುರ, ಚಿಕ್ಕ ತುಮಕೂರು, ಮಜರಾ ಹೊಸಹಳ್ಳಿ, ಜಿಂಕೆ ಬಚ್ಚಹಳ್ಳಿ, ದೊಡ್ಡ ತುಮಕೂರು, ಗೌಡಹಳ್ಳಿ, ಹನಿಯೂರು ಮೂಲಕ ಹೆಸರಘಟ್ಟ ಜಲಾಶಯ ತಲುಪಲಿದೆ. ಮುಂದಿನ ದಿನ ಅಂದರೆ ಸೆಪ್ಟೆಂಬರ‍್ ೫ರಂದು ಹೆಸರಘಟ್ಟದಿಂದ ತಿರುಮಲಾಪುರ, ಹೊರಳಿ ಚಿಕ್ಕನಹಳ್ಳಿ, ತಬರನಹಳ್ಳಿ, ಮುನಿಯಪ್ಪನಪಾಳ್ಯ, ಆಲೂರು, ಹೆಗ್ಗಡೆದೇವನಪುರ, ಮಾಕಳಿ, ಅಡಕಮಾರನಹಳ್ಳಿ ಗೇಟ್‌, ರಾವುತ್ತನಹಳ್ಳಿ ಕ್ರಾಸ್‌, ಗೌಡಹಲ್ಳಿ ಕಾಲನಿ, ರಾವುತ್ತನಹಳ್ಳಿ ಮೂಲಕ ಸೊಂಡೇಕೊಪ್ಪ ತಲುಪಲಿದೆ. ಕೊನೆಯ ದಿನ ಅಂದರೆ ಸೆಪ್ಟೆಂಬರ‍್ ೬ರಂದು ಸೊಂಡೇಕೊಪ್ಪದಿಂದ ಮಲ್ಲಸಂದ್ರ, ವರ್ತೂರು ಕೆರೆ, ಬೈಚನಗುಪ್ಪೆ ಗೇಟ್, ದೇವಮಾಚನಹಳ್ಳಿ, ಮಾರೇನಹಳ್ಳಿ, ಚೋಳನಾಯಕನಹಳ್ಳಿ ಮೂಲಕ ತಿಪ್ಪಗೊಂಡನಹಳ್ಳಿ ತಲುಪಲಿದೆ.
ಅರ್ಕಾವತಿ ಉಗಮಸ್ಥಾನದಿಂದ ಪಂಚಕಳಸಗಳಲ್ಲಿ ನೀರನ್ನು ತೆಗೆದುಕೊಂಡು ತಿಪ್ಪಗೊಂಡನಹಳ್ಳಿಯಲ್ಲಿ ಅದನ್ನು ಸಮರ್ಪಿಸಲಾಗುತ್ತದೆ. ಅರ್ಕಾವತಿಯನ್ನು ಹರಿಸುವ ಉದ್ದೇಶವನ್ನು ಇದು ಸಾರುತ್ತದೆ.
ಪರಿಸರ ಕಾಳಜಿಯುಳ್ಳ ಮನಸ್ಸುಳ್ಳ ಎಲ್ಲ ನಾಗರಿಕರು ಈ ಪಾದಯಾತ್ರೆಯಲ್ಲಿ ಭಾಗವಹಿಸಿ, ಜಾಗೃತಿ ಮೂಡಿಸಲಿ ಎಂಬುದೇ ಆಶಯ.